India Book of Records ಗೆ ದಾಖಲು! ಧಾರವಾಡದ ಈ ಬಾಲಕಿಯ ಸಾಧನೆ ಏನು ಗೊತ್ತಾ?

ಧಾರವಾಡ: ಕೇವಲ ಎರಡೂವರೆ ವರ್ಷದ ಪುಟಾಣಿ ಬಾಲಕಿಯೊಬ್ಬಳು ತನ್ನ ತೊದಲು ನುಡಿಗಳಲ್ಲಿ ರಾಷ್ಟ್ರಗೀತೆ, ರಾಷ್ಟ್ರೀಯ ಲಾಂಛನಗಳು, ರಾಷ್ಟ್ರೀಯ ನಾಯಕರು, ಇತಿಹಾಸದ ಘಟನಾವಳಿಗಳು, ಪ್ರಾಣಿ-ಪಕ್ಷಿಗಳ ಅನುಕರಣೆ ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ಗ್‌ಗೆ ಸೇರ್ಪಡೆಯಾಗಿದ್ದಾಳೆ. ಮೂಲತಃ ಧಾರವಾಡ ತಾಲೂಕಿನ ಜೋಡಳ್ಳಿ ಗ್ರಾಮದ ಉಮೇಶ ಮುತ್ತಗಿ-ಸಕ್ಕೂಬಾಯಿ ದಂಪತಿಯ ಎರಡೂವರೆ ವರ್ಷದ ಮಗು ವೈಷ್ಣವಿ ಈ ಸಾಧನೆಗೈದ ಬಾಲಕಿ. ಬಾಲಕಿಯ ತಂದೆ ಉಮೇಶ ಮುತ್ತಗಿ ಉತ್ತರ ಪ್ರದೇಶದ ಮಥುರಾದಲ್ಲಿ ಭಾರತೀಯ ಸೇನೆಯ 51 ಮೀಡಿಯಂ ರೆಜಿಮೆಂಟ್‌ನಲ್ಲಿ ಹವಾಲ್ದಾರರಾಗಿ ದೇಶ ಸೇವೆ […]

 India Book of Records ಗೆ ದಾಖಲು! ಧಾರವಾಡದ ಈ ಬಾಲಕಿಯ ಸಾಧನೆ ಏನು ಗೊತ್ತಾ?
Follow us
| Updated By: ಸಾಧು ಶ್ರೀನಾಥ್​

Updated on: Jun 26, 2020 | 11:13 AM

ಧಾರವಾಡ: ಕೇವಲ ಎರಡೂವರೆ ವರ್ಷದ ಪುಟಾಣಿ ಬಾಲಕಿಯೊಬ್ಬಳು ತನ್ನ ತೊದಲು ನುಡಿಗಳಲ್ಲಿ ರಾಷ್ಟ್ರಗೀತೆ, ರಾಷ್ಟ್ರೀಯ ಲಾಂಛನಗಳು, ರಾಷ್ಟ್ರೀಯ ನಾಯಕರು, ಇತಿಹಾಸದ ಘಟನಾವಳಿಗಳು, ಪ್ರಾಣಿ-ಪಕ್ಷಿಗಳ ಅನುಕರಣೆ ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ಗ್‌ಗೆ ಸೇರ್ಪಡೆಯಾಗಿದ್ದಾಳೆ.

ಮೂಲತಃ ಧಾರವಾಡ ತಾಲೂಕಿನ ಜೋಡಳ್ಳಿ ಗ್ರಾಮದ ಉಮೇಶ ಮುತ್ತಗಿ-ಸಕ್ಕೂಬಾಯಿ ದಂಪತಿಯ ಎರಡೂವರೆ ವರ್ಷದ ಮಗು ವೈಷ್ಣವಿ ಈ ಸಾಧನೆಗೈದ ಬಾಲಕಿ. ಬಾಲಕಿಯ ತಂದೆ ಉಮೇಶ ಮುತ್ತಗಿ ಉತ್ತರ ಪ್ರದೇಶದ ಮಥುರಾದಲ್ಲಿ ಭಾರತೀಯ ಸೇನೆಯ 51 ಮೀಡಿಯಂ ರೆಜಿಮೆಂಟ್‌ನಲ್ಲಿ ಹವಾಲ್ದಾರರಾಗಿ ದೇಶ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಮಗಳು ವೈಷ್ಣವಿ ಕಳೆದ ಮಾರ್ಚ್ ತಿಂಗಳಲ್ಲಿ India Book of Records ನಲ್ಲಿ ತನ್ನ ಪ್ರತಿಭೆಯ ಮೂಲಕ ದಾಖಲೆ ಬರೆದಿದ್ದಾಳೆ.

ಚಿಕ್ಕ ವಯಸ್ಸಿನಲ್ಲಿಯೇ ಅಮೋಘ ಸಾಧನೆ ವೈಷ್ಣವಿ ಚಿಕ್ಕ ವಯಸ್ಸಿರನಲ್ಲಿಯೇ ಸ್ಪಷ್ಟವಾಗಿ ರಾಷ್ಟ್ರ ಗೀತೆ, ಐದು ಸಂಸ್ಕೃತದ ಮಂತ್ರಗಳು, 170 ಇತಿಹಾಸದ ಮತ್ತು ಈಗಿನ ಶ್ರೇಷ್ಠ ನಾಯಕರ ಹೆಸರು ಹೇಳುವುದು, ಪ್ರಾಣಿ, ಪಕ್ಷಿ, ಹಣ್ಣು, ತರಕಾರಿ, ಸೌರ ಮಂಡಲದ ಗ್ರಹಗಳ ಹೆಸರು, ಗಣಿತದ ಚಿಹ್ನೆಗಳು, ವಾರಗಳ ಹೆಸರು, ತಿಂಗಳುಗಳು, ಶರೀರದ ವಿಭಿನ್ನ ಭಾಗಗಳ ಹೆಸರುಗಳನ್ನು ನಿಖರವಾಗಿ ಹೇಳುತ್ತಾಳೆ. ಜೊತೆಗೆ ಸಾಮಾನ್ಯ ಜ್ಞಾನದ ಪ್ರಶ್ನೆಗಳಿಗೆ ಉತ್ತರಿಸುವ ಜಾಣ್ಮೆಯಿದೆ. 1ರಿಂದ 70ರ ವರೆಗೆ ಅಂಕಿಗಳನ್ನ ಸರಳವಾಗಿ ಗುರುತಿಸುತ್ತಾಳೆ.

ಇದೆಲ್ಲಕ್ಕಿಂತ ಅಚ್ಚರಿಯಂದ್ರೆ ಅನೇಕ ಪ್ರಾಣಿ-ಪಕ್ಷಿಗಳ ಧ್ವನಿಯನ್ನು ಅನುಕರಣೆ ಮಾಡುವುದು. ಸ್ಪಷ್ಟವಾದ ವಾಕ್ ಚಾತುರ್ಯ ದಿಂದ ಎಳೆಯ ವಯಸ್ಸಿನಲ್ಲಿಯೇ ವೈಷ್ಣವಿ ಭಾರತದಲ್ಲಿ ಈ ದಾಖಲೆ ಬರೆದಿರುವುದು ಧಾರವಾಡ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. -ನರಸಿಂಹಮೂರ್ತಿ ಪ್ಯಾಟಿ

ತಾಜಾ ಸುದ್ದಿ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ