AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಚ್ಚಿದ್ದ ಹೂವಿನಕುಂಡ ನೋಡಲು ಹೋದ ಬಾಲಕನಿಗೆ ಗಾಯ, ಆಸ್ಪತ್ರೆಗೆ ದಾಖಲಿಸಲು ಪೋಷಕರ ಪರದಾಟ

ಬೆಂಗಳೂರು: ನಿನ್ನೆ ರಾತ್ರಿ ಪಟಾಕಿ ಹೊಡೆಯುವ ವೇಳೆ 12 ವರ್ಷದ ಬಾಲಕನ ಕಣ್ಣಿಗೇ ಪಟಾಕಿ ಸಿಡಿದು ಕಣ್ಣಿನ ಗುಡ್ಡೆಗೆ ಗಾಯವಾಗಿರುವ ಘಟನೆ ಬೆಂಗಳೂರಿನ ವಿಜಯಾನಂದ ನಗರದಲ್ಲಿ ನಡೆದಿದೆ. ಹಚ್ಚಿದ್ದ ಹೂವಿನಕುಂಡ ನೋಡಲು ಬಾಲಕ ಹೋದಾಗ ಈ ಘಟನೆ ಸಂಭವಿಸಿದೆ. ಅಮಾಯಕ ಬಾಲಕನಿಗೆ ಸಿಡಿದ ಪಟಾಕಿ: ತಡರಾತ್ರಿ 8 ರಿಂದ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಾಲಕನಿಗೆ ಚಿಕಿತ್ಸೆ ಕೊಡಿಸಲು ಪೋಷಕರು ಪರದಾಡಿದ್ದಾರೆ. ಹಲವು ಕಣ್ಣಿನ ಆಸ್ಪತ್ರೆಗಳಿಗೆ ಅಲೆದರೂ ಚಿಕಿತ್ಸೆ ಸಿಕ್ಕಿಲ್ಲ. ಕೋವಿಡ್ ನಡುವೆ ಕಣ್ಣಿನ […]

ಹಚ್ಚಿದ್ದ ಹೂವಿನಕುಂಡ ನೋಡಲು ಹೋದ ಬಾಲಕನಿಗೆ ಗಾಯ, ಆಸ್ಪತ್ರೆಗೆ ದಾಖಲಿಸಲು ಪೋಷಕರ ಪರದಾಟ
ಆಯೇಷಾ ಬಾನು
|

Updated on: Nov 15, 2020 | 1:50 PM

Share

ಬೆಂಗಳೂರು: ನಿನ್ನೆ ರಾತ್ರಿ ಪಟಾಕಿ ಹೊಡೆಯುವ ವೇಳೆ 12 ವರ್ಷದ ಬಾಲಕನ ಕಣ್ಣಿಗೇ ಪಟಾಕಿ ಸಿಡಿದು ಕಣ್ಣಿನ ಗುಡ್ಡೆಗೆ ಗಾಯವಾಗಿರುವ ಘಟನೆ ಬೆಂಗಳೂರಿನ ವಿಜಯಾನಂದ ನಗರದಲ್ಲಿ ನಡೆದಿದೆ. ಹಚ್ಚಿದ್ದ ಹೂವಿನಕುಂಡ ನೋಡಲು ಬಾಲಕ ಹೋದಾಗ ಈ ಘಟನೆ ಸಂಭವಿಸಿದೆ.

ಅಮಾಯಕ ಬಾಲಕನಿಗೆ ಸಿಡಿದ ಪಟಾಕಿ: ತಡರಾತ್ರಿ 8 ರಿಂದ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಾಲಕನಿಗೆ ಚಿಕಿತ್ಸೆ ಕೊಡಿಸಲು ಪೋಷಕರು ಪರದಾಡಿದ್ದಾರೆ. ಹಲವು ಕಣ್ಣಿನ ಆಸ್ಪತ್ರೆಗಳಿಗೆ ಅಲೆದರೂ ಚಿಕಿತ್ಸೆ ಸಿಕ್ಕಿಲ್ಲ. ಕೋವಿಡ್ ನಡುವೆ ಕಣ್ಣಿನ ಆಸ್ಪತ್ರೆಗಳು ಬಾಲಕನನ್ನು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ. ಬಳಿಕ ರಾತ್ರಿ 11.30ರ ವೇಳೆಗೆ ಮಿಂಟೋ ಆಸ್ಪತ್ರೆಗೆ ದಾಖಲಿಸಿದ್ದು ಅದೃಷ್ಟವಶಾತ್ ಬಾಲಕ ಅಪಾಯದಿಂದ ಪಾರಾಗಿದ್ದಾನೆ.

ಇನ್ನು ನಾವು ತಡ ರಾತ್ರಿ ಹಲವು ಆಸ್ಪತ್ರೆಗಳಿಗೆ ಅಲೆದಾಡ್ದಿವಿ ಆದ್ರೆ ಎಲ್ಲೂ ಚಿಕಿತ್ಸೆ ಕೊಡಲಿಲ್ಲ. ಕೊನೆಗೆ ಮಿಂಟೋ ಆಸ್ಪತ್ರೆ ದಾಖಲಿಸಿಕೊಂಡಿದೆ. ಇಂತಹ ಸಮಯದಲ್ಲಿ ಆಸ್ಪತ್ರೆಗಳು ಚಿಕಿತ್ಸೆ ಕೊಡದಿದ್ರೆ ಹೇಗೆ ಅಂತಾ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೂ ನಿಮ್ಮ ಮಕ್ಕಳ ಬಗ್ಗೆ ಕಾಳಜಿ ವಹಿಸಿ, ಪಟಾಕಿ ಹೊಡೆಯುವಾಗ ಪೋಷಕರು ಜೊತೆಯಲ್ಲಿದ್ದರೆ ಒಳ್ಳೆಯದು ಎಂದು ಗಾಯಗೊಂಡ ಬಾಲಕನ ಪೋಷಕರು ಮನವಿ ಮಾಡಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಸಿದ್ರೆ ಗಾಯಾಳುಗಳ ಸಂಖ್ಯೆ ಕಡಿಮೆ: ಕೋವಿಡ್ ಹಾಗೂ ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ಈ ವರ್ಷ ಪಟಾಕಿ ಸಿಡಿದು ಗಾಯಗೊಂಡವರ ಸಂಖ್ಯೆ ಕಡಿಮೆಯಾಗಿದೆಯಂತೆ. ಬೆಂಗಳೂರಿನಲ್ಲಿ ಕಳೆದ 48 ಗಂಟೆಯಲ್ಲಿ ಮಿಂಟೋ ಕಣ್ಣಿನ ಆಸ್ಪತ್ರೆಗೆ ಕೇವಲ ಒಂದು ಕೇಸ್ ದಾಖಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದ್ರೆ ಗಾಯಾಳುಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಮಿಂಟೋ ಕಣ್ಣಿನ ಆಸ್ಪತ್ರೆಯ ವೈದ್ಯೆ ವಿದ್ಯಾದೇವಿ ಮಾಹಿತಿ ನೀಡಿದ್ದಾರೆ.

ರಸ್ತೆಯಲ್ಲಿ ನಿಂತು ಹೂವಿನಕುಂಡ ಹೊಡೆಯುವುದನ್ನು ನೋಡುತ್ತಿದ್ದ ಬಾಲಕನಿಗೆ ಪಟಾಕಿ ಸಿಡಿದು ಕಣ್ಣಿಗೆ ಗಾಯವಾಗಿದೆ. ಸದ್ಯ ಬಾಲಕನಿಗೆ ಚಿಕಿತ್ಸೆ ನೀಡಿದ್ದೇವೆ. ಯಾವುದೇ ಅಪಾಯವಾಗಿಲ್ಲ. ಆತನಿಗೆ ಗಂಭೀರ ಸ್ವರೂಪದ ಗಾಯಗಳಾಗಿಲ್ಲ. ಮುಖ ಮಾತ್ರ ಸುಟ್ಟಿದ್ದು ಕಣ್ಣಿಗೆ ಹಾನಿಯಾಗಿಲ್ಲ ಎಂದು ತಿಳಿಸಿದ್ರು.

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​