AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನೋ ಮಾಡೋಕೆ ಹೋಗಿ ಇನ್ನೇನೋ ಆಯ್ತು! ಹಸುಗಳ ಕದ್ದ ಕಳ್ಳರು ಆಸ್ಪತ್ರೆ ಸೇರಿದ್ರು, ಆದ್ರೆ ಹಸುಗಳು

ಶಿವಮೊಗ್ಗ: 2 ಹಸುಗಳನ್ನು ಕದ್ದು ಪರಾರಿಯಾಗುತ್ತಿದ್ದಾಗ ಕಾರು ಪಲ್ಟಿಯಾಗಿರುವ ಘಟನೆ ಉಂಬ್ಳೆಬೈಲು ಸಮೀಪದ ಮರಾಠಾ ಕ್ಯಾಂಪ್ ಬಳಿ ನಡೆದಿದೆ. ಖದೀಮರು ಬೆಳಗಿನ ಜಾವ ಎರಡು ಹಸುಗಳನ್ನು ಕದ್ದು ಕಾರಿನಲ್ಲಿ ಪರಾರಿಯಾಗುತ್ತಿದ್ದರು. ಈ ವೇಳೆ ಭಯಕ್ಕೂ, ನಿಯಂತ್ರಣ ತಪ್ಪಿಯೂ ಕಾರ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರು ಪಲ್ಟಿಯಾದ ಹಿನ್ನೆಲೆಯಲ್ಲಿ ಕಾರಿನಲ್ಲಿದ್ದ 2 ಹಸುಗಳು ಸ್ಥಳದಲ್ಲೇ ಮೃತಪಟ್ಟಿವೆ. ಕಳ್ಳರು ಗೋಮಾತೆಯನ್ನು ಕದ್ದು ಭಾರಿ ಅನಾಹುತಕ್ಕೆ ಕಾರಣರಾಗಿದ್ದಾರೆ. ಇನ್ನು ಕಾರಿನಲ್ಲಿ ಮಚ್ಚು, […]

ಏನೋ ಮಾಡೋಕೆ ಹೋಗಿ ಇನ್ನೇನೋ ಆಯ್ತು! ಹಸುಗಳ ಕದ್ದ ಕಳ್ಳರು ಆಸ್ಪತ್ರೆ ಸೇರಿದ್ರು, ಆದ್ರೆ ಹಸುಗಳು
ಆಯೇಷಾ ಬಾನು
|

Updated on:Jun 17, 2020 | 1:39 PM

Share

ಶಿವಮೊಗ್ಗ: 2 ಹಸುಗಳನ್ನು ಕದ್ದು ಪರಾರಿಯಾಗುತ್ತಿದ್ದಾಗ ಕಾರು ಪಲ್ಟಿಯಾಗಿರುವ ಘಟನೆ ಉಂಬ್ಳೆಬೈಲು ಸಮೀಪದ ಮರಾಠಾ ಕ್ಯಾಂಪ್ ಬಳಿ ನಡೆದಿದೆ. ಖದೀಮರು ಬೆಳಗಿನ ಜಾವ ಎರಡು ಹಸುಗಳನ್ನು ಕದ್ದು ಕಾರಿನಲ್ಲಿ ಪರಾರಿಯಾಗುತ್ತಿದ್ದರು. ಈ ವೇಳೆ ಭಯಕ್ಕೂ, ನಿಯಂತ್ರಣ ತಪ್ಪಿಯೂ ಕಾರ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರು ಪಲ್ಟಿಯಾದ ಹಿನ್ನೆಲೆಯಲ್ಲಿ ಕಾರಿನಲ್ಲಿದ್ದ 2 ಹಸುಗಳು ಸ್ಥಳದಲ್ಲೇ ಮೃತಪಟ್ಟಿವೆ. ಕಳ್ಳರು ಗೋಮಾತೆಯನ್ನು ಕದ್ದು ಭಾರಿ ಅನಾಹುತಕ್ಕೆ ಕಾರಣರಾಗಿದ್ದಾರೆ. ಇನ್ನು ಕಾರಿನಲ್ಲಿ ಮಚ್ಚು, ಲಾಂಗ್ ಸೇರಿದಂತೆ ಮಾರಕಾಸ್ತ್ರಗಳು ಪತ್ತೆಯಾಗಿವೆ.

ಕಾರ್ ಪಲ್ಟಿಯಾದ ವೇಳೆ ಮೂವರು ಹಸು ಕಳ್ಳರು ಕಾರ್​ನಲ್ಲಿ ಸಿಲುಕಿಕೊಂಡಿದ್ದರು. ಸ್ಥಳೀಯರೇ ಕಾರಿನಿಂದ ಅವರನ್ನು ಹೊರಗೆ ತೆಗೆದು ಆಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನಿಸಿದ್ರು. ಗ್ರಾಮಸ್ಥರ ಮಾನವೀಯತೆಯಿಂದ ಮೂವರ ಜೀವ ಉಳಿಸಿದಿದೆ. ಆದರೆ ಏನೂ ತಿಳಿಯದ ಮೂಕ ಪ್ರಾಣಿಗಳು ಜೀವ ಕಳೆದುಕೊಂಡಿವೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 9:10 am, Tue, 16 June 20

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ