ನಕಲಿ ನೋಟು ಪ್ರಿಂಟ್​ ಮಾಡ್ತಿದ್ದ ಇಬ್ಬರು ಖದೀಮರು ಅಂದರ್

ಬೆಳಗಾವಿ: ನಕಲಿ ನೋಟುಗಳ ಹಾವಳಿಗೆ ಜಿಲ್ಲೆಯ ಜನತೆ ಬೆಚ್ಚಿಬಿದ್ದಿದ್ದಾರೆ. ಮುರಗೋಡ ಹಾಗೂ ಸದಲಗಾ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಿಪ್ಪಾಣಿ ತಾಲೂಕಿನ ಬೋರಗಾವ ಗ್ರಾಮದಲ್ಲಿ ನಕಲಿ ನೋಟುಗಳನ್ನು ಪ್ರಿಂಟ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸೆರೆಹಿಡಿದಿದ್ದಾರೆ. ಬೋರಗಾವ ಗ್ರಾಮದ ವಿಜಯ್ ಬೆಡಕಿಹಾಳ ಮತ್ತು ಅಕ್ಷಯ್ ವಡ್ಡರ್ ಬಂಧಿತರು. ಮುರಗೋಡದ ಬಾರ್‌ವೊಂದರಲ್ಲಿ ನಕಲಿ ನೋಟು ಚಲಾವಣೆಗೆ ಯುವಕನೊಬ್ಬ ಪ್ರಯತ್ನಿಸಿದ್ದಾನೆ. ಈ ವೇಳೆ ನಕಲಿ ನೋಟೆಂದು ತಿಳಿದ ತಕ್ಷಣ, ಮುರಗೋಡ‌‌ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆಗ […]

ನಕಲಿ ನೋಟು ಪ್ರಿಂಟ್​ ಮಾಡ್ತಿದ್ದ ಇಬ್ಬರು ಖದೀಮರು ಅಂದರ್
ಸಾಧು ಶ್ರೀನಾಥ್​

Updated on: Feb 17, 2020 | 2:53 PM

ಬೆಳಗಾವಿ: ನಕಲಿ ನೋಟುಗಳ ಹಾವಳಿಗೆ ಜಿಲ್ಲೆಯ ಜನತೆ ಬೆಚ್ಚಿಬಿದ್ದಿದ್ದಾರೆ. ಮುರಗೋಡ ಹಾಗೂ ಸದಲಗಾ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಿಪ್ಪಾಣಿ ತಾಲೂಕಿನ ಬೋರಗಾವ ಗ್ರಾಮದಲ್ಲಿ ನಕಲಿ ನೋಟುಗಳನ್ನು ಪ್ರಿಂಟ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸೆರೆಹಿಡಿದಿದ್ದಾರೆ. ಬೋರಗಾವ ಗ್ರಾಮದ ವಿಜಯ್ ಬೆಡಕಿಹಾಳ ಮತ್ತು ಅಕ್ಷಯ್ ವಡ್ಡರ್ ಬಂಧಿತರು.

ಮುರಗೋಡದ ಬಾರ್‌ವೊಂದರಲ್ಲಿ ನಕಲಿ ನೋಟು ಚಲಾವಣೆಗೆ ಯುವಕನೊಬ್ಬ ಪ್ರಯತ್ನಿಸಿದ್ದಾನೆ. ಈ ವೇಳೆ ನಕಲಿ ನೋಟೆಂದು ತಿಳಿದ ತಕ್ಷಣ, ಮುರಗೋಡ‌‌ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆಗ ಬೋರಗಾವ ಗ್ರಾಮದಲ್ಲಿ ನಕಲಿ ನೋಟು ಪಡೆದ ಬಗ್ಗೆ ಯುವಕ ಮಾಹಿತಿ ನೀಡಿದ್ದಾನೆ.

ಪ್ರಮುಖ ಆರೋಪಿಗಾಗಿ ಶೋಧ:
ಖಚಿತ ಮಾಹಿತಿ ಮೇರೆಗೆ ನಕಲಿ ನೋಟು ಪ್ರಿಂಟ್ ಮಾಡುತ್ತಿದ್ದ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಪ್ರಿಂಟರ್ ಸುಡಲು‌ ಆರೋಪಿಗಳು ಯತ್ನಿಸಿದ್ದಾರೆ. ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದ ಪೊಲೀಸರು, 500 ರೂ. ಮುಖಬೆಲೆಯ 14 ನಕಲಿ ನೋಟುಗಳು, ಪ್ರಿಂಟರ್ ಜಪ್ತಿ ಮಾಡಿದ್ದಾರೆ. ಆರೋಪಿಗಳು 5 ಸಾವಿರ ರೂಪಾಯಿ ಅಸಲಿ ನೋಟು ಪಡೆದು 10 ಸಾವಿರ ರೂ. ನಕಲಿ ನೋಟು ನೀಡುತ್ತಿದ್ದರು ಎಂದು ತಿಳಿದು ಬಂದಿದೆ. ಹಾಗಾಗಿ ಪ್ರಮುಖ ಆರೋಪಿಗಾಗಿ ಮುರಗೋಡ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.


Published On - 2:24 pm, Mon, 17 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us