AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 12 ಲಕ್ಷ ಮೌಲ್ಯದ ದುಬಾರಿ ಮದ್ಯ ಜಪ್ತಿ; ನ್ಯೂ ಇಯರ್ ಸೆಲೆಬ್ರೆಷನ್ ಕಿಕ್ಕೇರಿಸಲು ಹೊರಟವರು ಅಂದರ್​

ಮಿಲ್ಟ್ರಿ ಕ್ಯಾಂಟಿನ್​ನಲ್ಲಿ ಬೇರೆಯವರ ಕಾರ್ಡ್ ಬಳಸಿ ಮದ್ಯ ಖರೀದಿಸಿದ ಕಿರಾತಕರ ತಂಡ ಬಳಿಕ ಪಾರ್ಟಿಗಳಿಗೆ ಬಾರ್ ರೇಟ್​ಗಿಂತ ಕಡಿಮೆ ರೇಟ್​ಗೆ ಡ್ರಿಂಕ್ಸ್ ಮಾರಾಟಕ್ಕೆ ಯತ್ನ ನಡೆಸಿದ್ದರು. ವಿಚಾರದ ತಿಳಿದ ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ 12 ಲಕ್ಷ ಮೌಲ್ಯದ ದುಬಾರಿ ಮದ್ಯ ಜಪ್ತಿ; ನ್ಯೂ ಇಯರ್ ಸೆಲೆಬ್ರೆಷನ್ ಕಿಕ್ಕೇರಿಸಲು ಹೊರಟವರು ಅಂದರ್​
ಬಂಧಿತ ಆರೋಪಿಗಳು
ಪೃಥ್ವಿಶಂಕರ
|

Updated on:Dec 30, 2020 | 8:22 AM

Share

ಬೆಂಗಳೂರು: ನ್ಯೂ ಇಯರ್ ಸೆಲೆಬ್ರೆಷನ್ ಕಿಕ್ಕೇರಿಸಲು ಅಕ್ರಮ ಮದ್ಯ ಮಾರಾಟಕ್ಕೆ ಯತ್ನಿಸಿದವರನ್ನು ಅಬಕಾರಿ ಡಿಸಿ ವೀರಣ್ಣ ಬಾಗೇವಾಡಿ ಅಂಡ್ ಟೀಂನ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಬಂಧಿಸಲಾಗಿದೆ.

ಮಣಿ ಮತ್ತು ರಾಮು ಬಂಧಿತ ಆರೋಪಿಗಳಾಗಿದ್ದು, ಈ ಇಬ್ಬರು ಸರ್ಕಾರಕ್ಕೆ ತೆರಿಗೆ ವಂಚಿಸಲು ಹೋಗಿ ಸಿಕ್ಕಿಬಿದ್ದಿದ್ದಾರೆ. 12 ಲಕ್ಷ ಮೌಲ್ಯದ 110 ಬಾಟೆಲ್ ಕಾಸ್ಟ್ಲಿ ಡ್ರಿಂಕ್ಸ್​ ಜಪ್ತಿ ಮಾಡಲಾಗಿದೆ. ಇದರಲ್ಲಿ ಬ್ಲಾಕ್ ಲೇಬಲ್, ಬ್ಲಾಕ್ ಅಂಡ್ ವೈಟ್, ಟೀಚರ್ಸ್,100 ಪೈಪರ್, ಮಾರ್ಫಿಸ್ ಹೀಗೆ ಎಲ್ಲಾ ಕಾಸ್ಟ್ಲೀ ಡ್ರಿಂಕ್ಸ್​ಗಳನ್ನು ಮಿಲ್ಟ್ರಿ ಕ್ಯಾಂಟಿನ್ ಹಾಗೂ ಡ್ಯೂಟಿ ಫ್ರೀ ಶಾಪ್​ಗಳಿಂದ ಖರೀದಿ ಮಾಡಿದ್ದ ಗ್ಯಾಂಗ್, ಸರ್ಕಾರಕ್ಕೆ ಟ್ಯಾಕ್ಸ್ ವಂಚಿಸಿ ಹೊಸ ವರ್ಷಕ್ಕೆ ಸಪ್ಲೈ ಮಾಡಲು ಸಂಚು ರೂಪಿಸಿದ್ದರು.

ಮಿಲ್ಟ್ರಿ ಕ್ಯಾಂಟಿನ್​ನಲ್ಲಿ ಬೇರೆಯವರ ಕಾರ್ಡ್ ಬಳಸಿ ಮದ್ಯ ಖರೀದಿಸಿದ ಕಿರಾತಕರ ತಂಡ ಬಳಿಕ ಪಾರ್ಟಿಗಳಿಗೆ ಬಾರ್ ರೇಟ್​ಗಿಂತ ಕಡಿಮೆ ರೇಟ್​ಗೆ ಡ್ರಿಂಕ್ಸ್ ಮಾರಾಟಕ್ಕೆ ಯತ್ನ ನಡೆಸಿದ್ದರು. ವಿಚಾರದ ತಿಳಿದ ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಅಕ್ರಮ ಮಾರಾಟ ಜಾಲದಲ್ಲಿ ಮತ್ತಷ್ಟು ಆರೋಪಿಗಳ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

Published On - 8:22 am, Wed, 30 December 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್