ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಉಡುಪಿ: ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ಬಾರ್ಕೂರು ಹಾಲೆಕೊಡಿ ಎಂಬಲ್ಲಿ ನಡೆದಿದೆ. ಬಾರ್ಕೂರು ಹೊಸಾಳ ಗ್ರಾಮದ ಹರ್ಷ(25) ಮತ್ತು ಕಾರ್ತಿಕ್ (21) ಮೃತ ದುರ್ದೈವಿಗಳು. ನಿನ್ನೆ ರಾತ್ರಿ ಸೀತಾ ನದಿಯಲ್ಲಿ ಮೀನಿಗಾಗಿ ಬಲೆ ಬೀಸಿ ಯುವಕರು ಮನೆಗೆ ಹೋಗಿದ್ದರು. ಇಂದು ಮುಂಜಾನೆ ನದಿಯಲ್ಲಿ ಬಲೆಯನ್ನು ಎಳೆಯುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಮೃತ ಹರ್ಷ, ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ರಿಕವರಿ ಕೆಲಸ ಮಾಡುತ್ತಿದ್ದರು. ಕಾರ್ತಿಕ್ ಕೊನೆಯ ವರ್ಷದ ಬಿಕಾಂ […]

ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು
ಸಾಧು ಶ್ರೀನಾಥ್​ Edited By:

Updated on: Jul 03, 2020 | 12:40 PM

ಉಡುಪಿ: ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ಬಾರ್ಕೂರು ಹಾಲೆಕೊಡಿ ಎಂಬಲ್ಲಿ ನಡೆದಿದೆ. ಬಾರ್ಕೂರು ಹೊಸಾಳ ಗ್ರಾಮದ ಹರ್ಷ(25) ಮತ್ತು ಕಾರ್ತಿಕ್ (21) ಮೃತ ದುರ್ದೈವಿಗಳು.

ನಿನ್ನೆ ರಾತ್ರಿ ಸೀತಾ ನದಿಯಲ್ಲಿ ಮೀನಿಗಾಗಿ ಬಲೆ ಬೀಸಿ ಯುವಕರು ಮನೆಗೆ ಹೋಗಿದ್ದರು. ಇಂದು ಮುಂಜಾನೆ ನದಿಯಲ್ಲಿ ಬಲೆಯನ್ನು ಎಳೆಯುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಮೃತ ಹರ್ಷ, ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ರಿಕವರಿ ಕೆಲಸ ಮಾಡುತ್ತಿದ್ದರು. ಕಾರ್ತಿಕ್ ಕೊನೆಯ ವರ್ಷದ ಬಿಕಾಂ ಓದುತ್ತಿದ್ದ. ಘಟನೆ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us