AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನಾಭರಣ ವ್ಯಾಪಾರಿಗೆ ವಂಚನೆ: 196 ಗ್ರಾಂ ಚಿನ್ನ ಪಡೆದು ವಂಚಿಸಿದ್ದ ಆರೋಪಿಗಳು ಅರೆಸ್ಟ್

ಮೈಸೂರು: ತಮಿಳುನಾಡಿನ ಚಿನ್ನಾಭರಣ ವ್ಯಾಪಾರಿಗೆ ವಂಚನೆ ಪ್ರಕರಣ ಸಂಬಂಧಿಸಿ ಇಬ್ಬರು ವಂಚಕರನ್ನು ಮೈಸೂರಿನ ದೇವರಾಜ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಸೋಮಶೇಖರ್(61) ಮತ್ತು ರಘು(67) ಬಂಧಿತ ಆರೋಪಿಗಳು. ಆರೋಪಿಗಳು ಚಿನ್ನಾಭರಣ ತಯಾರಕ ಕುರುಪಸ್ವಾಮಿಗೆ ವಂಚಿಸಿದ್ದರು. ಚಿನ್ನ ಖರೀದಿಸುವುದಾಗಿ ಹೇಳಿ ಕುರುಪಸ್ವಾಮಿಗೆ ಮೈಸೂರಿಗೆ ಕರೆಸಿಕೊಂಡು ಅಕ್ಟೋಬರ್ 6ರಂದು 10 ಲಕ್ಷ ಮೌಲ್ಯದ 196 ಗ್ರಾಂ ಚಿನ್ನ ಪಡೆದು ಪರಾರಿಯಾಗಿದ್ರು. ಸದ್ಯ ಕುರುಪಸ್ವಾಮಿಗೆ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಚಿನ್ನಾಭರಣ ವ್ಯಾಪಾರಿಗೆ ವಂಚನೆ: 196 ಗ್ರಾಂ ಚಿನ್ನ ಪಡೆದು ವಂಚಿಸಿದ್ದ ಆರೋಪಿಗಳು ಅರೆಸ್ಟ್
ಆಯೇಷಾ ಬಾನು
|

Updated on: Oct 20, 2020 | 8:03 AM

Share

ಮೈಸೂರು: ತಮಿಳುನಾಡಿನ ಚಿನ್ನಾಭರಣ ವ್ಯಾಪಾರಿಗೆ ವಂಚನೆ ಪ್ರಕರಣ ಸಂಬಂಧಿಸಿ ಇಬ್ಬರು ವಂಚಕರನ್ನು ಮೈಸೂರಿನ ದೇವರಾಜ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಸೋಮಶೇಖರ್(61) ಮತ್ತು ರಘು(67) ಬಂಧಿತ ಆರೋಪಿಗಳು.

ಆರೋಪಿಗಳು ಚಿನ್ನಾಭರಣ ತಯಾರಕ ಕುರುಪಸ್ವಾಮಿಗೆ ವಂಚಿಸಿದ್ದರು. ಚಿನ್ನ ಖರೀದಿಸುವುದಾಗಿ ಹೇಳಿ ಕುರುಪಸ್ವಾಮಿಗೆ ಮೈಸೂರಿಗೆ ಕರೆಸಿಕೊಂಡು ಅಕ್ಟೋಬರ್ 6ರಂದು 10 ಲಕ್ಷ ಮೌಲ್ಯದ 196 ಗ್ರಾಂ ಚಿನ್ನ ಪಡೆದು ಪರಾರಿಯಾಗಿದ್ರು. ಸದ್ಯ ಕುರುಪಸ್ವಾಮಿಗೆ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.