AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ.ವಿ. ಮೋಹನ್​ದಾಸ್‌ ಪೈ ಅವರಿಗೆ ರಾಣಿ ಚೆನ್ನಮ್ಮ ವಿವಿ ಗೌರವ ಡಾಕ್ಟರೇಟ್‌ ಪದವಿ ಪ್ರಧಾನ

ಮಣಿಪಾಲ್‌ ಗ್ಲೋಬಲ್‌ ಎಜುಕೇಷನ್‌ ಸಂಸ್ಥೆಯ ಅಧ್ಯಕ್ಷ ಟಿ.ವಿ.ಮೋಹನ್‌ದಾಸ್‌ ಪೈ ಅವರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ ಪದವಿಯನ್ನು ಪ್ರಧಾನ ಮಾಡಿದರು.

ಟಿ.ವಿ. ಮೋಹನ್​ದಾಸ್‌ ಪೈ ಅವರಿಗೆ ರಾಣಿ ಚೆನ್ನಮ್ಮ ವಿವಿ ಗೌರವ ಡಾಕ್ಟರೇಟ್‌ ಪದವಿ ಪ್ರಧಾನ
ಮೋಹನ್​ದಾಸ್ ಪೈ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ
TV9 Web
| Edited By: |

Updated on:Apr 06, 2022 | 9:09 PM

Share

ಬೆಂಗಳೂರು: ಮಣಿಪಾಲ್‌ ಗ್ಲೋಬಲ್‌ ಎಜುಕೇಷನ್‌ ಸಂಸ್ಥೆಯ ಅಧ್ಯಕ್ಷ ಟಿ.ವಿ.ಮೋಹನ್‌ದಾಸ್‌ ಪೈ ಅವರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ ಪದವಿಯನ್ನು ಪ್ರಧಾನ ಮಾಡಿದರು. ವಿಶ್ವವಿದ್ಯಾಲಯದ ಕುಲಪತಿಯೂ ಆಗಿರುವ ರಾಜ್ಯಪಾಲ ವಜುಭಾಯಿ ವಾಲ ಅವರು ಪ್ರಧಾನ ಮಾಡಿದರು.

ರಾಜಭವನದಲ್ಲಿ ಸೋಮವಾರ ನಡೆದ ಸರಳ ಸಮಾರಂಭದಲ್ಲಿ ವಜುಭಾಯಿ ವಾಲ, ಪೈ ಅವರಿಗೆ ಈ ಪದವಿಯನ್ನು ಪ್ರಧಾನ ಮಾಡಿ ಮಾತನಾಡಿದರು. ಎಲ್ಲರಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು. ಈ ನಿಟ್ಟಿನಲ್ಲಿ ಪೈ ಅವರ ಸೇವೆ ಅನುಕರಣೀಯವಾಗಿದೆ ಎಂದರು.

ರಾಜ್ಯ ಉನ್ನತ ಶಿಕ್ಷಣ ಸಚಿವರು ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿರುವ ಮೋಹನ್‌ದಾಸ್‌ ಪೈ ಅವರು, ಇನ್ಫೋಸಿಸ್‌ನಂಥ ಪ್ರತಿಷ್ಠಿತ ಸಂಸ್ಥೆಯ ಮುಖ್ಯ ಹಣಕಾಸು ಅಧಿಕಾರಿಯಾಗಿ ಆ ಕಂಪನಿಗೆ ಆರ್ಥಿಕ ಸದೃಢತೆಯನ್ನು ತಂದುಕೊಟ್ಟವರು. ಅವರಿಗೆ ಗೌರವ ಡಾಕ್ಟರೇಟ್‌ ಪದವಿ ಸಲ್ಲುತ್ತಿರುವುದು ಸಂತೋಷ ಉಂಟು ಮಾಡಿದೆ ಎಂದರು.

ಮೋಹನ್‌ದಾಸ್‌ ಪೈ, ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿ ಮಾತನಾಡಿದರು. ಶೈಕ್ಷಣಿಕವಾಗಿ ರಾಜ್ಯವು ಉನ್ನತ ಮಟ್ಟದಲ್ಲೇ ಇದ್ದರೂ ಸಂಶೋಧನೆಗೆ ಇನ್ನಷ್ಟು ಒತ್ತು ನೀಡಬೇಕು.‌ ಕೊನೆಯಪಕ್ಷ 100 ಕೋಟಿ ರೂಪಾಯಿಗಳಷ್ಟು ಮೊತ್ತವನ್ನಾದರೂ ಸಂಶೋಧನಾ ಕ್ಷೇತ್ರಕ್ಕೆ ಮೀಸಲಿಡಬೇಕು. ಪ್ರತಿಭಾವಂತ ಸಂಶೋಧನಾ ವಿದ್ಯಾರ್ಥಿಗಳಿಗೆ ಎಲ್ಲ ರೀತಿಯ ಆರ್ಥಿಕ ಸಹಕಾರವನ್ನು ಒದಗಿಸಬೇಕು. ಆಗ ಮಾತ್ರ ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ಬರುತ್ತದೆ ಹಾಗೂ ದೇಶದ ಅಭಿವೃದ್ಧಿಗೆ ವೇಗ ಬರುತ್ತದೆ ಎಂದರು.

ಶಾಲೆ-ಕಾಲೇಜುಗಳಲ್ಲಿ ಕಲಿಯುವ ಮಕ್ಕಳಿಗೆ ಎಲ್ಲ ಸೌಲಭ್ಯಗಳನ್ನು ಉದಾರವಾಗಿ ಒದಗಿಸಬೇಕು. ಮೂಲಸೌಕರ್ಯಗಳನ್ನು ಪರಿಣಾಮಕಾರಿ ಒದಗಿಸಬೇಕು ಎಂದು ಪೈ ಮನವಿ ಮಾಡಿದರು. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ರಾಮಚಂದ್ರ ಗೌಡ, ಕುಲಸಚಿವ ಪ್ರೊ.ಬಸವರಾಜ್‌ ಪದ್ಮಶಾಲಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Published On - 10:33 pm, Mon, 11 January 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್