AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಗುಡ್ಡ ಕುಸಿತ: ಮಣ್ಣಿನಡಿ ಸಿಲುಕಿರುವ ಮಕ್ಕಳು

ದಕ್ಷಿಣ ಕನ್ನಡ: ಜಿಲ್ಲೆಯ ಮಂಗಳೂರಿನ ಹೊರವಲಯದಲ್ಲಿರುವ ಗುರುಪುರದ ಬಳಿ ಗುಡ್ಡ ಕುಸಿತ ಸಂಭವಿಸಿದೆ. ಮಣ್ಣಿನಡಿ ಇಬ್ಬರು ಮಕ್ಕಳು ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. 16 ವರ್ಷದ ಓರ್ವ ಬಾಲಕ ಮತ್ತು ಇನ್ನೊಬ್ಬ 10 ವರ್ಷದ ಬಾಲಕ ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ಹೊರವಲಯದ ಗುರುಪುರದ ಬಳಿ ಇರುವ ಬಂಗ್ಲೆಗುಡ್ಡೆ ಕುಸಿದು ನಾಲ್ಕು ಮನೆಗಳು ಸಹ ನೆಲಸಮವಾಗಿದೆ. ಸದ್ಯಕ್ಕೆ, ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು ಮನೆಗಳಲ್ಲಿ ಇದ್ದವರ ರಕ್ಷಣೆ ಮಾಡಲಾಗಿದೆ. ಇದೀಗ, ಇಬ್ಬರು ಬಾಲಕರನ್ನ ರಕ್ಷಿಸಲು ಕಾರ್ಯಾಚರಣೆ […]

ಮಂಗಳೂರಿನಲ್ಲಿ ಗುಡ್ಡ ಕುಸಿತ: ಮಣ್ಣಿನಡಿ ಸಿಲುಕಿರುವ ಮಕ್ಕಳು
KUSHAL V
|

Updated on:Jul 05, 2020 | 4:08 PM

Share

ದಕ್ಷಿಣ ಕನ್ನಡ: ಜಿಲ್ಲೆಯ ಮಂಗಳೂರಿನ ಹೊರವಲಯದಲ್ಲಿರುವ ಗುರುಪುರದ ಬಳಿ ಗುಡ್ಡ ಕುಸಿತ ಸಂಭವಿಸಿದೆ. ಮಣ್ಣಿನಡಿ ಇಬ್ಬರು ಮಕ್ಕಳು ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.

16 ವರ್ಷದ ಓರ್ವ ಬಾಲಕ ಮತ್ತು ಇನ್ನೊಬ್ಬ 10 ವರ್ಷದ ಬಾಲಕ ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ಹೊರವಲಯದ ಗುರುಪುರದ ಬಳಿ ಇರುವ ಬಂಗ್ಲೆಗುಡ್ಡೆ ಕುಸಿದು ನಾಲ್ಕು ಮನೆಗಳು ಸಹ ನೆಲಸಮವಾಗಿದೆ. ಸದ್ಯಕ್ಕೆ, ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು ಮನೆಗಳಲ್ಲಿ ಇದ್ದವರ ರಕ್ಷಣೆ ಮಾಡಲಾಗಿದೆ. ಇದೀಗ, ಇಬ್ಬರು ಬಾಲಕರನ್ನ ರಕ್ಷಿಸಲು ಕಾರ್ಯಾಚರಣೆ ಭರದಿಂದ ಸಾಗಿದೆ.

ಸುಮಾರು 25 ಅಡಿಯಷ್ಟು ಮಣ್ಣು ಕುಸಿದಿದೆ  ಎಂದು ಅಗ್ನಿಶಾಮಕ ತಂಡದ ಅಧಿಕಾರಿ ಮಾಹಿತಿ ನೀಡಿದ್ದಾರೆ. ಗುಡ್ಡ ಕುಸಿಯುವಾಗ ಮನೆಯಿಂದ ಅಲ್ಲಿನ ಜನರು ಹೊರಗೆ ಓಡಿಬಂದಿದ್ದಾರೆ. ಆದರೆ, ಈ ವೇಳೆ ಮಕ್ಕಳನ್ನು ಬಿಟ್ಟುಬಂದಿದ್ದರು ಎಂದು ತಿಳಿದುಬಂದಿದೆ. ಜೊತೆಗೆ ನೀರಿನ ಸೆಲೆ ಹೆಚ್ಚಾಗಿ ಮಣ್ಣು ಸಡಿಲವಾಗಿ ಗುಡ್ಡ ಕುಸಿದಿದೆ ಎಂಬ ಮಾಹಿತಿ ದೊರೆತಿದೆ.

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಭೇಟಿ ನೀಡಿ ಮಾಹಿತಿ ಪಡೆದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲು ಹಾಗೂ ಮಾಜಿ ಸಚಿವ ಯು.ಟಿ. ಖಾದರ್​​ ಸಹ ಭೇಟಿ ನೀಡಿದರು.

Published On - 3:03 pm, Sun, 5 July 20

ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
‘ದೊಡ್ಡದಾಗಿ ಏನೋ ಕಾಯ್ತಿರಬಹುದು, ಆಗೋದಲ್ಲ ಆಗ್ಲಿ’; ಧನುಶ್
‘ದೊಡ್ಡದಾಗಿ ಏನೋ ಕಾಯ್ತಿರಬಹುದು, ಆಗೋದಲ್ಲ ಆಗ್ಲಿ’; ಧನುಶ್