ಟಿವಿ9 ಇಂಪ್ಯಾಕ್ಟ್: ಕೊನೆಗೂ ಸೋಂಕಿತನ ಮೃತದೇಹ BBMPಗೆ ಹಸ್ತಾಂತರಿಸಿದ ಆಸ್ಪತ್ರೆ

ಬೆಂಗಳೂರು: ಕೊರೊನಾ ಸೋಂಕಿತ ಮೃತಪಟ್ಟು 3 ದಿನವಾದ್ರೂ ಮೃತದೇಹ ನೀಡದೆ ಸತಾಯಿಸುತ್ತಿದ್ದ ಸೇಂಟ್ ಮಾರ್ಥಾಸ್ ಆಸ್ಪತ್ರೆ ಕೊನೆಗೂ ಮೃತದೇಹವನ್ನ ಹಸ್ತಾಂತರಿಸಿದೆ. ಟಿವಿ9 ವರದಿಯಿಂದ ಎಚ್ಚೆತ್ತು ಬಿಬಿಎಂಪಿಗೆ ಕೊರೊನಾ ಸೋಂಕಿತನ ಶವವನ್ನು ಆಸ್ಪತ್ರೆ ಹಸ್ತಾಂತರ ಮಾಡಿದೆ. ಜೂನ್ 14ರಂದು ಅನಾರೋಗ್ಯದ ಹಿನ್ನೆಲೆಯಲ್ಲಿ ರೋಗಿಯೊಬ್ಬರನ್ನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿತ್ತು. ಬಳಿಕ ಆತನಿಗೆ ಕೊರೊನಾ ಪಾಸಿಟಿವ್ ಎಂದು ತಿಳಿದುಬಂದ್ರೂ ಕೋವಿಡ್ ಆಸ್ಪತ್ರೆಗೆ ಆಡಳಿತ ಮಂಡಳಿ ಶಿಫ್ಟ್ ಮಾಡಲಿಲ್ಲ. ಪೇಷಂಟ್ ಆರೋಗ್ಯ ಸ್ಥಿತಿ ಸರಿ ಇಲ್ಲ ಅಂತಾ ಹೇಳಿ ಅಲ್ಲೇ […]

ಟಿವಿ9 ಇಂಪ್ಯಾಕ್ಟ್: ಕೊನೆಗೂ ಸೋಂಕಿತನ ಮೃತದೇಹ BBMPಗೆ ಹಸ್ತಾಂತರಿಸಿದ ಆಸ್ಪತ್ರೆ
ಬಿಬಿಎಂಪಿ
ಸಾಧು ಶ್ರೀನಾಥ್​ Edited By:

Updated on: Jun 28, 2020 | 5:24 PM

ಬೆಂಗಳೂರು: ಕೊರೊನಾ ಸೋಂಕಿತ ಮೃತಪಟ್ಟು 3 ದಿನವಾದ್ರೂ ಮೃತದೇಹ ನೀಡದೆ ಸತಾಯಿಸುತ್ತಿದ್ದ ಸೇಂಟ್ ಮಾರ್ಥಾಸ್ ಆಸ್ಪತ್ರೆ ಕೊನೆಗೂ ಮೃತದೇಹವನ್ನ ಹಸ್ತಾಂತರಿಸಿದೆ. ಟಿವಿ9 ವರದಿಯಿಂದ ಎಚ್ಚೆತ್ತು ಬಿಬಿಎಂಪಿಗೆ ಕೊರೊನಾ ಸೋಂಕಿತನ ಶವವನ್ನು ಆಸ್ಪತ್ರೆ ಹಸ್ತಾಂತರ ಮಾಡಿದೆ.

ಜೂನ್ 14ರಂದು ಅನಾರೋಗ್ಯದ ಹಿನ್ನೆಲೆಯಲ್ಲಿ ರೋಗಿಯೊಬ್ಬರನ್ನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿತ್ತು. ಬಳಿಕ ಆತನಿಗೆ ಕೊರೊನಾ ಪಾಸಿಟಿವ್ ಎಂದು ತಿಳಿದುಬಂದ್ರೂ ಕೋವಿಡ್ ಆಸ್ಪತ್ರೆಗೆ ಆಡಳಿತ ಮಂಡಳಿ ಶಿಫ್ಟ್ ಮಾಡಲಿಲ್ಲ. ಪೇಷಂಟ್ ಆರೋಗ್ಯ ಸ್ಥಿತಿ ಸರಿ ಇಲ್ಲ ಅಂತಾ ಹೇಳಿ ಅಲ್ಲೇ ಚಿಕಿತ್ಸೆ ನೀಡಲು ನಿರ್ಧರಿಸಿದರು. ಆದರೆ, ಜೂನ್ 25 ರಂದು ಚಿಕಿತ್ಸೆ ಫಲಿಸದೆ, ಸೋಂಕಿತ ಮೃತಪಟ್ಟಿದ್ದರು.

ಟಿವಿ9 ಇಂಪ್ಯಾಕ್ಟ್:
ಚಿಕಿತ್ಸೆಗೆ ತಗಲಿದ ಖರ್ಚೆಂದು ಒಟ್ಟು 2 ಲಕ್ಷದ 68 ಸಾವಿರದ 725 ರೂಪಾಯಿ ಬಿಲ್ ಮಾಡಿದ್ದಾರೆ. ಇನ್ಶೂರೆನ್ಸ್​​ನಿಂದ 1 ಲಕ್ಷದ 80 ಸಾವಿರದವರೆಗೂ ಕ್ಲೈಮ್​ ಆಗಿದೆ. ಆದರೆ, ಉಳಿದ ಹಣವನ್ನು ಕಟ್ಟೋವರೆಗೂ ಮೃತದೇಹ ನೀಡುವುದಿಲ್ಲ ಎಂದು ಆಸ್ಪತ್ರೆಯವರು ಸತಾಯಿಸುತ್ತಿದ್ದಾರೆ ಎಂದು ಮೃತನ ಕುಟುಂಬಸ್ಥರು ಅಳಲು ತೋಡಿಕೊಂಡಿದ್ದರು.

ಈ ಬಗ್ಗೆ ಟಿವಿ9 ವರದಿ ಬೆನ್ನಲ್ಲೇ ಬಿಬಿಎಂಪಿಗೆ ಮೃತದೇಹವನ್ನು ಆಸ್ಪತ್ರೆ ಹಸ್ತಾಂತರ ಮಾಡಿದೆ. ಬೆಂಗಳೂರಿನ ಸುಮನಹಳ್ಳಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

Published On - 5:23 pm, Sun, 28 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us