AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 India Book of Records ಗೆ ದಾಖಲು! ಧಾರವಾಡದ ಈ ಬಾಲಕಿಯ ಸಾಧನೆ ಏನು ಗೊತ್ತಾ?

ಧಾರವಾಡ: ಕೇವಲ ಎರಡೂವರೆ ವರ್ಷದ ಪುಟಾಣಿ ಬಾಲಕಿಯೊಬ್ಬಳು ತನ್ನ ತೊದಲು ನುಡಿಗಳಲ್ಲಿ ರಾಷ್ಟ್ರಗೀತೆ, ರಾಷ್ಟ್ರೀಯ ಲಾಂಛನಗಳು, ರಾಷ್ಟ್ರೀಯ ನಾಯಕರು, ಇತಿಹಾಸದ ಘಟನಾವಳಿಗಳು, ಪ್ರಾಣಿ-ಪಕ್ಷಿಗಳ ಅನುಕರಣೆ ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ಗ್‌ಗೆ ಸೇರ್ಪಡೆಯಾಗಿದ್ದಾಳೆ. ಮೂಲತಃ ಧಾರವಾಡ ತಾಲೂಕಿನ ಜೋಡಳ್ಳಿ ಗ್ರಾಮದ ಉಮೇಶ ಮುತ್ತಗಿ-ಸಕ್ಕೂಬಾಯಿ ದಂಪತಿಯ ಎರಡೂವರೆ ವರ್ಷದ ಮಗು ವೈಷ್ಣವಿ ಈ ಸಾಧನೆಗೈದ ಬಾಲಕಿ. ಬಾಲಕಿಯ ತಂದೆ ಉಮೇಶ ಮುತ್ತಗಿ ಉತ್ತರ ಪ್ರದೇಶದ ಮಥುರಾದಲ್ಲಿ ಭಾರತೀಯ ಸೇನೆಯ 51 ಮೀಡಿಯಂ ರೆಜಿಮೆಂಟ್‌ನಲ್ಲಿ ಹವಾಲ್ದಾರರಾಗಿ ದೇಶ ಸೇವೆ […]

 India Book of Records ಗೆ ದಾಖಲು! ಧಾರವಾಡದ ಈ ಬಾಲಕಿಯ ಸಾಧನೆ ಏನು ಗೊತ್ತಾ?
Guru
| Edited By: |

Updated on: Jun 26, 2020 | 11:13 AM

Share

ಧಾರವಾಡ: ಕೇವಲ ಎರಡೂವರೆ ವರ್ಷದ ಪುಟಾಣಿ ಬಾಲಕಿಯೊಬ್ಬಳು ತನ್ನ ತೊದಲು ನುಡಿಗಳಲ್ಲಿ ರಾಷ್ಟ್ರಗೀತೆ, ರಾಷ್ಟ್ರೀಯ ಲಾಂಛನಗಳು, ರಾಷ್ಟ್ರೀಯ ನಾಯಕರು, ಇತಿಹಾಸದ ಘಟನಾವಳಿಗಳು, ಪ್ರಾಣಿ-ಪಕ್ಷಿಗಳ ಅನುಕರಣೆ ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ಗ್‌ಗೆ ಸೇರ್ಪಡೆಯಾಗಿದ್ದಾಳೆ.

ಮೂಲತಃ ಧಾರವಾಡ ತಾಲೂಕಿನ ಜೋಡಳ್ಳಿ ಗ್ರಾಮದ ಉಮೇಶ ಮುತ್ತಗಿ-ಸಕ್ಕೂಬಾಯಿ ದಂಪತಿಯ ಎರಡೂವರೆ ವರ್ಷದ ಮಗು ವೈಷ್ಣವಿ ಈ ಸಾಧನೆಗೈದ ಬಾಲಕಿ. ಬಾಲಕಿಯ ತಂದೆ ಉಮೇಶ ಮುತ್ತಗಿ ಉತ್ತರ ಪ್ರದೇಶದ ಮಥುರಾದಲ್ಲಿ ಭಾರತೀಯ ಸೇನೆಯ 51 ಮೀಡಿಯಂ ರೆಜಿಮೆಂಟ್‌ನಲ್ಲಿ ಹವಾಲ್ದಾರರಾಗಿ ದೇಶ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಮಗಳು ವೈಷ್ಣವಿ ಕಳೆದ ಮಾರ್ಚ್ ತಿಂಗಳಲ್ಲಿ India Book of Records ನಲ್ಲಿ ತನ್ನ ಪ್ರತಿಭೆಯ ಮೂಲಕ ದಾಖಲೆ ಬರೆದಿದ್ದಾಳೆ.

ಚಿಕ್ಕ ವಯಸ್ಸಿನಲ್ಲಿಯೇ ಅಮೋಘ ಸಾಧನೆ ವೈಷ್ಣವಿ ಚಿಕ್ಕ ವಯಸ್ಸಿರನಲ್ಲಿಯೇ ಸ್ಪಷ್ಟವಾಗಿ ರಾಷ್ಟ್ರ ಗೀತೆ, ಐದು ಸಂಸ್ಕೃತದ ಮಂತ್ರಗಳು, 170 ಇತಿಹಾಸದ ಮತ್ತು ಈಗಿನ ಶ್ರೇಷ್ಠ ನಾಯಕರ ಹೆಸರು ಹೇಳುವುದು, ಪ್ರಾಣಿ, ಪಕ್ಷಿ, ಹಣ್ಣು, ತರಕಾರಿ, ಸೌರ ಮಂಡಲದ ಗ್ರಹಗಳ ಹೆಸರು, ಗಣಿತದ ಚಿಹ್ನೆಗಳು, ವಾರಗಳ ಹೆಸರು, ತಿಂಗಳುಗಳು, ಶರೀರದ ವಿಭಿನ್ನ ಭಾಗಗಳ ಹೆಸರುಗಳನ್ನು ನಿಖರವಾಗಿ ಹೇಳುತ್ತಾಳೆ. ಜೊತೆಗೆ ಸಾಮಾನ್ಯ ಜ್ಞಾನದ ಪ್ರಶ್ನೆಗಳಿಗೆ ಉತ್ತರಿಸುವ ಜಾಣ್ಮೆಯಿದೆ. 1ರಿಂದ 70ರ ವರೆಗೆ ಅಂಕಿಗಳನ್ನ ಸರಳವಾಗಿ ಗುರುತಿಸುತ್ತಾಳೆ.

ಇದೆಲ್ಲಕ್ಕಿಂತ ಅಚ್ಚರಿಯಂದ್ರೆ ಅನೇಕ ಪ್ರಾಣಿ-ಪಕ್ಷಿಗಳ ಧ್ವನಿಯನ್ನು ಅನುಕರಣೆ ಮಾಡುವುದು. ಸ್ಪಷ್ಟವಾದ ವಾಕ್ ಚಾತುರ್ಯ ದಿಂದ ಎಳೆಯ ವಯಸ್ಸಿನಲ್ಲಿಯೇ ವೈಷ್ಣವಿ ಭಾರತದಲ್ಲಿ ಈ ದಾಖಲೆ ಬರೆದಿರುವುದು ಧಾರವಾಡ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. -ನರಸಿಂಹಮೂರ್ತಿ ಪ್ಯಾಟಿ

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್