AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೇ ನಿಲ್ದಾಣದ ಮೆಷಿನ್‌ ಮೇಲೆ ಹಿಂದಿ ಫಲಕ: Twitterನಲ್ಲಿ ಶುರುವಾಯ್ತು ಭಾಷಾ ಸಮರ

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಖಾಸಗಿ ಕಂಪನಿಯೊಂದು ಕೈ ತೊಳೆಯುವ ಹಾಗೂ ಶೂ ಪಾಲಿಷ್ ಮೆಷಿನ್‌ಗಳನ್ನ ರೇಲ್ವೇ ಇಲಾಖೆಗೆ ಕೊಡುಗೆಯಾಗಿ ನೀಡಿತ್ತು. ಇದನ್ನ ನಗರದ ಕೆಎಸ್‌ಆರ್‌ ರೈಲ್ವೆ ನಿಲ್ದಾಣದಲ್ಲಿ ಅಳವಡಿಸಲಾಗಿತ್ತು. ಆದರೆ, ಮೆಷಿನ್‌ಗಳ ಮೇಲೆ ಹಿಂದಿ ಫಲಕವನ್ನ ಅಳವಡಿಸಿರುವುದು ಇದೀಗ ಟ್ವಿಟರ್​ನಲ್ಲಿ ಭಾರಿ ಸಮರಕ್ಕೆ ಅಣಿಮಾಡಿಕೊಟ್ಟಿದೆ. ದಕ್ಷಿಣ ಭಾರತದಲ್ಲಿ ಹಿಂದಿ ಭಾಷೆಯಲ್ಲಿ ಫಲಕವನ್ನ ಯಾಕೆ ಅಳವಡಿಸಲಾಗಿದೆ ಎಂದು ಕೆಲವರು ರೈಲ್ವೇ ಇಲಾಖೆಗೆ ಪ್ರಶ್ನಿಸಿದ್ದಾರೆ. ಇದಕ್ಕೆ ರೇಲ್ವೇ ಇಲಾಖೆಯು ಈ ಮೇಷಿನ್​ ಭಾರತದಲ್ಲಿದೆ ಎಂದು ಉತ್ತರ ನೀಡಿದೆ. […]

ರೈಲ್ವೇ ನಿಲ್ದಾಣದ ಮೆಷಿನ್‌ ಮೇಲೆ ಹಿಂದಿ ಫಲಕ: Twitterನಲ್ಲಿ ಶುರುವಾಯ್ತು ಭಾಷಾ ಸಮರ
KUSHAL V
|

Updated on: Aug 10, 2020 | 1:45 PM

Share

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಖಾಸಗಿ ಕಂಪನಿಯೊಂದು ಕೈ ತೊಳೆಯುವ ಹಾಗೂ ಶೂ ಪಾಲಿಷ್ ಮೆಷಿನ್‌ಗಳನ್ನ ರೇಲ್ವೇ ಇಲಾಖೆಗೆ ಕೊಡುಗೆಯಾಗಿ ನೀಡಿತ್ತು. ಇದನ್ನ ನಗರದ ಕೆಎಸ್‌ಆರ್‌ ರೈಲ್ವೆ ನಿಲ್ದಾಣದಲ್ಲಿ ಅಳವಡಿಸಲಾಗಿತ್ತು. ಆದರೆ, ಮೆಷಿನ್‌ಗಳ ಮೇಲೆ ಹಿಂದಿ ಫಲಕವನ್ನ ಅಳವಡಿಸಿರುವುದು ಇದೀಗ ಟ್ವಿಟರ್​ನಲ್ಲಿ ಭಾರಿ ಸಮರಕ್ಕೆ ಅಣಿಮಾಡಿಕೊಟ್ಟಿದೆ.

ದಕ್ಷಿಣ ಭಾರತದಲ್ಲಿ ಹಿಂದಿ ಭಾಷೆಯಲ್ಲಿ ಫಲಕವನ್ನ ಯಾಕೆ ಅಳವಡಿಸಲಾಗಿದೆ ಎಂದು ಕೆಲವರು ರೈಲ್ವೇ ಇಲಾಖೆಗೆ ಪ್ರಶ್ನಿಸಿದ್ದಾರೆ. ಇದಕ್ಕೆ ರೇಲ್ವೇ ಇಲಾಖೆಯು ಈ ಮೇಷಿನ್​ ಭಾರತದಲ್ಲಿದೆ ಎಂದು ಉತ್ತರ ನೀಡಿದೆ. ಇಲಾಖೆಯ ಉತ್ತರಕ್ಕೆ ಆಕ್ರೋಶಗೊಂಡಿರುವ ಕೆಲವರು ನಾವು ಭಾರತೀಯರು. ಆದ್ರೆ ಹಿಂದಿ ನಮ್ಮ ಮಾತೃಭಾಷೆ ಅಲ್ಲ ಎಂದು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ.

ಇದಕ್ಕೆ ಟ್ವಿಟ್ಟರ್‌ನಲ್ಲಿ ಉತ್ತರ ನೀಡಿರುವ ರೈಲ್ವೆ ಅಧಿಕಾರಿಗಳು ಮಹತ್ವದ ಮಾಹಿತಿಯನ್ನ ಸ್ಥಳೀಯ ಭಾಷೆಯಲ್ಲಿ ನೀಡುವ ಪ್ರಯತ್ನ ಮಾಡ್ತೇವೆ. ಆದರೆ, ಫಲಕದಲ್ಲೂ ಭಾಷೆ ವಿಷಯ ಎತ್ತುವುದು ಸರಿಯಲ್ಲ. ಈ ಮೆಷಿನ್​ನ ಕಂಪನಿಯೊಂದು ಕೊಡುಗೆಯಾಗಿ ನೀಡಿದ್ದಾರೆ. ಅವರ ಕಾರ್ಯವನ್ನ ಅಭಿನಂದಿಸುವ ಬದಲು ಪ್ರತಿ ಬಾರಿಯೂ ಹಿಂದಿ ವಿರೋಧಿ ನಿಲುವು ಪ್ರದರ್ಶನ ಮಾಡುವುದು ಸಮಂಜಸವಲ್ಲ ಎಂದು ಟ್ವೀಟ್​ ಮಾಡಿದೆ.

ರೈಲ್ವೇ ಇಲಾಖೆಯ ವಾದವನ್ನು ಒಪ್ಪದ ಕೆಲವರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ