Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 12 ಲಕ್ಷ ಮೌಲ್ಯದ ದುಬಾರಿ ಮದ್ಯ ಜಪ್ತಿ; ನ್ಯೂ ಇಯರ್ ಸೆಲೆಬ್ರೆಷನ್ ಕಿಕ್ಕೇರಿಸಲು ಹೊರಟವರು ಅಂದರ್​

ಮಿಲ್ಟ್ರಿ ಕ್ಯಾಂಟಿನ್​ನಲ್ಲಿ ಬೇರೆಯವರ ಕಾರ್ಡ್ ಬಳಸಿ ಮದ್ಯ ಖರೀದಿಸಿದ ಕಿರಾತಕರ ತಂಡ ಬಳಿಕ ಪಾರ್ಟಿಗಳಿಗೆ ಬಾರ್ ರೇಟ್​ಗಿಂತ ಕಡಿಮೆ ರೇಟ್​ಗೆ ಡ್ರಿಂಕ್ಸ್ ಮಾರಾಟಕ್ಕೆ ಯತ್ನ ನಡೆಸಿದ್ದರು. ವಿಚಾರದ ತಿಳಿದ ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ 12 ಲಕ್ಷ ಮೌಲ್ಯದ ದುಬಾರಿ ಮದ್ಯ ಜಪ್ತಿ; ನ್ಯೂ ಇಯರ್ ಸೆಲೆಬ್ರೆಷನ್ ಕಿಕ್ಕೇರಿಸಲು ಹೊರಟವರು ಅಂದರ್​
ಬಂಧಿತ ಆರೋಪಿಗಳು
Follow us
ಪೃಥ್ವಿಶಂಕರ
|

Updated on:Dec 30, 2020 | 8:22 AM

ಬೆಂಗಳೂರು: ನ್ಯೂ ಇಯರ್ ಸೆಲೆಬ್ರೆಷನ್ ಕಿಕ್ಕೇರಿಸಲು ಅಕ್ರಮ ಮದ್ಯ ಮಾರಾಟಕ್ಕೆ ಯತ್ನಿಸಿದವರನ್ನು ಅಬಕಾರಿ ಡಿಸಿ ವೀರಣ್ಣ ಬಾಗೇವಾಡಿ ಅಂಡ್ ಟೀಂನ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಬಂಧಿಸಲಾಗಿದೆ.

ಮಣಿ ಮತ್ತು ರಾಮು ಬಂಧಿತ ಆರೋಪಿಗಳಾಗಿದ್ದು, ಈ ಇಬ್ಬರು ಸರ್ಕಾರಕ್ಕೆ ತೆರಿಗೆ ವಂಚಿಸಲು ಹೋಗಿ ಸಿಕ್ಕಿಬಿದ್ದಿದ್ದಾರೆ. 12 ಲಕ್ಷ ಮೌಲ್ಯದ 110 ಬಾಟೆಲ್ ಕಾಸ್ಟ್ಲಿ ಡ್ರಿಂಕ್ಸ್​ ಜಪ್ತಿ ಮಾಡಲಾಗಿದೆ. ಇದರಲ್ಲಿ ಬ್ಲಾಕ್ ಲೇಬಲ್, ಬ್ಲಾಕ್ ಅಂಡ್ ವೈಟ್, ಟೀಚರ್ಸ್,100 ಪೈಪರ್, ಮಾರ್ಫಿಸ್ ಹೀಗೆ ಎಲ್ಲಾ ಕಾಸ್ಟ್ಲೀ ಡ್ರಿಂಕ್ಸ್​ಗಳನ್ನು ಮಿಲ್ಟ್ರಿ ಕ್ಯಾಂಟಿನ್ ಹಾಗೂ ಡ್ಯೂಟಿ ಫ್ರೀ ಶಾಪ್​ಗಳಿಂದ ಖರೀದಿ ಮಾಡಿದ್ದ ಗ್ಯಾಂಗ್, ಸರ್ಕಾರಕ್ಕೆ ಟ್ಯಾಕ್ಸ್ ವಂಚಿಸಿ ಹೊಸ ವರ್ಷಕ್ಕೆ ಸಪ್ಲೈ ಮಾಡಲು ಸಂಚು ರೂಪಿಸಿದ್ದರು.

ಮಿಲ್ಟ್ರಿ ಕ್ಯಾಂಟಿನ್​ನಲ್ಲಿ ಬೇರೆಯವರ ಕಾರ್ಡ್ ಬಳಸಿ ಮದ್ಯ ಖರೀದಿಸಿದ ಕಿರಾತಕರ ತಂಡ ಬಳಿಕ ಪಾರ್ಟಿಗಳಿಗೆ ಬಾರ್ ರೇಟ್​ಗಿಂತ ಕಡಿಮೆ ರೇಟ್​ಗೆ ಡ್ರಿಂಕ್ಸ್ ಮಾರಾಟಕ್ಕೆ ಯತ್ನ ನಡೆಸಿದ್ದರು. ವಿಚಾರದ ತಿಳಿದ ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಅಕ್ರಮ ಮಾರಾಟ ಜಾಲದಲ್ಲಿ ಮತ್ತಷ್ಟು ಆರೋಪಿಗಳ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

Published On - 8:22 am, Wed, 30 December 20

ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ