ಟೌನ್‌ಹಾಲ್‌ ಬಳಿ ಅನಗತ್ಯ ಟ್ರಾಫಿಕ್​ನಲ್ಲಿ ಸಿಲುಕಿ ಪತರಗುಟ್ಟಿದ ಎರಡು ಆ್ಯಂಬುಲೆನ್ಸ್‌

ಬೆಂಗಳೂರು: ಲಾಕ್ ಡೌನ್ ಸಡಿಲಿಕೆ ಬೆನ್ನಲ್ಲೇ ನೂರಾರು ವಾಹನಗಳು ರಸ್ತೆಗಿಳಿದಿವೆ. ಹೀಗಾಗಿ ನಗರದ ಬಹುತೇಕ ಕಡೆ ಟ್ರಾಫಿಕ್‌ ಜಾಮ್‌ ಸಮಸ್ಯೆ ಉಂಟಾಗಿದ್ದು, ಟೌನ್‌ಹಾಲ್‌ ಎದುರು ಅರ್ಧ ಕಿಲೋಮೀಟರ್‌ವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ. ಟ್ರಾಫಿಕ್‌ ಜಾಮ್‌ನಲ್ಲಿ ಎರಡು ಆ್ಯಂಬುಲೆನ್ಸ್‌ಗಳು ಸಿಲುಕಿಕೊಂಡಿದ್ದು, ಟ್ರಾಫಿಕ್ ಜಾಮ್‌ ತೆರವಿಗೆ ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಲಾಕ್ ಡೌನ್ ಸಡಿಲಿಕೆಯಿಂದಾಗಿ ತುರ್ತುಸೇವೆಗಳಿಗೆ ತೊಂದರೆ ಉಂಟಾಗಿದ್ದು, ಇದೇ ರಿಯಾಯಿತಿ ಮುಂದಿಟ್ಟು ಕೆಲವರು ಅನಗತ್ಯವಾಗಿ ರಸ್ತೆಗೆ ಇಳಿದಿದ್ದಾರೆ. ನಗರದಲ್ಲಿ ದ್ವಿಮುಖ ಸಂಚಾರವನ್ನು ಕಡಿತಗೊಳಿಸಿ ಏಕಮುಖ ಸಂಚಾರವನ್ನು ನೀಡಲಾಗಿದೆ. ಬಹತೇಕ […]

ಟೌನ್‌ಹಾಲ್‌ ಬಳಿ ಅನಗತ್ಯ ಟ್ರಾಫಿಕ್​ನಲ್ಲಿ ಸಿಲುಕಿ ಪತರಗುಟ್ಟಿದ ಎರಡು ಆ್ಯಂಬುಲೆನ್ಸ್‌
ಸಾಧು ಶ್ರೀನಾಥ್​

Updated on: Apr 23, 2020 | 10:40 AM

ಬೆಂಗಳೂರು: ಲಾಕ್ ಡೌನ್ ಸಡಿಲಿಕೆ ಬೆನ್ನಲ್ಲೇ ನೂರಾರು ವಾಹನಗಳು ರಸ್ತೆಗಿಳಿದಿವೆ. ಹೀಗಾಗಿ ನಗರದ ಬಹುತೇಕ ಕಡೆ ಟ್ರಾಫಿಕ್‌ ಜಾಮ್‌ ಸಮಸ್ಯೆ ಉಂಟಾಗಿದ್ದು, ಟೌನ್‌ಹಾಲ್‌ ಎದುರು ಅರ್ಧ ಕಿಲೋಮೀಟರ್‌ವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ. ಟ್ರಾಫಿಕ್‌ ಜಾಮ್‌ನಲ್ಲಿ ಎರಡು ಆ್ಯಂಬುಲೆನ್ಸ್‌ಗಳು ಸಿಲುಕಿಕೊಂಡಿದ್ದು, ಟ್ರಾಫಿಕ್ ಜಾಮ್‌ ತೆರವಿಗೆ ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಲಾಕ್ ಡೌನ್ ಸಡಿಲಿಕೆಯಿಂದಾಗಿ ತುರ್ತುಸೇವೆಗಳಿಗೆ ತೊಂದರೆ ಉಂಟಾಗಿದ್ದು, ಇದೇ ರಿಯಾಯಿತಿ ಮುಂದಿಟ್ಟು ಕೆಲವರು ಅನಗತ್ಯವಾಗಿ ರಸ್ತೆಗೆ ಇಳಿದಿದ್ದಾರೆ. ನಗರದಲ್ಲಿ ದ್ವಿಮುಖ ಸಂಚಾರವನ್ನು ಕಡಿತಗೊಳಿಸಿ ಏಕಮುಖ ಸಂಚಾರವನ್ನು ನೀಡಲಾಗಿದೆ. ಬಹತೇಕ ರಸ್ತೆಗಳನ್ನು ಬ್ಯಾರಿಕೇಡ್​ಗಳಾಕಿ ಮುಚ್ಚಲಾಗಿದೆ. ಐಟಿ-ಬಿಟಿ ಸೇರಿದಂತೆ ಕೆಲ ವಲಯಗಳಿಗೆ ರಿಯಾಯಿತಿ ನೀಡಿದ್ದು, ವಾಚನ ಸಂಚಾರ ಹೆಚ್ಚಿದೆ. ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ಬೈಕ್, ಕಾರ್, ಗ್ರೂಡ್ಸ್ ವಾಹನಗಳ ಸಂಖ್ಯೆ ಏರಿಕೆಯಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us