AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಡೇರಿ ಸ್ಥಳಾಂತರ ವಿಚಾರಕ್ಕೆ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ.. ಕಾರ್ಯದರ್ಶಿ ಸೇರಿ ಹಲವರಿಗೆ ಗಾಯ

ಡೇರಿ ಸ್ಥಳಾಂತರ ಮಾಡುವ ವಿಚಾರಕ್ಕೆ JDS, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿರುವ ಘಟನೆ ಹಾಸನ ತಾಲೂಕಿನ ಶಂಖ ಗ್ರಾಮದಲ್ಲಿ ನಡೆದಿದೆ.

ಹಾಸನದಲ್ಲಿ ಡೇರಿ ಸ್ಥಳಾಂತರ ವಿಚಾರಕ್ಕೆ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ.. ಕಾರ್ಯದರ್ಶಿ ಸೇರಿ ಹಲವರಿಗೆ ಗಾಯ
JDS, BJP ಕಾರ್ಯಕರ್ತರ ನಡುವೆ ಮಾರಾಮಾರಿ
ಆಯೇಷಾ ಬಾನು
|

Updated on:Mar 11, 2021 | 12:21 PM

Share

ಹಾಸನ: ಡೇರಿ ಸ್ಥಳಾಂತರ ಮಾಡುವ ವಿಚಾರಕ್ಕೆ JDS, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿರುವ ಘಟನೆ ಹಾಸನ ತಾಲೂಕಿನ ಶಂಖ ಗ್ರಾಮದಲ್ಲಿ ನಡೆದಿದೆ. ಗಲಾಟೆಯಲ್ಲಿ ಡೇರಿ ಕಾರ್ಯದರ್ಶಿ ಉಮೇರಾ ಭಾನು, ಸಹಕಾರ ಸಂಘ ಸಹಾಯಕ ಅಭಿವೃದ್ಧಿ ಅಧಿಕಾರಿ ಸುನಿಲ್, ಬಿಜೆಪಿ ಬೆಂಬಲಿತ ಜಬಿಉಲ್ಲಾ ಷರೀಫ್ ಸೇರಿದಂತೆ ಹಲವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

5 ವರ್ಷದಿಂದ ಖಾಸಗಿ ಕಟ್ಟಡದಲ್ಲಿ ಮಹಿಳಾ ಹಾಲಿನ ಡೇರಿ ನಡೆಸಲಾಗುತ್ತಿತ್ತು. ಈ ಕಟ್ಟಡ ಜೆಡಿಎಸ್ ಬೆಂಬಲಿತ ಉಮೇರಾ ಭಾನುಗೆ ಸೇರಿದ ಕಟ್ಟಡವಾಗಿದೆ. ಮಹಿಳಾ ಹಾಲಿನ ಡೇರಿಯನ್ನು ಖಾಸಗಿ ಕಟ್ಟಡದಿಂದ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಸ್ಥಳಾಂತರಿಸಲು ಬಿಜೆಪಿ ಕಾರ್ಯಕರ್ತರ ಒತ್ತಾಯಿಸಿದ್ದರು. ಜಿಲ್ಲಾ ಸಹಕಾರ ಸಂಘಗಳ ಸಹಾಯಕ ಅಭಿವೃದ್ಧಿ ಅಧಿಕಾರಿ ಸುನೀಲ್ ಮೂಲಕ ಕಟ್ಟಡ ವರ್ಗಾವಣೆ ಮಾಡಿಸಲು ಬಿಜೆಪಿ ಕಾರ್ಯಕರ್ತರು ಮುಂದಾಗಿದ್ದಾರೆ. ಈ ವೇಳೆ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಮಧ್ಯೆ ಗಲಾಟೆ ಶುರುವಾಗಿದ್ದು ಕೊನೆಗೆ ದೊಣ್ಣೆ, ಬಡಿಗೆಗಳಿಂದ ಹೊಡೆದಾಡಿಕೊಂಡಿದ್ದಾರೆ. ಗಲಾಟೆ ಬಳಿಕ ಕೊನೆಗೂ ಬಿಜೆಪಿ ಕಾರ್ಯಕರ್ತರು ಗ್ರಾಮ ಪಂಚಾಯಿತಿ ಕಚೇರಿಗೆ ಡೇರಿಯನ್ನು ಸ್ಥಳಾಂತರ ಮಾಡಿದ್ದಾರೆ.

ಈ ಮಾರಾಮಾರಿಯಲ್ಲಿ ಡೇರಿ ಕಾರ್ಯದರ್ಶಿ ಉಮೇರಾ ಭಾನು, ಸಹಕಾರ ಸಂಘ ಸಹಾಯಕ ಅಭಿವೃದ್ಧಿ ಅಧಿಕಾರಿ ಸುನಿಲ್, ಬಿಜೆಪಿ ಬೆಂಬಲಿತ ಜಬಿಉಲ್ಲಾ ಷರೀಫ್ ಸೇರಿದಂತೆ ಹಲವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಜೆಡಿಎಸ್ ಹಾಗೂ ಬಿಜೆಪಿ ಎರಡೂ ಪಕ್ಷದ ಕಾರ್ಯಕರ್ತರ ಮೇಲೆ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನದಲ್ಲಿ ರೇವಣ್ಣ, ಪ್ರೀತಂಗೌಡ ಮಧ್ಯೆ ಕೋಲ್ಡ್ ವಾರ್ ಇನ್ನು ಶಂಖ ಗ್ರಾಮದಲ್ಲಿನ ಡೇರಿ ಸ್ಥಳಾಂತರಕ್ಕೆ ಬಿಜೆಪಿ ಶಾಸಕ ಪ್ರೀತಂಗೌಡ ಸೂಚಿಸಿದ್ದರು. ಶಾಸಕರ ಸೂಚನೆ ಮೇರೆಗೆ ಡೇರಿ ಸ್ಥಳಾಂತರಿಸಲಾಗಿತ್ತು ಎಂದು ತಿಳಿದು ಬಂದಿದೆ. ಕಾನೂನು ಬಾಹಿರವಾಗಿ ಡೇರಿ ಸ್ಥಳಾಂತರಿಸಲಾಗಿದೆ ಎಂದು ಶಂಖ ಗ್ರಾಮದ ಕೆಲವರು ಆರೋಪಿಸಿದ್ದಾರೆ. ಜೊತೆಗೆ ಡೇರಿ ಸ್ಥಳಾಂತರ ಬೆನ್ನಲ್ಲೇ ಹಾಲು ಪಡೆಯದಂತೆ ಹಾಸನ ಹಾಲು ಒಕ್ಕೂಟದಿಂದ ಆದೇಶ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು ಹೆಚ್​.ಡಿ.ರೇವಣ್ಣ ಒತ್ತಡದಿಂದ ಹಾಲು ಖರೀದಿಸುತ್ತಿಲ್ಲ ಎಂದು ಶಂಖ ಗ್ರಾಮದ ಕೆಲವರು ರೇವಣ್ಣ ವಿರುದ್ಧ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಜೈಶ್ರೀರಾಮ್ ಘೋಷಣೆ ಕೂಗಿದಕ್ಕೆ ಉಂಟಾಯ್ತು ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ, ಪೊಲೀಸರಿಂದ ಲಾಠಿ ಚಾರ್ಜ್

Published On - 11:44 am, Thu, 11 March 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್