AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಬೈಕ್​ ಮಧ್ಯೆ ಮುಖಾಮುಖಿ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಮೈಸೂರು: ಎರಡು ದ್ವಿಚಕ್ರ ವಾಹನಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ಬಳಿ ನಡೆದಿದೆ. ಪಲ್ಸರ್ ಬೈಕ್ ಹಾಗೂ ಡಿಯೋ ನಡುವೆ ಸಂಭವಿಸಿದ ಅಪಘಾತದಲ್ಲಿ ಇಲವಾಲದ ರಾಮಚಂದ್ರ(22) ಮತ್ತು ನವೀನ್(24) ಮೃತ ದುರ್ದೈವಿಗಳಾಗಿದ್ದು, ಕೊಮ್ಮೆಗೌಡ ಕೊಪ್ಪಲು ಗ್ರಾಮದ ಗಿರೀಶ್ ಹಾಗೂ ಕೃಷ್ಣಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು […]

ಎರಡು ಬೈಕ್​ ಮಧ್ಯೆ ಮುಖಾಮುಖಿ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು
ಸಾಧು ಶ್ರೀನಾಥ್​
|

Updated on:Sep 19, 2020 | 7:08 AM

Share

ಮೈಸೂರು: ಎರಡು ದ್ವಿಚಕ್ರ ವಾಹನಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ಬಳಿ ನಡೆದಿದೆ.

ಪಲ್ಸರ್ ಬೈಕ್ ಹಾಗೂ ಡಿಯೋ ನಡುವೆ ಸಂಭವಿಸಿದ ಅಪಘಾತದಲ್ಲಿ ಇಲವಾಲದ ರಾಮಚಂದ್ರ(22) ಮತ್ತು ನವೀನ್(24) ಮೃತ ದುರ್ದೈವಿಗಳಾಗಿದ್ದು, ಕೊಮ್ಮೆಗೌಡ ಕೊಪ್ಪಲು ಗ್ರಾಮದ ಗಿರೀಶ್ ಹಾಗೂ ಕೃಷ್ಣಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

Published On - 6:54 am, Sat, 19 September 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More