AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಲ್​ಡೌನ್ ಏರಿಯಾಗಳಲ್ಲಿ TV9 Reality Check, ಬಯಲಾಯ್ತು ಜನ, ಅಧಿಕಾರಿಗಳ ನಿರ್ಲಕ್ಷ್ಯ

ಬೆಂಗಳೂರು: ನಗರದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಸೋಂಕಿತರು ಹೆಚ್ಚಿರುವ ಏರಿಯಾಗಳನ್ನು ಸೀಲ್​ಡೌನ್ ಮಾಡಲು ಮುಂದಾಗಿದ್ರು. ಹೀಗಾಗಿ ಈಗಾಗಲೇ ಅನೇಕ ಏರಿಯಾಗಳು ಸೀಲ್ ಆಗಿವೆ. ಆದರೆ ಅಲ್ಲಿನ ಜನ ಇದ್ದಕ್ಕೆ ಕ್ಯಾರೆ ಅಂತಿಲ್ಲ. ಬೆಂಗಳೂರಲ್ಲಿ ಕೊರೊನಾ ಸ್ಫೋಟವಾಗ್ತಿದ್ರೂ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಬಿಬಿಎಂಪಿ ಕೂಡ ಈ ಬಗ್ಗೆ ನಿರ್ಲಕ್ಷ್ಯವಹಿಸುತ್ತಿದೆ. ಸೀಲ್​ಡೌನ್ ಆದ ಏರಿಯಾ ಕಡೆ ಬಿಬಿಎಂಪಿ ಸಿಬ್ಬಂದಿ ಮುಖ ಮಾಡ್ತಿಲ್ಲ. ಹೀಗಾಗಿ ಜನ ಬೆಕಾ ಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಕಲಾಸಿಪಾಳ್ಯದಲ್ಲಿ ಕಾಟಾಚಾರಕ್ಕೆ ಸೀಲ್​ಡೌನ್ ಮಾಡಿದಂತಿದೆ. ಸೀಲ್​ಡೌನ್ ಏರಿಯಾದಲ್ಲೂ ಜನರು ಬಿಂದಾಸ್ […]

ಸೀಲ್​ಡೌನ್ ಏರಿಯಾಗಳಲ್ಲಿ TV9 Reality Check, ಬಯಲಾಯ್ತು ಜನ, ಅಧಿಕಾರಿಗಳ ನಿರ್ಲಕ್ಷ್ಯ
ಆಯೇಷಾ ಬಾನು
|

Updated on: Jun 28, 2020 | 8:35 AM

Share

ಬೆಂಗಳೂರು: ನಗರದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಸೋಂಕಿತರು ಹೆಚ್ಚಿರುವ ಏರಿಯಾಗಳನ್ನು ಸೀಲ್​ಡೌನ್ ಮಾಡಲು ಮುಂದಾಗಿದ್ರು. ಹೀಗಾಗಿ ಈಗಾಗಲೇ ಅನೇಕ ಏರಿಯಾಗಳು ಸೀಲ್ ಆಗಿವೆ. ಆದರೆ ಅಲ್ಲಿನ ಜನ ಇದ್ದಕ್ಕೆ ಕ್ಯಾರೆ ಅಂತಿಲ್ಲ. ಬೆಂಗಳೂರಲ್ಲಿ ಕೊರೊನಾ ಸ್ಫೋಟವಾಗ್ತಿದ್ರೂ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಬಿಬಿಎಂಪಿ ಕೂಡ ಈ ಬಗ್ಗೆ ನಿರ್ಲಕ್ಷ್ಯವಹಿಸುತ್ತಿದೆ.

ಸೀಲ್​ಡೌನ್ ಆದ ಏರಿಯಾ ಕಡೆ ಬಿಬಿಎಂಪಿ ಸಿಬ್ಬಂದಿ ಮುಖ ಮಾಡ್ತಿಲ್ಲ. ಹೀಗಾಗಿ ಜನ ಬೆಕಾ ಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಕಲಾಸಿಪಾಳ್ಯದಲ್ಲಿ ಕಾಟಾಚಾರಕ್ಕೆ ಸೀಲ್​ಡೌನ್ ಮಾಡಿದಂತಿದೆ. ಸೀಲ್​ಡೌನ್ ಏರಿಯಾದಲ್ಲೂ ಜನರು ಬಿಂದಾಸ್ ಆಗಿ ಓಡಾಡುತ್ತಿದ್ದಾರೆ. ಸೀಲ್​ಡೌನ್ ಏರಿಯಾದಲಿ ಪೊಲೀಸರು ಗಸ್ತು ತಿರುಗುತ್ತಿಲ್ಲ. ಕಲಾಸಿಪಾಳ್ಯದಲ್ಲಿ ಬಿಬಿಎಂಪಿ ಮಾರ್ಷಲ್ಸ್ ಕೂಡ ಕಾಣುತ್ತಿಲ್ಲ.

ಇನ್ನು ಮಿನರ್ವ ಸರ್ಕಲ್​​ ಬಳಿ ಅಕ್ರಮವಾಗಿ ಹೂವು ವ್ಯಾಪಾರ ಮಾಡಲಾಗುತ್ತಿದೆ. ಕೆ.ಆರ್.ಮಾರ್ಕೆಟ್​ ಸೀಲ್ ಆದ ಹಿನ್ನೆಲೆಯಲ್ಲಿ ಮಿನರ್ವ ಸರ್ಕಲ್ ಬಳಿ ಹೂವಿನ ವ್ಯಾಪಾರಿಗಳು ಜಮಾವಣೆಗೊಂಡಿದ್ದಾರೆ. ಸೀಲ್​​​​ಡೌನ್ ರೂಲ್ಸ್ ಬ್ರೇಕ್ ಮಾಡಿ ವ್ಯಾಪಾರದಲ್ಲಿ ಬ್ಯುಸಿಯಾಗಿದ್ದಾರೆ. ಅಕ್ರಮ ವ್ಯಾಪಾರ ನಡೀತಿದ್ರೂ ಬಿಬಿಎಂಪಿ ಡೋಂಟ್​​ಕೇರ್​ ಎಂಬಂತಿದೆ. ಇಷ್ಟೆಲ್ಲಾ ನಡೀತಿದ್ರೂ ಅಧಿಕಾರಿಗಳು ಮಾತ್ರ ಫುಲ್ ಸೈಲೆಂಟ್ ಆಗಿದ್ದಾರೆ.

ಚಿಕ್ಕಪೇಟೆಯಲ್ಲಿ ಹೆಸರಿಗೆ ಮಾತ್ರ ಸೀಲ್​ಡೌನ್: ಚಿಕ್ಕಪೇಟೆಯಲ್ಲಿ ಹೆಸರಿಗೆ ಮಾತ್ರ ಸೀಲ್​ಡೌನ್ ಮಾಡಲಾಗಿದೆ. ಅಲ್ಲನ ನಿವಾಸಿಗಳು, ವಾಹನ ಸವಾರರು ಬ್ಯಾರಿಕೇಡ್ ತೆಗೆದು ಬಿಂದಾಸ್ ಆಗಿ ಓಡಾಡುತ್ತಿದ್ದಾರೆ. ದೈಹಿಕ ಅಂತರವಿಲ್ಲ, ಮಾಸ್ಕ್ ಇಲ್ಲದೆ ಸುತ್ತಾಡುತ್ತಿದ್ದಾರೆ. ಇನ್ನು ಸೀಲ್​ಡೌನ್ ಆಗಿರುವ ವಿವಿ ಪುರಂನಲ್ಲೂ ಇದೇ ರೀತಿಯ ನೋಟ ಕಂಡು ಬಂದಿದೆ. ಈ ರೀತಿ ಜನ, ಅಧಿಕಾರಿಗಳು ನಿರ್ಲಕ್ಷ್ಯವಹಿಸುತ್ತಿದ್ರೆ ಮುಂದೊಂದು ದಿನ ಭಾರಿ ಪರಿಣಾಮ ಎದುರಿಸಬೇಕಾಗುತ್ತೆ.

ವರದಿ ಬಳಿಕ ಎಚ್ಚೆತ್ತ ಪೊಲೀಸರು: ಚಿಕ್ಕಪೇಟೆಯಲ್ಲಿ ಸಾರ್ವಜನಿಕರ ಬೇಕಾಬಿಟ್ಟಿ ಓಡಾಟ ಕುರಿತು ಟಿವಿ9ನಲ್ಲಿ ವರದಿ ಪ್ರಸಾರವಾದ ಬಳಿಕ ಎಚ್ಚೆತ್ತ ಪೊಲೀಸರು ಸೀಲ್​ಡೌನ್ ಪ್ರದೇಶದಲ್ಲಿ ಸಾರ್ವಜನಿಕರು ಗುಂಪು ಸೇರದಂತೆ ಪೊಲೀಸರಿಂದ ಗಸ್ತು. ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್