AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಲ್​ಡೌನ್ ಏರಿಯಾಗಳಲ್ಲಿ TV9 Reality Check, ಬಯಲಾಯ್ತು ಜನ, ಅಧಿಕಾರಿಗಳ ನಿರ್ಲಕ್ಷ್ಯ

ಬೆಂಗಳೂರು: ನಗರದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಸೋಂಕಿತರು ಹೆಚ್ಚಿರುವ ಏರಿಯಾಗಳನ್ನು ಸೀಲ್​ಡೌನ್ ಮಾಡಲು ಮುಂದಾಗಿದ್ರು. ಹೀಗಾಗಿ ಈಗಾಗಲೇ ಅನೇಕ ಏರಿಯಾಗಳು ಸೀಲ್ ಆಗಿವೆ. ಆದರೆ ಅಲ್ಲಿನ ಜನ ಇದ್ದಕ್ಕೆ ಕ್ಯಾರೆ ಅಂತಿಲ್ಲ. ಬೆಂಗಳೂರಲ್ಲಿ ಕೊರೊನಾ ಸ್ಫೋಟವಾಗ್ತಿದ್ರೂ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಬಿಬಿಎಂಪಿ ಕೂಡ ಈ ಬಗ್ಗೆ ನಿರ್ಲಕ್ಷ್ಯವಹಿಸುತ್ತಿದೆ. ಸೀಲ್​ಡೌನ್ ಆದ ಏರಿಯಾ ಕಡೆ ಬಿಬಿಎಂಪಿ ಸಿಬ್ಬಂದಿ ಮುಖ ಮಾಡ್ತಿಲ್ಲ. ಹೀಗಾಗಿ ಜನ ಬೆಕಾ ಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಕಲಾಸಿಪಾಳ್ಯದಲ್ಲಿ ಕಾಟಾಚಾರಕ್ಕೆ ಸೀಲ್​ಡೌನ್ ಮಾಡಿದಂತಿದೆ. ಸೀಲ್​ಡೌನ್ ಏರಿಯಾದಲ್ಲೂ ಜನರು ಬಿಂದಾಸ್ […]

ಸೀಲ್​ಡೌನ್ ಏರಿಯಾಗಳಲ್ಲಿ TV9 Reality Check, ಬಯಲಾಯ್ತು ಜನ, ಅಧಿಕಾರಿಗಳ ನಿರ್ಲಕ್ಷ್ಯ
ಆಯೇಷಾ ಬಾನು
|

Updated on: Jun 28, 2020 | 8:35 AM

Share

ಬೆಂಗಳೂರು: ನಗರದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಸೋಂಕಿತರು ಹೆಚ್ಚಿರುವ ಏರಿಯಾಗಳನ್ನು ಸೀಲ್​ಡೌನ್ ಮಾಡಲು ಮುಂದಾಗಿದ್ರು. ಹೀಗಾಗಿ ಈಗಾಗಲೇ ಅನೇಕ ಏರಿಯಾಗಳು ಸೀಲ್ ಆಗಿವೆ. ಆದರೆ ಅಲ್ಲಿನ ಜನ ಇದ್ದಕ್ಕೆ ಕ್ಯಾರೆ ಅಂತಿಲ್ಲ. ಬೆಂಗಳೂರಲ್ಲಿ ಕೊರೊನಾ ಸ್ಫೋಟವಾಗ್ತಿದ್ರೂ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಬಿಬಿಎಂಪಿ ಕೂಡ ಈ ಬಗ್ಗೆ ನಿರ್ಲಕ್ಷ್ಯವಹಿಸುತ್ತಿದೆ.

ಸೀಲ್​ಡೌನ್ ಆದ ಏರಿಯಾ ಕಡೆ ಬಿಬಿಎಂಪಿ ಸಿಬ್ಬಂದಿ ಮುಖ ಮಾಡ್ತಿಲ್ಲ. ಹೀಗಾಗಿ ಜನ ಬೆಕಾ ಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಕಲಾಸಿಪಾಳ್ಯದಲ್ಲಿ ಕಾಟಾಚಾರಕ್ಕೆ ಸೀಲ್​ಡೌನ್ ಮಾಡಿದಂತಿದೆ. ಸೀಲ್​ಡೌನ್ ಏರಿಯಾದಲ್ಲೂ ಜನರು ಬಿಂದಾಸ್ ಆಗಿ ಓಡಾಡುತ್ತಿದ್ದಾರೆ. ಸೀಲ್​ಡೌನ್ ಏರಿಯಾದಲಿ ಪೊಲೀಸರು ಗಸ್ತು ತಿರುಗುತ್ತಿಲ್ಲ. ಕಲಾಸಿಪಾಳ್ಯದಲ್ಲಿ ಬಿಬಿಎಂಪಿ ಮಾರ್ಷಲ್ಸ್ ಕೂಡ ಕಾಣುತ್ತಿಲ್ಲ.

ಇನ್ನು ಮಿನರ್ವ ಸರ್ಕಲ್​​ ಬಳಿ ಅಕ್ರಮವಾಗಿ ಹೂವು ವ್ಯಾಪಾರ ಮಾಡಲಾಗುತ್ತಿದೆ. ಕೆ.ಆರ್.ಮಾರ್ಕೆಟ್​ ಸೀಲ್ ಆದ ಹಿನ್ನೆಲೆಯಲ್ಲಿ ಮಿನರ್ವ ಸರ್ಕಲ್ ಬಳಿ ಹೂವಿನ ವ್ಯಾಪಾರಿಗಳು ಜಮಾವಣೆಗೊಂಡಿದ್ದಾರೆ. ಸೀಲ್​​​​ಡೌನ್ ರೂಲ್ಸ್ ಬ್ರೇಕ್ ಮಾಡಿ ವ್ಯಾಪಾರದಲ್ಲಿ ಬ್ಯುಸಿಯಾಗಿದ್ದಾರೆ. ಅಕ್ರಮ ವ್ಯಾಪಾರ ನಡೀತಿದ್ರೂ ಬಿಬಿಎಂಪಿ ಡೋಂಟ್​​ಕೇರ್​ ಎಂಬಂತಿದೆ. ಇಷ್ಟೆಲ್ಲಾ ನಡೀತಿದ್ರೂ ಅಧಿಕಾರಿಗಳು ಮಾತ್ರ ಫುಲ್ ಸೈಲೆಂಟ್ ಆಗಿದ್ದಾರೆ.

ಚಿಕ್ಕಪೇಟೆಯಲ್ಲಿ ಹೆಸರಿಗೆ ಮಾತ್ರ ಸೀಲ್​ಡೌನ್: ಚಿಕ್ಕಪೇಟೆಯಲ್ಲಿ ಹೆಸರಿಗೆ ಮಾತ್ರ ಸೀಲ್​ಡೌನ್ ಮಾಡಲಾಗಿದೆ. ಅಲ್ಲನ ನಿವಾಸಿಗಳು, ವಾಹನ ಸವಾರರು ಬ್ಯಾರಿಕೇಡ್ ತೆಗೆದು ಬಿಂದಾಸ್ ಆಗಿ ಓಡಾಡುತ್ತಿದ್ದಾರೆ. ದೈಹಿಕ ಅಂತರವಿಲ್ಲ, ಮಾಸ್ಕ್ ಇಲ್ಲದೆ ಸುತ್ತಾಡುತ್ತಿದ್ದಾರೆ. ಇನ್ನು ಸೀಲ್​ಡೌನ್ ಆಗಿರುವ ವಿವಿ ಪುರಂನಲ್ಲೂ ಇದೇ ರೀತಿಯ ನೋಟ ಕಂಡು ಬಂದಿದೆ. ಈ ರೀತಿ ಜನ, ಅಧಿಕಾರಿಗಳು ನಿರ್ಲಕ್ಷ್ಯವಹಿಸುತ್ತಿದ್ರೆ ಮುಂದೊಂದು ದಿನ ಭಾರಿ ಪರಿಣಾಮ ಎದುರಿಸಬೇಕಾಗುತ್ತೆ.

ವರದಿ ಬಳಿಕ ಎಚ್ಚೆತ್ತ ಪೊಲೀಸರು: ಚಿಕ್ಕಪೇಟೆಯಲ್ಲಿ ಸಾರ್ವಜನಿಕರ ಬೇಕಾಬಿಟ್ಟಿ ಓಡಾಟ ಕುರಿತು ಟಿವಿ9ನಲ್ಲಿ ವರದಿ ಪ್ರಸಾರವಾದ ಬಳಿಕ ಎಚ್ಚೆತ್ತ ಪೊಲೀಸರು ಸೀಲ್​ಡೌನ್ ಪ್ರದೇಶದಲ್ಲಿ ಸಾರ್ವಜನಿಕರು ಗುಂಪು ಸೇರದಂತೆ ಪೊಲೀಸರಿಂದ ಗಸ್ತು. ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ