AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ! ತುಂಡು ನೆಲಕ್ಕೆ ಹೀಗಾ ಹೊಡೆದಾಡೋದು? ಪ್ರಾಣಕ್ಕೇನು ಬೆಲೆನೇ ಇಲ್ವಾ?

ಚಿಕ್ಕಮಗಳೂರು : ಜಮೀನು ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರೋ ಘಟನೆ ಚಿಕ್ಕಮಗಳೂರು ತಾಲೂಕಿನ ಕರಡಿಹಳ್ಳಿ ಕಾವಲ್ ಗ್ರಾಮದಲ್ಲಿ ನಡೆದಿದೆ. ಎರಡು ಗುಂಪುಗಳು ಜಮೀನು ತಮಗೆ ಸೇರಿದ್ದು ಎಂದು ವಾದ ಮಾಡುವಾಗ ಮಾತಿಗೆ ಮಾತು ಬೆಳೆದು ಎರಡು ಗುಂಪಿನವರು ಹೆಲ್ಮೆಟ್, ದೊಣ್ಣೆಗಳಿಂದ ಪುರುಷರು ಹಾಗೂ ಮಹಿಳೆಯರು ಪರಸ್ಪರ ಹೊಡೆದಾಡಿದ್ದಾರೆ. ಈ ಜಮೀನನ್ನ 1953ನೇ ಇಸವಿಯಲ್ಲಿ ನಾಗಭೂಷಣಮ್ಮ ಎಂಬುವರಿಂದ ರಾಜ್‍ದೀಪ್ ಎಂಬುವರು ಖರೀದಿ ಮಾಡಿದ್ದರು ಎಂದು ಹೇಳಲಾಗ್ತಿದೆ. ರಾಜ್‍ದೀಪ್ ಜಮೀನನ್ನು ಕ್ಲೀನ್ ಮಾಡಲು ಹೋದಾಗ ಮತ್ತೊಂದು ಗುಂಪು […]

ಅಯ್ಯೋ! ತುಂಡು ನೆಲಕ್ಕೆ ಹೀಗಾ ಹೊಡೆದಾಡೋದು? ಪ್ರಾಣಕ್ಕೇನು ಬೆಲೆನೇ ಇಲ್ವಾ?
Guru
Guru| Edited By: |

Updated on:Jul 26, 2020 | 1:52 AM

Share

ಚಿಕ್ಕಮಗಳೂರು : ಜಮೀನು ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರೋ ಘಟನೆ ಚಿಕ್ಕಮಗಳೂರು ತಾಲೂಕಿನ ಕರಡಿಹಳ್ಳಿ ಕಾವಲ್ ಗ್ರಾಮದಲ್ಲಿ ನಡೆದಿದೆ. ಎರಡು ಗುಂಪುಗಳು ಜಮೀನು ತಮಗೆ ಸೇರಿದ್ದು ಎಂದು ವಾದ ಮಾಡುವಾಗ ಮಾತಿಗೆ ಮಾತು ಬೆಳೆದು ಎರಡು ಗುಂಪಿನವರು ಹೆಲ್ಮೆಟ್, ದೊಣ್ಣೆಗಳಿಂದ ಪುರುಷರು ಹಾಗೂ ಮಹಿಳೆಯರು ಪರಸ್ಪರ ಹೊಡೆದಾಡಿದ್ದಾರೆ.

ಈ ಜಮೀನನ್ನ 1953ನೇ ಇಸವಿಯಲ್ಲಿ ನಾಗಭೂಷಣಮ್ಮ ಎಂಬುವರಿಂದ ರಾಜ್‍ದೀಪ್ ಎಂಬುವರು ಖರೀದಿ ಮಾಡಿದ್ದರು ಎಂದು ಹೇಳಲಾಗ್ತಿದೆ. ರಾಜ್‍ದೀಪ್ ಜಮೀನನ್ನು ಕ್ಲೀನ್ ಮಾಡಲು ಹೋದಾಗ ಮತ್ತೊಂದು ಗುಂಪು ಈ ಜಮೀನು ನಮ್ಮದ್ದು, ನಾವು 30 ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿದ್ದೇವೆ. ಫಾರಂ 50 ಹಾಗೂ 53ರಲ್ಲಿ ಅರ್ಜಿ ಹಾಕಿದ್ದೇವೆ ಎಂದಾಗ ಎರಡು ಗುಂಪಿನ ನಡುವೆ ಮಾತಿಗೆ ಮಾತು ಬೆಳೆದು ಇಬ್ಬರು ಹೊಡೆದಾಡಿದ್ದಾರೆ.

ಒಬ್ಬರು ನಾವು ಖರೀದಿ ಮಾಡಿದ್ದೇವೆ, ನಮ್ಮ ಹೆಸರಿಗೆ ಖಾತೆ ಇದೆ ಅಂತಿದ್ದಾರೆ. ಮತ್ತೊಬ್ಬರು ನಾವು 30 ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿದ್ದೇವೆ ಎನ್ನುತ್ತಿದ್ದಾರೆ. ಹೀಗೆ ವಾದ ಮಾಡುತ್ತಾ ಎರಡು ಕಡೆಯವರು ಮಾರಾಮಾರಿ ಹೊಡೆದಾಡಿದ್ದಾರೆ. ಆದರೆ, ಅಸಲಿಗೆ ಈ ಜಮೀನು ಯಾರಿಗೆ ಸೇರಬೇಕೆಂಬುದರ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಗ್ರಾಮಾಂತರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 8:57 pm, Sat, 25 July 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ