AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌, ತಾಳಿ ಕಟ್ಟಿದ ಗಂಡನನ್ನೇ ಕತ್ತು ಹಿಚುಕಿ ಕೊಂದಳಾ ಪತ್ನಿ?

ದಾವಣಗೆರೆ: ಕ್ರಿಮಿನಲ್‌ಗಳಿಗೆ ಅಪರಾಧ ಮಾಡಲು ನೂರು ದಾರಿಗಳಿದ್ರೆ, ಅದನ್ನು ಪತ್ತೆ ಹಚ್ಚೋಕೆ ನೂರಾ ಒಂದು ದಾರಿಗಳು ಅನ್ನೋ ಮಾತು ಕ್ರೈಮ್‌ ಜಗತ್ತಿನಲ್ಲಿದೆ. ಇದು ಗೊತ್ತಿರಲಿಲ್ಲ ಅಂತಾ ಕಾಣುತ್ತೆ ಈ ಪಾತಕಿಗಳಿಗೆ. ಮಕ್ಕಳು ಮತ್ತು ತಮ್ಮನೊಂದಿಗೆ ಸೇರಿ ತಾಳಿ ಕಟ್ಟಿದ ಗಂಡನನ್ನೇ ಕೊಂದಿದ್ದ ಪತ್ನಿಯನ್ನ ದಾವಣಗೆರೆ ಪೊಲೀಸರು ಅರೆಸ್ಟ್‌ ಮಾಡಿ ಕಂಬಿ ಹಿಂದೆ ಕಳಿಸಿದ್ದಾರೆ. ಹೌದು ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ನಿಟ್ಟೂರ ಗ್ರಾಮದ ಬಸವರಾಜಪ್ಪ ಎಂಬ ವ್ಯಕ್ತಿಯನ್ನ ಆತನ ಪತ್ನಿ 36 ವರ್ಷದ ರೂಪಾ, ದಿನವೂ ಕುಡಿದು […]

ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌, ತಾಳಿ ಕಟ್ಟಿದ ಗಂಡನನ್ನೇ ಕತ್ತು ಹಿಚುಕಿ ಕೊಂದಳಾ ಪತ್ನಿ?
Guru
Guru| Edited By: |

Updated on:Jul 25, 2020 | 2:47 PM

Share

ದಾವಣಗೆರೆ: ಕ್ರಿಮಿನಲ್‌ಗಳಿಗೆ ಅಪರಾಧ ಮಾಡಲು ನೂರು ದಾರಿಗಳಿದ್ರೆ, ಅದನ್ನು ಪತ್ತೆ ಹಚ್ಚೋಕೆ ನೂರಾ ಒಂದು ದಾರಿಗಳು ಅನ್ನೋ ಮಾತು ಕ್ರೈಮ್‌ ಜಗತ್ತಿನಲ್ಲಿದೆ. ಇದು ಗೊತ್ತಿರಲಿಲ್ಲ ಅಂತಾ ಕಾಣುತ್ತೆ ಈ ಪಾತಕಿಗಳಿಗೆ. ಮಕ್ಕಳು ಮತ್ತು ತಮ್ಮನೊಂದಿಗೆ ಸೇರಿ ತಾಳಿ ಕಟ್ಟಿದ ಗಂಡನನ್ನೇ ಕೊಂದಿದ್ದ ಪತ್ನಿಯನ್ನ ದಾವಣಗೆರೆ ಪೊಲೀಸರು ಅರೆಸ್ಟ್‌ ಮಾಡಿ ಕಂಬಿ ಹಿಂದೆ ಕಳಿಸಿದ್ದಾರೆ.

ಹೌದು ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ನಿಟ್ಟೂರ ಗ್ರಾಮದ ಬಸವರಾಜಪ್ಪ ಎಂಬ ವ್ಯಕ್ತಿಯನ್ನ ಆತನ ಪತ್ನಿ 36 ವರ್ಷದ ರೂಪಾ, ದಿನವೂ ಕುಡಿದು ಬಂದು ಗಲಾಟೆ ಮಾಡುತ್ತಾನೆ ಅಂತಾ ತನ್ನ ತಮ್ಮ 27 ವರ್ಷದ ಸಂತೋಷ, ಪುತ್ರರಾದ 20 ವರ್ಷದ ಕಿರಣ್ ಕುಮಾರ್, 19 ವರ್ಷದ ಅರುಣ್ ಕುಮಾರ್‌ ಜೊತೆ ಸೇರಿ ಕತ್ತು ಹಿಚುಕಿ ಕೊಂದಿದ್ದಳು. ನಂತರ ಇದನ್ನು ಆತ್ಮಹತ್ಯೆ ಎಂದು ಬಿಂಬಿಸಿದ್ದಳು. ಅಷ್ಟೇ ಅಲ್ಲ ನಂತರ ತಾನೇ ಪೊಲೀಸ್ ಠಾಣೆಗೆ ಹೋಗಿ ಪತಿ ಸಾಲ ಮಾಡಿದ್ದ, ಸಾಲಗಾರರ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರು ನೀಡಿದ್ದಳು.

ಆದ್ರೆ ಪೊಲೀಸರಿಗೆ ಯಾಕೋ ಅನುಮಾನ ಬಂದಿದೆ. ಹೀಗಾಗಿ ಇಡೀ ಪ್ರಕರಣದ ಬಗ್ಗೆನೆೇ ಸಂಶಯ ಬಂದ ಹಿನ್ನೆಲೆಯಲ್ಲಿ ಪೊಲೀಸರು ಶವದ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದರು. ಪೋಸ್ಟ್‌ ಮಾರ್ಟಮ್‌ನಲ್ಲಿ ಬಸವರಾಜಪ್ಪ ಅವರನ್ನ ಕುತ್ತಿಗೆ ಹಿಚುಕಿ ಉಸಿರು ಗಟ್ಟಿಸಿ ಕೊಲೆ ಮಾಡಲಾಗಿದೆ ಎಂದು ವೈದ್ಯಕೀಯ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ಪತ್ನಿಯನ್ನ ವಶಕ್ಕೆ ಪಡೆದಾಗ ಸತ್ಯ ಹೊರಬಿದ್ದಿದೆ. ಈ ಸಂಬಂಧ ಹರಿಹರ ತಾಲೂಕಿನ ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 5:29 pm, Thu, 23 July 20

Follow Us
Guru
Guru
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!