ಕೆರೆಯ ಅಳ ತಿಳಿಯದೆ ಒಬ್ಬರಿಗೊಬ್ಬರು ತಬ್ಬಿಕೊಂಡು ಜಲಸಮಾಧಿಯಾದ ಬಾಲಕರು!

ಸಾಧು ಶ್ರೀನಾಥ್​

|

Updated on:May 18, 2020 | 8:40 PM

ನೆಲಮಂಗಲ: ಬಾಲಕರಿಬ್ಬರು ಬೇಸಿಗೆ ರಜೆಯಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದಾಗ ಜಲ ಸಮಾಧಿಯಾಗಿದ್ದಾರೆ. ಕೆರೆಯ ಅಳ ತಿಳಿಯದೆ ಮುಳುಗುವಾಗ ಒಬ್ಬರಿಗೊಬ್ಬರು ತಬ್ಬಿಕೊಂಡು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಹತ್ತುಕುಂಟೆಪಾಳ್ಯ ಬಳಿಯ ಕೆರೆಯಲ್ಲಿ ಮುಳುಗಿ ಪುರುಷೋತ್ತಮ್(14) ಮತ್ತು ನಾಗೇಶ್(17) ಸಾವಿಗೀಡಾಗಿದ್ದಾರೆ. ಮೃತ ದುರ್ದೈವಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲುಗೆ ಸೇರಿದವರು. ಗ್ರಾಮಸ್ಥರ ಸಹಾಯದಿಂದ ಕೆರೆಯಲ್ಲಿ ಮುಳುಗಿದ್ದ ಯುವಕರ ಶವಗಳನ್ನು ಮೇಲಕ್ಕೆ ಎತ್ತಲಾಗಿದೆ. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆರೆಯ ಅಳ ತಿಳಿಯದೆ ಒಬ್ಬರಿಗೊಬ್ಬರು ತಬ್ಬಿಕೊಂಡು ಜಲಸಮಾಧಿಯಾದ ಬಾಲಕರು!

ನೆಲಮಂಗಲ: ಬಾಲಕರಿಬ್ಬರು ಬೇಸಿಗೆ ರಜೆಯಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದಾಗ ಜಲ ಸಮಾಧಿಯಾಗಿದ್ದಾರೆ. ಕೆರೆಯ ಅಳ ತಿಳಿಯದೆ ಮುಳುಗುವಾಗ ಒಬ್ಬರಿಗೊಬ್ಬರು ತಬ್ಬಿಕೊಂಡು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಹತ್ತುಕುಂಟೆಪಾಳ್ಯ ಬಳಿಯ ಕೆರೆಯಲ್ಲಿ ಮುಳುಗಿ ಪುರುಷೋತ್ತಮ್(14) ಮತ್ತು ನಾಗೇಶ್(17) ಸಾವಿಗೀಡಾಗಿದ್ದಾರೆ.

ಮೃತ ದುರ್ದೈವಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲುಗೆ ಸೇರಿದವರು. ಗ್ರಾಮಸ್ಥರ ಸಹಾಯದಿಂದ ಕೆರೆಯಲ್ಲಿ ಮುಳುಗಿದ್ದ ಯುವಕರ ಶವಗಳನ್ನು ಮೇಲಕ್ಕೆ ಎತ್ತಲಾಗಿದೆ. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada