AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಚ್ಚಿದ್ದ ಹೂವಿನಕುಂಡ ನೋಡಲು ಹೋದ ಬಾಲಕನಿಗೆ ಗಾಯ, ಆಸ್ಪತ್ರೆಗೆ ದಾಖಲಿಸಲು ಪೋಷಕರ ಪರದಾಟ

ಬೆಂಗಳೂರು: ನಿನ್ನೆ ರಾತ್ರಿ ಪಟಾಕಿ ಹೊಡೆಯುವ ವೇಳೆ 12 ವರ್ಷದ ಬಾಲಕನ ಕಣ್ಣಿಗೇ ಪಟಾಕಿ ಸಿಡಿದು ಕಣ್ಣಿನ ಗುಡ್ಡೆಗೆ ಗಾಯವಾಗಿರುವ ಘಟನೆ ಬೆಂಗಳೂರಿನ ವಿಜಯಾನಂದ ನಗರದಲ್ಲಿ ನಡೆದಿದೆ. ಹಚ್ಚಿದ್ದ ಹೂವಿನಕುಂಡ ನೋಡಲು ಬಾಲಕ ಹೋದಾಗ ಈ ಘಟನೆ ಸಂಭವಿಸಿದೆ. ಅಮಾಯಕ ಬಾಲಕನಿಗೆ ಸಿಡಿದ ಪಟಾಕಿ: ತಡರಾತ್ರಿ 8 ರಿಂದ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಾಲಕನಿಗೆ ಚಿಕಿತ್ಸೆ ಕೊಡಿಸಲು ಪೋಷಕರು ಪರದಾಡಿದ್ದಾರೆ. ಹಲವು ಕಣ್ಣಿನ ಆಸ್ಪತ್ರೆಗಳಿಗೆ ಅಲೆದರೂ ಚಿಕಿತ್ಸೆ ಸಿಕ್ಕಿಲ್ಲ. ಕೋವಿಡ್ ನಡುವೆ ಕಣ್ಣಿನ […]

ಹಚ್ಚಿದ್ದ ಹೂವಿನಕುಂಡ ನೋಡಲು ಹೋದ ಬಾಲಕನಿಗೆ ಗಾಯ, ಆಸ್ಪತ್ರೆಗೆ ದಾಖಲಿಸಲು ಪೋಷಕರ ಪರದಾಟ
ಆಯೇಷಾ ಬಾನು
ಆಯೇಷಾ ಬಾನು|

Updated on: Nov 15, 2020 | 1:50 PM

Share

ಬೆಂಗಳೂರು: ನಿನ್ನೆ ರಾತ್ರಿ ಪಟಾಕಿ ಹೊಡೆಯುವ ವೇಳೆ 12 ವರ್ಷದ ಬಾಲಕನ ಕಣ್ಣಿಗೇ ಪಟಾಕಿ ಸಿಡಿದು ಕಣ್ಣಿನ ಗುಡ್ಡೆಗೆ ಗಾಯವಾಗಿರುವ ಘಟನೆ ಬೆಂಗಳೂರಿನ ವಿಜಯಾನಂದ ನಗರದಲ್ಲಿ ನಡೆದಿದೆ. ಹಚ್ಚಿದ್ದ ಹೂವಿನಕುಂಡ ನೋಡಲು ಬಾಲಕ ಹೋದಾಗ ಈ ಘಟನೆ ಸಂಭವಿಸಿದೆ.

ಅಮಾಯಕ ಬಾಲಕನಿಗೆ ಸಿಡಿದ ಪಟಾಕಿ: ತಡರಾತ್ರಿ 8 ರಿಂದ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಾಲಕನಿಗೆ ಚಿಕಿತ್ಸೆ ಕೊಡಿಸಲು ಪೋಷಕರು ಪರದಾಡಿದ್ದಾರೆ. ಹಲವು ಕಣ್ಣಿನ ಆಸ್ಪತ್ರೆಗಳಿಗೆ ಅಲೆದರೂ ಚಿಕಿತ್ಸೆ ಸಿಕ್ಕಿಲ್ಲ. ಕೋವಿಡ್ ನಡುವೆ ಕಣ್ಣಿನ ಆಸ್ಪತ್ರೆಗಳು ಬಾಲಕನನ್ನು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ. ಬಳಿಕ ರಾತ್ರಿ 11.30ರ ವೇಳೆಗೆ ಮಿಂಟೋ ಆಸ್ಪತ್ರೆಗೆ ದಾಖಲಿಸಿದ್ದು ಅದೃಷ್ಟವಶಾತ್ ಬಾಲಕ ಅಪಾಯದಿಂದ ಪಾರಾಗಿದ್ದಾನೆ.

ಇನ್ನು ನಾವು ತಡ ರಾತ್ರಿ ಹಲವು ಆಸ್ಪತ್ರೆಗಳಿಗೆ ಅಲೆದಾಡ್ದಿವಿ ಆದ್ರೆ ಎಲ್ಲೂ ಚಿಕಿತ್ಸೆ ಕೊಡಲಿಲ್ಲ. ಕೊನೆಗೆ ಮಿಂಟೋ ಆಸ್ಪತ್ರೆ ದಾಖಲಿಸಿಕೊಂಡಿದೆ. ಇಂತಹ ಸಮಯದಲ್ಲಿ ಆಸ್ಪತ್ರೆಗಳು ಚಿಕಿತ್ಸೆ ಕೊಡದಿದ್ರೆ ಹೇಗೆ ಅಂತಾ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೂ ನಿಮ್ಮ ಮಕ್ಕಳ ಬಗ್ಗೆ ಕಾಳಜಿ ವಹಿಸಿ, ಪಟಾಕಿ ಹೊಡೆಯುವಾಗ ಪೋಷಕರು ಜೊತೆಯಲ್ಲಿದ್ದರೆ ಒಳ್ಳೆಯದು ಎಂದು ಗಾಯಗೊಂಡ ಬಾಲಕನ ಪೋಷಕರು ಮನವಿ ಮಾಡಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಸಿದ್ರೆ ಗಾಯಾಳುಗಳ ಸಂಖ್ಯೆ ಕಡಿಮೆ: ಕೋವಿಡ್ ಹಾಗೂ ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ಈ ವರ್ಷ ಪಟಾಕಿ ಸಿಡಿದು ಗಾಯಗೊಂಡವರ ಸಂಖ್ಯೆ ಕಡಿಮೆಯಾಗಿದೆಯಂತೆ. ಬೆಂಗಳೂರಿನಲ್ಲಿ ಕಳೆದ 48 ಗಂಟೆಯಲ್ಲಿ ಮಿಂಟೋ ಕಣ್ಣಿನ ಆಸ್ಪತ್ರೆಗೆ ಕೇವಲ ಒಂದು ಕೇಸ್ ದಾಖಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದ್ರೆ ಗಾಯಾಳುಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಮಿಂಟೋ ಕಣ್ಣಿನ ಆಸ್ಪತ್ರೆಯ ವೈದ್ಯೆ ವಿದ್ಯಾದೇವಿ ಮಾಹಿತಿ ನೀಡಿದ್ದಾರೆ.

ರಸ್ತೆಯಲ್ಲಿ ನಿಂತು ಹೂವಿನಕುಂಡ ಹೊಡೆಯುವುದನ್ನು ನೋಡುತ್ತಿದ್ದ ಬಾಲಕನಿಗೆ ಪಟಾಕಿ ಸಿಡಿದು ಕಣ್ಣಿಗೆ ಗಾಯವಾಗಿದೆ. ಸದ್ಯ ಬಾಲಕನಿಗೆ ಚಿಕಿತ್ಸೆ ನೀಡಿದ್ದೇವೆ. ಯಾವುದೇ ಅಪಾಯವಾಗಿಲ್ಲ. ಆತನಿಗೆ ಗಂಭೀರ ಸ್ವರೂಪದ ಗಾಯಗಳಾಗಿಲ್ಲ. ಮುಖ ಮಾತ್ರ ಸುಟ್ಟಿದ್ದು ಕಣ್ಣಿಗೆ ಹಾನಿಯಾಗಿಲ್ಲ ಎಂದು ತಿಳಿಸಿದ್ರು.

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ