AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರದ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಕೊಡಗಿನ ಯೋಧ ನೀರುಪಾಲು

ಮಡಿಕೇರಿ: ರಜೆಗೆ ಊರಿಗೆ ಬಂದಿದ್ದ ಯೋಧ ಸೋಮವಾರಪೇಟೆ ತಾಲೂಕಿನ ಕಟ್ಟೆಪುರ ಸಮೀಪದ ಹೇಮಾವತಿ ಹಿನ್ನೀರಿನಲ್ಲಿ ನೀರುಪಾಲಾಗಿರುವ ಘಟನೆ ನಡೆದಿದೆ. ಬೆಸ್ಸೂರು ಗ್ರಾಮದ ಯೋಧ ಲೋಕೇಶ್(30) ಜೊತೆ ಮತ್ತೊಬ್ಬ ಯುವಕ ಲತೇಶ್(27) ಸಹ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ವಾರದ ಹಿಂದಷ್ಟೇ ನಿಶ್ಚಿತಾರ್ಥವಾಗಿತ್ತು: ಉತ್ತರಾಖಂಡ್​ನಲ್ಲಿ ಯೋಧ ಲೋಕೇಶ್ ಸೇವೆ ಸಲ್ಲಿಸುತ್ತಿದ್ದರು. ಒಂದು ವಾರದ ಹಿಂದಷ್ಟೇ ಹಾಸನ ಜಿಲ್ಲೆಯ ಯುವತಿ ಜೊತೆಗೆ ಲೋಕೇಶ್​ಗೆ ನಿಶ್ಚಿತಾರ್ಥವಾಗಿತ್ತು. 2009ರಿಂದಲೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲೋಕೇಶ್ ರಜೆಯ ಮೇಲೆ ಊರಿಗೆ ಆಗಮಿಸಿದ್ದರು. ಇಂದು ಮಧ್ಯಾಹ್ನ […]

ವಾರದ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಕೊಡಗಿನ ಯೋಧ ನೀರುಪಾಲು
ಸಾಧು ಶ್ರೀನಾಥ್​
|

Updated on:May 01, 2020 | 4:30 PM

Share

ಮಡಿಕೇರಿ: ರಜೆಗೆ ಊರಿಗೆ ಬಂದಿದ್ದ ಯೋಧ ಸೋಮವಾರಪೇಟೆ ತಾಲೂಕಿನ ಕಟ್ಟೆಪುರ ಸಮೀಪದ ಹೇಮಾವತಿ ಹಿನ್ನೀರಿನಲ್ಲಿ ನೀರುಪಾಲಾಗಿರುವ ಘಟನೆ ನಡೆದಿದೆ. ಬೆಸ್ಸೂರು ಗ್ರಾಮದ ಯೋಧ ಲೋಕೇಶ್(30) ಜೊತೆ ಮತ್ತೊಬ್ಬ ಯುವಕ ಲತೇಶ್(27) ಸಹ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ವಾರದ ಹಿಂದಷ್ಟೇ ನಿಶ್ಚಿತಾರ್ಥವಾಗಿತ್ತು: ಉತ್ತರಾಖಂಡ್​ನಲ್ಲಿ ಯೋಧ ಲೋಕೇಶ್ ಸೇವೆ ಸಲ್ಲಿಸುತ್ತಿದ್ದರು. ಒಂದು ವಾರದ ಹಿಂದಷ್ಟೇ ಹಾಸನ ಜಿಲ್ಲೆಯ ಯುವತಿ ಜೊತೆಗೆ ಲೋಕೇಶ್​ಗೆ ನಿಶ್ಚಿತಾರ್ಥವಾಗಿತ್ತು. 2009ರಿಂದಲೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲೋಕೇಶ್ ರಜೆಯ ಮೇಲೆ ಊರಿಗೆ ಆಗಮಿಸಿದ್ದರು.

ಇಂದು ಮಧ್ಯಾಹ್ನ ಹೇಮಾವತಿ ಹಿನ್ನೀರಿನಲ್ಲಿ ಈಜುವ ವೇಳೆ ನೀರಿನಲ್ಲಿ ಮುಳುಗಿ ಲೋಕೇಶ್, ಲತೇಶ್ ಸಾವಿಗೀಡಾಗಿದ್ದಾರೆ. ಘಟನಾ ಸ್ಥಳಕ್ಕೆ ಶನಿವಾರಸಂತೆ ಠಾಣಾ ಪೊಲೀಸರು ದೌಡಾಯಿಸಿದ್ದಾರೆ. ಲೋಕೇಶ್ ಮೃತದೇಹ ಪತ್ತೆಯಾಗಿದ್ದು, ಲತೇಶ್​ಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ‌ ನಡೆಸುತ್ತಿದ್ದಾರೆ.

Published On - 4:24 pm, Fri, 1 May 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ