AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಲ್​ಡೌನ್ ಏರಿಯಾಗಳಲ್ಲಿ TV9 Reality Check, ಬಯಲಾಯ್ತು ಜನ, ಅಧಿಕಾರಿಗಳ ನಿರ್ಲಕ್ಷ್ಯ

ಬೆಂಗಳೂರು: ನಗರದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಸೋಂಕಿತರು ಹೆಚ್ಚಿರುವ ಏರಿಯಾಗಳನ್ನು ಸೀಲ್​ಡೌನ್ ಮಾಡಲು ಮುಂದಾಗಿದ್ರು. ಹೀಗಾಗಿ ಈಗಾಗಲೇ ಅನೇಕ ಏರಿಯಾಗಳು ಸೀಲ್ ಆಗಿವೆ. ಆದರೆ ಅಲ್ಲಿನ ಜನ ಇದ್ದಕ್ಕೆ ಕ್ಯಾರೆ ಅಂತಿಲ್ಲ. ಬೆಂಗಳೂರಲ್ಲಿ ಕೊರೊನಾ ಸ್ಫೋಟವಾಗ್ತಿದ್ರೂ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಬಿಬಿಎಂಪಿ ಕೂಡ ಈ ಬಗ್ಗೆ ನಿರ್ಲಕ್ಷ್ಯವಹಿಸುತ್ತಿದೆ. ಸೀಲ್​ಡೌನ್ ಆದ ಏರಿಯಾ ಕಡೆ ಬಿಬಿಎಂಪಿ ಸಿಬ್ಬಂದಿ ಮುಖ ಮಾಡ್ತಿಲ್ಲ. ಹೀಗಾಗಿ ಜನ ಬೆಕಾ ಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಕಲಾಸಿಪಾಳ್ಯದಲ್ಲಿ ಕಾಟಾಚಾರಕ್ಕೆ ಸೀಲ್​ಡೌನ್ ಮಾಡಿದಂತಿದೆ. ಸೀಲ್​ಡೌನ್ ಏರಿಯಾದಲ್ಲೂ ಜನರು ಬಿಂದಾಸ್ […]

ಸೀಲ್​ಡೌನ್ ಏರಿಯಾಗಳಲ್ಲಿ TV9 Reality Check, ಬಯಲಾಯ್ತು ಜನ, ಅಧಿಕಾರಿಗಳ ನಿರ್ಲಕ್ಷ್ಯ
ಆಯೇಷಾ ಬಾನು
ಆಯೇಷಾ ಬಾನು|

Updated on: Jun 28, 2020 | 8:35 AM

Share

ಬೆಂಗಳೂರು: ನಗರದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಸೋಂಕಿತರು ಹೆಚ್ಚಿರುವ ಏರಿಯಾಗಳನ್ನು ಸೀಲ್​ಡೌನ್ ಮಾಡಲು ಮುಂದಾಗಿದ್ರು. ಹೀಗಾಗಿ ಈಗಾಗಲೇ ಅನೇಕ ಏರಿಯಾಗಳು ಸೀಲ್ ಆಗಿವೆ. ಆದರೆ ಅಲ್ಲಿನ ಜನ ಇದ್ದಕ್ಕೆ ಕ್ಯಾರೆ ಅಂತಿಲ್ಲ. ಬೆಂಗಳೂರಲ್ಲಿ ಕೊರೊನಾ ಸ್ಫೋಟವಾಗ್ತಿದ್ರೂ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಬಿಬಿಎಂಪಿ ಕೂಡ ಈ ಬಗ್ಗೆ ನಿರ್ಲಕ್ಷ್ಯವಹಿಸುತ್ತಿದೆ.

ಸೀಲ್​ಡೌನ್ ಆದ ಏರಿಯಾ ಕಡೆ ಬಿಬಿಎಂಪಿ ಸಿಬ್ಬಂದಿ ಮುಖ ಮಾಡ್ತಿಲ್ಲ. ಹೀಗಾಗಿ ಜನ ಬೆಕಾ ಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಕಲಾಸಿಪಾಳ್ಯದಲ್ಲಿ ಕಾಟಾಚಾರಕ್ಕೆ ಸೀಲ್​ಡೌನ್ ಮಾಡಿದಂತಿದೆ. ಸೀಲ್​ಡೌನ್ ಏರಿಯಾದಲ್ಲೂ ಜನರು ಬಿಂದಾಸ್ ಆಗಿ ಓಡಾಡುತ್ತಿದ್ದಾರೆ. ಸೀಲ್​ಡೌನ್ ಏರಿಯಾದಲಿ ಪೊಲೀಸರು ಗಸ್ತು ತಿರುಗುತ್ತಿಲ್ಲ. ಕಲಾಸಿಪಾಳ್ಯದಲ್ಲಿ ಬಿಬಿಎಂಪಿ ಮಾರ್ಷಲ್ಸ್ ಕೂಡ ಕಾಣುತ್ತಿಲ್ಲ.

ಇನ್ನು ಮಿನರ್ವ ಸರ್ಕಲ್​​ ಬಳಿ ಅಕ್ರಮವಾಗಿ ಹೂವು ವ್ಯಾಪಾರ ಮಾಡಲಾಗುತ್ತಿದೆ. ಕೆ.ಆರ್.ಮಾರ್ಕೆಟ್​ ಸೀಲ್ ಆದ ಹಿನ್ನೆಲೆಯಲ್ಲಿ ಮಿನರ್ವ ಸರ್ಕಲ್ ಬಳಿ ಹೂವಿನ ವ್ಯಾಪಾರಿಗಳು ಜಮಾವಣೆಗೊಂಡಿದ್ದಾರೆ. ಸೀಲ್​​​​ಡೌನ್ ರೂಲ್ಸ್ ಬ್ರೇಕ್ ಮಾಡಿ ವ್ಯಾಪಾರದಲ್ಲಿ ಬ್ಯುಸಿಯಾಗಿದ್ದಾರೆ. ಅಕ್ರಮ ವ್ಯಾಪಾರ ನಡೀತಿದ್ರೂ ಬಿಬಿಎಂಪಿ ಡೋಂಟ್​​ಕೇರ್​ ಎಂಬಂತಿದೆ. ಇಷ್ಟೆಲ್ಲಾ ನಡೀತಿದ್ರೂ ಅಧಿಕಾರಿಗಳು ಮಾತ್ರ ಫುಲ್ ಸೈಲೆಂಟ್ ಆಗಿದ್ದಾರೆ.

ಚಿಕ್ಕಪೇಟೆಯಲ್ಲಿ ಹೆಸರಿಗೆ ಮಾತ್ರ ಸೀಲ್​ಡೌನ್: ಚಿಕ್ಕಪೇಟೆಯಲ್ಲಿ ಹೆಸರಿಗೆ ಮಾತ್ರ ಸೀಲ್​ಡೌನ್ ಮಾಡಲಾಗಿದೆ. ಅಲ್ಲನ ನಿವಾಸಿಗಳು, ವಾಹನ ಸವಾರರು ಬ್ಯಾರಿಕೇಡ್ ತೆಗೆದು ಬಿಂದಾಸ್ ಆಗಿ ಓಡಾಡುತ್ತಿದ್ದಾರೆ. ದೈಹಿಕ ಅಂತರವಿಲ್ಲ, ಮಾಸ್ಕ್ ಇಲ್ಲದೆ ಸುತ್ತಾಡುತ್ತಿದ್ದಾರೆ. ಇನ್ನು ಸೀಲ್​ಡೌನ್ ಆಗಿರುವ ವಿವಿ ಪುರಂನಲ್ಲೂ ಇದೇ ರೀತಿಯ ನೋಟ ಕಂಡು ಬಂದಿದೆ. ಈ ರೀತಿ ಜನ, ಅಧಿಕಾರಿಗಳು ನಿರ್ಲಕ್ಷ್ಯವಹಿಸುತ್ತಿದ್ರೆ ಮುಂದೊಂದು ದಿನ ಭಾರಿ ಪರಿಣಾಮ ಎದುರಿಸಬೇಕಾಗುತ್ತೆ.

ವರದಿ ಬಳಿಕ ಎಚ್ಚೆತ್ತ ಪೊಲೀಸರು: ಚಿಕ್ಕಪೇಟೆಯಲ್ಲಿ ಸಾರ್ವಜನಿಕರ ಬೇಕಾಬಿಟ್ಟಿ ಓಡಾಟ ಕುರಿತು ಟಿವಿ9ನಲ್ಲಿ ವರದಿ ಪ್ರಸಾರವಾದ ಬಳಿಕ ಎಚ್ಚೆತ್ತ ಪೊಲೀಸರು ಸೀಲ್​ಡೌನ್ ಪ್ರದೇಶದಲ್ಲಿ ಸಾರ್ವಜನಿಕರು ಗುಂಪು ಸೇರದಂತೆ ಪೊಲೀಸರಿಂದ ಗಸ್ತು. ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ