AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 India Book of Records ಗೆ ದಾಖಲು! ಧಾರವಾಡದ ಈ ಬಾಲಕಿಯ ಸಾಧನೆ ಏನು ಗೊತ್ತಾ?

ಧಾರವಾಡ: ಕೇವಲ ಎರಡೂವರೆ ವರ್ಷದ ಪುಟಾಣಿ ಬಾಲಕಿಯೊಬ್ಬಳು ತನ್ನ ತೊದಲು ನುಡಿಗಳಲ್ಲಿ ರಾಷ್ಟ್ರಗೀತೆ, ರಾಷ್ಟ್ರೀಯ ಲಾಂಛನಗಳು, ರಾಷ್ಟ್ರೀಯ ನಾಯಕರು, ಇತಿಹಾಸದ ಘಟನಾವಳಿಗಳು, ಪ್ರಾಣಿ-ಪಕ್ಷಿಗಳ ಅನುಕರಣೆ ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ಗ್‌ಗೆ ಸೇರ್ಪಡೆಯಾಗಿದ್ದಾಳೆ. ಮೂಲತಃ ಧಾರವಾಡ ತಾಲೂಕಿನ ಜೋಡಳ್ಳಿ ಗ್ರಾಮದ ಉಮೇಶ ಮುತ್ತಗಿ-ಸಕ್ಕೂಬಾಯಿ ದಂಪತಿಯ ಎರಡೂವರೆ ವರ್ಷದ ಮಗು ವೈಷ್ಣವಿ ಈ ಸಾಧನೆಗೈದ ಬಾಲಕಿ. ಬಾಲಕಿಯ ತಂದೆ ಉಮೇಶ ಮುತ್ತಗಿ ಉತ್ತರ ಪ್ರದೇಶದ ಮಥುರಾದಲ್ಲಿ ಭಾರತೀಯ ಸೇನೆಯ 51 ಮೀಡಿಯಂ ರೆಜಿಮೆಂಟ್‌ನಲ್ಲಿ ಹವಾಲ್ದಾರರಾಗಿ ದೇಶ ಸೇವೆ […]

 India Book of Records ಗೆ ದಾಖಲು! ಧಾರವಾಡದ ಈ ಬಾಲಕಿಯ ಸಾಧನೆ ಏನು ಗೊತ್ತಾ?
Guru
Guru| Edited By: ಸಾಧು ಶ್ರೀನಾಥ್​|

Updated on: Jun 26, 2020 | 11:13 AM

Share

ಧಾರವಾಡ: ಕೇವಲ ಎರಡೂವರೆ ವರ್ಷದ ಪುಟಾಣಿ ಬಾಲಕಿಯೊಬ್ಬಳು ತನ್ನ ತೊದಲು ನುಡಿಗಳಲ್ಲಿ ರಾಷ್ಟ್ರಗೀತೆ, ರಾಷ್ಟ್ರೀಯ ಲಾಂಛನಗಳು, ರಾಷ್ಟ್ರೀಯ ನಾಯಕರು, ಇತಿಹಾಸದ ಘಟನಾವಳಿಗಳು, ಪ್ರಾಣಿ-ಪಕ್ಷಿಗಳ ಅನುಕರಣೆ ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ಗ್‌ಗೆ ಸೇರ್ಪಡೆಯಾಗಿದ್ದಾಳೆ.

ಮೂಲತಃ ಧಾರವಾಡ ತಾಲೂಕಿನ ಜೋಡಳ್ಳಿ ಗ್ರಾಮದ ಉಮೇಶ ಮುತ್ತಗಿ-ಸಕ್ಕೂಬಾಯಿ ದಂಪತಿಯ ಎರಡೂವರೆ ವರ್ಷದ ಮಗು ವೈಷ್ಣವಿ ಈ ಸಾಧನೆಗೈದ ಬಾಲಕಿ. ಬಾಲಕಿಯ ತಂದೆ ಉಮೇಶ ಮುತ್ತಗಿ ಉತ್ತರ ಪ್ರದೇಶದ ಮಥುರಾದಲ್ಲಿ ಭಾರತೀಯ ಸೇನೆಯ 51 ಮೀಡಿಯಂ ರೆಜಿಮೆಂಟ್‌ನಲ್ಲಿ ಹವಾಲ್ದಾರರಾಗಿ ದೇಶ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಮಗಳು ವೈಷ್ಣವಿ ಕಳೆದ ಮಾರ್ಚ್ ತಿಂಗಳಲ್ಲಿ India Book of Records ನಲ್ಲಿ ತನ್ನ ಪ್ರತಿಭೆಯ ಮೂಲಕ ದಾಖಲೆ ಬರೆದಿದ್ದಾಳೆ.

ಚಿಕ್ಕ ವಯಸ್ಸಿನಲ್ಲಿಯೇ ಅಮೋಘ ಸಾಧನೆ ವೈಷ್ಣವಿ ಚಿಕ್ಕ ವಯಸ್ಸಿರನಲ್ಲಿಯೇ ಸ್ಪಷ್ಟವಾಗಿ ರಾಷ್ಟ್ರ ಗೀತೆ, ಐದು ಸಂಸ್ಕೃತದ ಮಂತ್ರಗಳು, 170 ಇತಿಹಾಸದ ಮತ್ತು ಈಗಿನ ಶ್ರೇಷ್ಠ ನಾಯಕರ ಹೆಸರು ಹೇಳುವುದು, ಪ್ರಾಣಿ, ಪಕ್ಷಿ, ಹಣ್ಣು, ತರಕಾರಿ, ಸೌರ ಮಂಡಲದ ಗ್ರಹಗಳ ಹೆಸರು, ಗಣಿತದ ಚಿಹ್ನೆಗಳು, ವಾರಗಳ ಹೆಸರು, ತಿಂಗಳುಗಳು, ಶರೀರದ ವಿಭಿನ್ನ ಭಾಗಗಳ ಹೆಸರುಗಳನ್ನು ನಿಖರವಾಗಿ ಹೇಳುತ್ತಾಳೆ. ಜೊತೆಗೆ ಸಾಮಾನ್ಯ ಜ್ಞಾನದ ಪ್ರಶ್ನೆಗಳಿಗೆ ಉತ್ತರಿಸುವ ಜಾಣ್ಮೆಯಿದೆ. 1ರಿಂದ 70ರ ವರೆಗೆ ಅಂಕಿಗಳನ್ನ ಸರಳವಾಗಿ ಗುರುತಿಸುತ್ತಾಳೆ.

ಇದೆಲ್ಲಕ್ಕಿಂತ ಅಚ್ಚರಿಯಂದ್ರೆ ಅನೇಕ ಪ್ರಾಣಿ-ಪಕ್ಷಿಗಳ ಧ್ವನಿಯನ್ನು ಅನುಕರಣೆ ಮಾಡುವುದು. ಸ್ಪಷ್ಟವಾದ ವಾಕ್ ಚಾತುರ್ಯ ದಿಂದ ಎಳೆಯ ವಯಸ್ಸಿನಲ್ಲಿಯೇ ವೈಷ್ಣವಿ ಭಾರತದಲ್ಲಿ ಈ ದಾಖಲೆ ಬರೆದಿರುವುದು ಧಾರವಾಡ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. -ನರಸಿಂಹಮೂರ್ತಿ ಪ್ಯಾಟಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್