AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರದ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಕೊಡಗಿನ ಯೋಧ ನೀರುಪಾಲು

ಮಡಿಕೇರಿ: ರಜೆಗೆ ಊರಿಗೆ ಬಂದಿದ್ದ ಯೋಧ ಸೋಮವಾರಪೇಟೆ ತಾಲೂಕಿನ ಕಟ್ಟೆಪುರ ಸಮೀಪದ ಹೇಮಾವತಿ ಹಿನ್ನೀರಿನಲ್ಲಿ ನೀರುಪಾಲಾಗಿರುವ ಘಟನೆ ನಡೆದಿದೆ. ಬೆಸ್ಸೂರು ಗ್ರಾಮದ ಯೋಧ ಲೋಕೇಶ್(30) ಜೊತೆ ಮತ್ತೊಬ್ಬ ಯುವಕ ಲತೇಶ್(27) ಸಹ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ವಾರದ ಹಿಂದಷ್ಟೇ ನಿಶ್ಚಿತಾರ್ಥವಾಗಿತ್ತು: ಉತ್ತರಾಖಂಡ್​ನಲ್ಲಿ ಯೋಧ ಲೋಕೇಶ್ ಸೇವೆ ಸಲ್ಲಿಸುತ್ತಿದ್ದರು. ಒಂದು ವಾರದ ಹಿಂದಷ್ಟೇ ಹಾಸನ ಜಿಲ್ಲೆಯ ಯುವತಿ ಜೊತೆಗೆ ಲೋಕೇಶ್​ಗೆ ನಿಶ್ಚಿತಾರ್ಥವಾಗಿತ್ತು. 2009ರಿಂದಲೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲೋಕೇಶ್ ರಜೆಯ ಮೇಲೆ ಊರಿಗೆ ಆಗಮಿಸಿದ್ದರು. ಇಂದು ಮಧ್ಯಾಹ್ನ […]

ವಾರದ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಕೊಡಗಿನ ಯೋಧ ನೀರುಪಾಲು
ಸಾಧು ಶ್ರೀನಾಥ್​
|

Updated on:May 01, 2020 | 4:30 PM

Share

ಮಡಿಕೇರಿ: ರಜೆಗೆ ಊರಿಗೆ ಬಂದಿದ್ದ ಯೋಧ ಸೋಮವಾರಪೇಟೆ ತಾಲೂಕಿನ ಕಟ್ಟೆಪುರ ಸಮೀಪದ ಹೇಮಾವತಿ ಹಿನ್ನೀರಿನಲ್ಲಿ ನೀರುಪಾಲಾಗಿರುವ ಘಟನೆ ನಡೆದಿದೆ. ಬೆಸ್ಸೂರು ಗ್ರಾಮದ ಯೋಧ ಲೋಕೇಶ್(30) ಜೊತೆ ಮತ್ತೊಬ್ಬ ಯುವಕ ಲತೇಶ್(27) ಸಹ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ವಾರದ ಹಿಂದಷ್ಟೇ ನಿಶ್ಚಿತಾರ್ಥವಾಗಿತ್ತು: ಉತ್ತರಾಖಂಡ್​ನಲ್ಲಿ ಯೋಧ ಲೋಕೇಶ್ ಸೇವೆ ಸಲ್ಲಿಸುತ್ತಿದ್ದರು. ಒಂದು ವಾರದ ಹಿಂದಷ್ಟೇ ಹಾಸನ ಜಿಲ್ಲೆಯ ಯುವತಿ ಜೊತೆಗೆ ಲೋಕೇಶ್​ಗೆ ನಿಶ್ಚಿತಾರ್ಥವಾಗಿತ್ತು. 2009ರಿಂದಲೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲೋಕೇಶ್ ರಜೆಯ ಮೇಲೆ ಊರಿಗೆ ಆಗಮಿಸಿದ್ದರು.

ಇಂದು ಮಧ್ಯಾಹ್ನ ಹೇಮಾವತಿ ಹಿನ್ನೀರಿನಲ್ಲಿ ಈಜುವ ವೇಳೆ ನೀರಿನಲ್ಲಿ ಮುಳುಗಿ ಲೋಕೇಶ್, ಲತೇಶ್ ಸಾವಿಗೀಡಾಗಿದ್ದಾರೆ. ಘಟನಾ ಸ್ಥಳಕ್ಕೆ ಶನಿವಾರಸಂತೆ ಠಾಣಾ ಪೊಲೀಸರು ದೌಡಾಯಿಸಿದ್ದಾರೆ. ಲೋಕೇಶ್ ಮೃತದೇಹ ಪತ್ತೆಯಾಗಿದ್ದು, ಲತೇಶ್​ಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ‌ ನಡೆಸುತ್ತಿದ್ದಾರೆ.

Published On - 4:24 pm, Fri, 1 May 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More