AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಡೇರಿ ಸ್ಥಳಾಂತರ ವಿಚಾರಕ್ಕೆ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ.. ಕಾರ್ಯದರ್ಶಿ ಸೇರಿ ಹಲವರಿಗೆ ಗಾಯ

ಡೇರಿ ಸ್ಥಳಾಂತರ ಮಾಡುವ ವಿಚಾರಕ್ಕೆ JDS, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿರುವ ಘಟನೆ ಹಾಸನ ತಾಲೂಕಿನ ಶಂಖ ಗ್ರಾಮದಲ್ಲಿ ನಡೆದಿದೆ.

ಹಾಸನದಲ್ಲಿ ಡೇರಿ ಸ್ಥಳಾಂತರ ವಿಚಾರಕ್ಕೆ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ.. ಕಾರ್ಯದರ್ಶಿ ಸೇರಿ ಹಲವರಿಗೆ ಗಾಯ
JDS, BJP ಕಾರ್ಯಕರ್ತರ ನಡುವೆ ಮಾರಾಮಾರಿ
ಆಯೇಷಾ ಬಾನು
|

Updated on:Mar 11, 2021 | 12:21 PM

Share

ಹಾಸನ: ಡೇರಿ ಸ್ಥಳಾಂತರ ಮಾಡುವ ವಿಚಾರಕ್ಕೆ JDS, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿರುವ ಘಟನೆ ಹಾಸನ ತಾಲೂಕಿನ ಶಂಖ ಗ್ರಾಮದಲ್ಲಿ ನಡೆದಿದೆ. ಗಲಾಟೆಯಲ್ಲಿ ಡೇರಿ ಕಾರ್ಯದರ್ಶಿ ಉಮೇರಾ ಭಾನು, ಸಹಕಾರ ಸಂಘ ಸಹಾಯಕ ಅಭಿವೃದ್ಧಿ ಅಧಿಕಾರಿ ಸುನಿಲ್, ಬಿಜೆಪಿ ಬೆಂಬಲಿತ ಜಬಿಉಲ್ಲಾ ಷರೀಫ್ ಸೇರಿದಂತೆ ಹಲವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

5 ವರ್ಷದಿಂದ ಖಾಸಗಿ ಕಟ್ಟಡದಲ್ಲಿ ಮಹಿಳಾ ಹಾಲಿನ ಡೇರಿ ನಡೆಸಲಾಗುತ್ತಿತ್ತು. ಈ ಕಟ್ಟಡ ಜೆಡಿಎಸ್ ಬೆಂಬಲಿತ ಉಮೇರಾ ಭಾನುಗೆ ಸೇರಿದ ಕಟ್ಟಡವಾಗಿದೆ. ಮಹಿಳಾ ಹಾಲಿನ ಡೇರಿಯನ್ನು ಖಾಸಗಿ ಕಟ್ಟಡದಿಂದ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಸ್ಥಳಾಂತರಿಸಲು ಬಿಜೆಪಿ ಕಾರ್ಯಕರ್ತರ ಒತ್ತಾಯಿಸಿದ್ದರು. ಜಿಲ್ಲಾ ಸಹಕಾರ ಸಂಘಗಳ ಸಹಾಯಕ ಅಭಿವೃದ್ಧಿ ಅಧಿಕಾರಿ ಸುನೀಲ್ ಮೂಲಕ ಕಟ್ಟಡ ವರ್ಗಾವಣೆ ಮಾಡಿಸಲು ಬಿಜೆಪಿ ಕಾರ್ಯಕರ್ತರು ಮುಂದಾಗಿದ್ದಾರೆ. ಈ ವೇಳೆ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಮಧ್ಯೆ ಗಲಾಟೆ ಶುರುವಾಗಿದ್ದು ಕೊನೆಗೆ ದೊಣ್ಣೆ, ಬಡಿಗೆಗಳಿಂದ ಹೊಡೆದಾಡಿಕೊಂಡಿದ್ದಾರೆ. ಗಲಾಟೆ ಬಳಿಕ ಕೊನೆಗೂ ಬಿಜೆಪಿ ಕಾರ್ಯಕರ್ತರು ಗ್ರಾಮ ಪಂಚಾಯಿತಿ ಕಚೇರಿಗೆ ಡೇರಿಯನ್ನು ಸ್ಥಳಾಂತರ ಮಾಡಿದ್ದಾರೆ.

ಈ ಮಾರಾಮಾರಿಯಲ್ಲಿ ಡೇರಿ ಕಾರ್ಯದರ್ಶಿ ಉಮೇರಾ ಭಾನು, ಸಹಕಾರ ಸಂಘ ಸಹಾಯಕ ಅಭಿವೃದ್ಧಿ ಅಧಿಕಾರಿ ಸುನಿಲ್, ಬಿಜೆಪಿ ಬೆಂಬಲಿತ ಜಬಿಉಲ್ಲಾ ಷರೀಫ್ ಸೇರಿದಂತೆ ಹಲವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಜೆಡಿಎಸ್ ಹಾಗೂ ಬಿಜೆಪಿ ಎರಡೂ ಪಕ್ಷದ ಕಾರ್ಯಕರ್ತರ ಮೇಲೆ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನದಲ್ಲಿ ರೇವಣ್ಣ, ಪ್ರೀತಂಗೌಡ ಮಧ್ಯೆ ಕೋಲ್ಡ್ ವಾರ್ ಇನ್ನು ಶಂಖ ಗ್ರಾಮದಲ್ಲಿನ ಡೇರಿ ಸ್ಥಳಾಂತರಕ್ಕೆ ಬಿಜೆಪಿ ಶಾಸಕ ಪ್ರೀತಂಗೌಡ ಸೂಚಿಸಿದ್ದರು. ಶಾಸಕರ ಸೂಚನೆ ಮೇರೆಗೆ ಡೇರಿ ಸ್ಥಳಾಂತರಿಸಲಾಗಿತ್ತು ಎಂದು ತಿಳಿದು ಬಂದಿದೆ. ಕಾನೂನು ಬಾಹಿರವಾಗಿ ಡೇರಿ ಸ್ಥಳಾಂತರಿಸಲಾಗಿದೆ ಎಂದು ಶಂಖ ಗ್ರಾಮದ ಕೆಲವರು ಆರೋಪಿಸಿದ್ದಾರೆ. ಜೊತೆಗೆ ಡೇರಿ ಸ್ಥಳಾಂತರ ಬೆನ್ನಲ್ಲೇ ಹಾಲು ಪಡೆಯದಂತೆ ಹಾಸನ ಹಾಲು ಒಕ್ಕೂಟದಿಂದ ಆದೇಶ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು ಹೆಚ್​.ಡಿ.ರೇವಣ್ಣ ಒತ್ತಡದಿಂದ ಹಾಲು ಖರೀದಿಸುತ್ತಿಲ್ಲ ಎಂದು ಶಂಖ ಗ್ರಾಮದ ಕೆಲವರು ರೇವಣ್ಣ ವಿರುದ್ಧ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಜೈಶ್ರೀರಾಮ್ ಘೋಷಣೆ ಕೂಗಿದಕ್ಕೆ ಉಂಟಾಯ್ತು ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ, ಪೊಲೀಸರಿಂದ ಲಾಠಿ ಚಾರ್ಜ್

Published On - 11:44 am, Thu, 11 March 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ