AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tv9 Digital Live | ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

ಕಿಡಿಗೇಡಿ ಕೈದಿಗಳು, ಮಾಮೂಲಿ ಕೈದಿಗಳನ್ನು ಉತ್ತೇಜಿಸುತ್ತಾರೆ. ಇಂತಹ ಕೃತ್ಯಕ್ಕೆ ಕ್ರಮ ಕೈಗೊಳ್ಳಬೇಕಿದೆ. ಜೈಲಿನ ಒಳಗೆ ಏನು ನಡೆಯುತ್ತಿದೆ ಎಂಬುದರ ಕುರಿತಾಗಿ ಮೇಲಧಿಕಾರಿಗಳು ತಿಳಿದುಕೊಳ್ಳಬೇಕು.

Tv9 Digital Live | ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ
ಆ್ಯಂಕರ್ ಮಾಲ್ತೇಶ್ ಜೊತೆ Tv9 ಕ್ರೈಂ ವಿಭಾಗದ ಮುಖ್ಯಸ್ಥ ಕಿರಣ್
shruti hegde
| Edited By: |

Updated on: Feb 04, 2021 | 9:43 PM

Share

ಬೆಂಗಳೂರು: ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ನಡೆಯುತ್ತಿರುವ ಅವ್ಯವಹಾರದ ಕುರಿತು Tv9 ಕನ್ನಡ ಸುದ್ದಿ ವಾಹಿನಿ ವಿಸ್ತೃತ ವರದಿ ಮಾಡಿತ್ತು. ಈ ಕುರಿತಂತೆ ಇಂದು (ಫೆ.4)) ಟಿವಿ9 ಕನ್ನಡ ಡಿಜಿಟಲ್​​ ಲೈವ್​ನಲ್ಲಿ​ ಚರ್ಚೆ ನಡೆಯಿತು. ಕ್ರೈಂ ವಿಭಾಗದ ಮುಖ್ಯಸ್ಥ ಕಿರಣ್ ಹಾಗೂ ನಿವೃತ್ತ ಡಿಐಜಿ ಜಯರಾಮಯ್ಯ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಟಿವಿ9 ಆ್ಯಂಕರ್ ಮಾಲ್ತೇಶ್ ಚರ್ಚೆ ನಡೆಸಿಕೊಟ್ಟರು.

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತಂತೆ ನಿವೃತ್ತ ಡಿಐಜಿ ಜಯರಾಮಯ್ಯ ಮಾತನಾಡಿ, ವಿಶೇಷ ಸೌಲಭ್ಯಗಳಾಗಿ ಕೋಣೆಯ ವ್ಯವಸ್ಥೆ, ಅಕ್ಕಿ, ಬೇಳೆ, ಮಾಂಸಾಹಾರ ಹೀಗೆ ಇತ್ಯಾದಿ ವಿಶೇಷ ಸೌಲಭ್ಯಗಳು ಜೈಲಿನಲ್ಲಿ ಸಿಗುತ್ತಿರುವುದು ಅವ್ಯವಹಾರ. ಈ ವಿಷಯ ಮೇಲಾಧಿಕಾರಿಗಳಿಗೆ ಗೊತ್ತಿಲ್ವೇ ಎಂಬ ಪ್ರಶ್ನೆ ಮೂಡುತ್ತದೆ. ಹಣ ಸುಲಿಗೆ ಮಾಡುವ ಮೂಲಕ ಅವ್ಯವಹಾರ ನಡೆಯುತ್ತಿರುವ ಕೃತ್ಯಗಳು ನಿಲ್ಲಬೇಕು. ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಲೇ ಬೇಕಾದ ಅಗತ್ಯ ಎದುರಾಗಿದೆ. ಈ ಕುರಿತಂತೆ ಹಿರಿಯ ಅಧಿಕಾರಿಗಳು ಗಮನ ಹರಿಸಬೇಕು. ಆಗ ಮಾತ್ರ ಇಂತಹ ಕೃತ್ಯಗಳನ್ನು ತಡೆಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಕಿಡಿಗೇಡಿ ಕೈದಿಗಳು, ಮಾಮೂಲಿ ಕೈದಿಗಳನ್ನು ಉತ್ತೇಜಿಸುತ್ತಾರೆ. ಇಂತಹ ಕೃತ್ಯಕ್ಕೆ ಕ್ರಮ ಕೈಗೊಳ್ಳಬೇಕಿದೆ. ಜೈಲಿನ ಒಳಗೆ ಏನು ನಡೆಯುತ್ತಿದೆ ಎಂಬುದರ ಕುರಿತಾಗಿ ಮೇಲಧಿಕಾರಿಗಳು ತಿಳಿದುಕೊಳ್ಳಬೇಕು. ಅಕ್ಕಿ, ಬೇಳೆ ಮಾರಾಟ ಮಾಡುತ್ತಾರೆ. ಈ ಮೂಲಕ ವ್ಯಾಪಾರ ನಡೆಸುತ್ತಿದ್ದಾರೆ ಎಂದರೆ ಅದು ಅವ್ಯವಹಾರ. ಕೊಂಡುಕೊಳ್ಳದಿದ್ದರೆ ಊಟ ಕಡಿತಗೊಳಿಸುವಂತೆ ಬೆದರಿಕೆ ಒಡ್ಡುತ್ತಾರೆ. ಕೈದಿಗಳನ್ನು ಹಿಡಿತಕ್ಕೆ ತರಬೇಕು ಅಂದರೆ ಅದು ಸುಲಭದ ಮಾತಲ್ಲ. ಮೇಲಾಧಿಕಾರಿಗಳೇ ಅವರ ಜೊತೆ ಸೇರಿ ಅವ್ಯವಹಾರಕ್ಕೆ ತೊಡಗಿದರೆ ಸುಧಾರಣೆಯ ಮಾತೆಲ್ಲಿ? ಈ ಕುರಿತಂತೆ ಗಮನ ಹರಿಸಲೇಬೇಕು ಎಂದು ಮಾತನಾಡಿದರು.

ಸಂವಾದದಲ್ಲಿ ಮಾತನಾಡಿದ ವರದಿಗಾರ ಕಿರಣ್, ಈ ಕುರಿತಂತೆ ತನಿಖೆ ಪ್ರಾರಂಭಿಸಿದಾಗ ಕೈದಿಗಳಿಗೆ ಯಾವ ಯಾವ ಸೌಲಭ್ಯಗಳಿವೆ ಎಂಬುದನ್ನು ಮೊದಲು ತಿಳಿದುಕೊಂಡೆವು. ಜೈಲುಗಳಲ್ಲಿ ಮತ್ತಷ್ಟು ಕ್ರೈಂಗಳನ್ನು ಹುಟ್ಟುಹಾಕುವಂಥ ವ್ಯವಸ್ಥೆಗಳು ರೂಪುಗೊಳ್ಳುತ್ತಿವೆ. ಜೈಲಿನ ಅಧಿಕಾರಿಗಳೇ ಇದಕ್ಕೆ ಬೆಂಬಲ ನೀಡುತ್ತಿದ್ದಾರೆ. ಹಣ ನೀಡಿ ಸೌಲಭ್ಯಗಳನ್ನು ಪಡೆಯದಿದ್ದರೆ, ಹೊಡೆಯುವುದು, ಹಿಂಸಿಸುವ ಕೃತ್ಯಗಳನ್ನು ಮಾಡುತ್ತಾರೆ. ಆಗ ತಾನೆ ಬಂದ ಕೈದಿ ಬೇಸತ್ತು ಹಣ ನೀಡಿ ಸೌಲಭ್ಯ ಪಡೆಯುವಂತೆ ಮಾಡುತ್ತಾರೆ ಎಂದು ಅಗ್ರಹಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಹೇಳಿದರು.

ಜೈಲಿನಲ್ಲಿರುವ ವಿಶೇಷ ಸೌಲಭ್ಯ ಪಡೆಯದಿದ್ದರೆ ಹಳೆಯ ಕೈದಿಗಳಿಂದ, ಆಗತಾನೆ ಬಂದ ಕೈದಿಗಳಿಗೆ ಟಾರ್ಚರ್ ಕೊಡಿಸಲಾಗುತ್ತದೆ. ಹಣ ಪಡೆದು ಸೌಲಭ್ಯ ಪಡೆಯದಿದ್ದರೆ ಹಳೆಯ ಕೈದಿಗಳು, ಹೊಸ ಕೈದಿಗಳಿಗೆ ಹೊಡೆದು ಸೌಲಭ್ಯ ಪಡೆಯುವಂತೆ ಟಾರ್ಚರ್ ನೀಡುತ್ತಿದ್ದಾರೆ. ಹೀಗಾಗಿ ಹಳೆ ಕೈದಿಗಳ ಟಾರ್ಚರ್ ಸಹಿಸಲಾಗದೆ ಕೈದಿಗಳು ಸೌಲಭ್ಯ ಪಡೆಯುತ್ತಿದ್ದಾರೆ ಎಂದು ಹೇಳಿದರು.

Facebook Live| ಲಸಿಕೆ ವಿತರಣೆಯಾಗುತ್ತಿದ್ದರೂ ಜನರಲ್ಲಿ ಉತ್ಸಾಹ ಕಡಿಮೆ ಇದೆ : ಸಾರ್ವಜನಿಕರ ಹಿಂಜರಿಕೆಗೆ ಕಾರಣ ಏನು?

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ