AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tiger Attack | ಕೊಡಗಿನಲ್ಲಿ ಹುಲಿ ದಾಳಿಗೆ ಇಬ್ಬರು ಬಲಿ, ಕಾರ್ಯಾಚರಣೆಗೆ ಸಾಕಾನೆಗಳನ್ನು ಕರೆಸಿದ ಅರಣ್ಯ ಇಲಾಖೆ

ಪೊನ್ನಂಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ಗ್ರಾಮದಲ್ಲಿ ಹುಲಿ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ಗ್ರಾಮದ ಚಿಣ್ಣಿ(60) ಹುಲಿ ದಾಳಿಗೆ ಬಲಿಯಾದ ಕಾರ್ಮಿಕ ಮಹಿಳೆ. ನಿನ್ನೆ ರಾತ್ರಿ ಕೊಡಗು ಸಮೀಪದ ಕುಮಟೂರು ಗ್ರಾಮದ ಪಣೆಯರವರ ಅಯ್ಯಪ್ಪ ಎಂಬ 14ವರ್ಷದ ಬಾಲಕನೊಬ್ಬ ಈ ಹಿಂದೆ ಹುಲಿ ದಾಳಿಗೆ ಬಲಿಯಾಗಿದ್ದ.

Tiger Attack | ಕೊಡಗಿನಲ್ಲಿ ಹುಲಿ ದಾಳಿಗೆ ಇಬ್ಬರು ಬಲಿ, ಕಾರ್ಯಾಚರಣೆಗೆ ಸಾಕಾನೆಗಳನ್ನು ಕರೆಸಿದ ಅರಣ್ಯ ಇಲಾಖೆ
ಹುಲಿ ಹುಡುಕುವ ಕಾರ್ಯಾಚರಣೆಗೆ ಸಾಕಾನೆಗಳ ಆಗಮನ
ಆಯೇಷಾ ಬಾನು
|

Updated on: Feb 21, 2021 | 12:05 PM

Share

ಕೊಡಗು: ಜಿಲ್ಲೆಯಲ್ಲಿ ವ್ಯಾಘ್ರನ ಅಟ್ಟಹಾಸಕ್ಕೆ ಮತ್ತೊಂದು‌ ಜೀವ ಬಲಿಯಾಗಿದೆ. ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ಗ್ರಾಮದಲ್ಲಿ ಹುಲಿ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ಗ್ರಾಮದ ಚಿಣ್ಣಿ(60) ಹುಲಿ ದಾಳಿಗೆ ಬಲಿಯಾದ ಕಾರ್ಮಿಕ ಮಹಿಳೆ. ನಿನ್ನೆ ರಾತ್ರಿ ಕೊಡಗು ಸಮೀಪದ ಕುಮಟೂರು ಗ್ರಾಮದ ಪಣೆಯರವರ ಅಯ್ಯಪ್ಪ ಎಂಬ 14ವರ್ಷದ ಬಾಲಕನೊಬ್ಬ ಈ ಹಿಂದೆ ಹುಲಿ ದಾಳಿಗೆ ಬಲಿಯಾಗಿದ್ದ.

ಮೃತ ಬಾಲಕ ಶ್ರೀಮಂಗಲದ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿ ಎಂಟನೇ ತರಗತಿಯಲ್ಲಿ ಓದುತ್ತಿದ್ದ. ಸೌದೆ ತರಲೆಂದು ಹೋಗಿದ್ದ ವೇಳೆ ಹುಲಿ ದಾಳಿ ನಡೆಸಿತ್ತು. ಕೊಟ್ರಂಗಡ ಅಶ್ವಥ್ ಎಂಬುವವರ ತೋಟದಲ್ಲಿ ಮೃತದೇಹ ಪತ್ತೆಯಾಗಿತ್ತು. ಹುಲಿಯ ಕೂದಲು ಮೃತದೇಹದ ಮೇಲಿತ್ತು ಎಂದು ಸ್ಥಳೀಯರು ತಿಳಿಸಿದ್ದರು. ಈಗಾಗಲೇ ಹುಲಿ ದಾಳಿಗೆ ಇಬ್ಬರು ಬಲಿಯಾಗಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಹುಲಿ ಸೆರೆ ಹಿಡಿಯಲು ಆಗ್ರಹಿಸಿದ್ದಾರೆ. ಕುಟ್ಟ, ಶ್ರೀಮಂಗಲದಲ್ಲಿ ಪ್ರತಿಭಟನೆ‌ ನಡೆಸಲು ಸ್ಥಳೀಯರು ಸಜ್ಜಾಗಿದ್ದಾರೆ.

ಹುಲಿ ಸೆರೆಗೆ ಕಾರ್ಯಾಚರಣೆ ಇಬ್ಬರನ್ನು ಬಲಿ ಪಡೆದ ಹುಲಿ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಶುರು ಮಾಡಿಕೊಂಡಿದ್ದು ಪೊನ್ನಂಪೇಟೆ ತಾಲೂಕಿನ ಟಿ.ಶೆಟ್ಟಿಗೇರಿಯಲ್ಲಿ ಕಾರ್ಯಾಚರಣೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಮತ್ತಿಗೋಡು ಶಿಬಿರದಿಂದ ಸಾಕಾನೆಗಳನ್ನು ಕರೆಸಿಕೊಳ್ಳಲಾಗಿದೆ. ಅಭಿಮನ್ಯು, ಗೋಪಾಲಸ್ವಾಮಿ ಎಂಬ ಎರಡು ಸಾಕಾನೆಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಲಿವೆ.

Tiger Attack in Madikeri

ಘಟನಾ ಸ್ಥಳದಲ್ಲಿ ಪೊಲೀಸರು ಮತ್ತು ಸ್ಥಳೀಯರು

ಇದನ್ನೂ ಓದಿ: ಹುಲಿಗಳ ನಡುವೆಯೂ ಜಾಗಕ್ಕಾಗಿ ನಡೆಯುತ್ತೆ ಯುದ್ಧ.. ಕುತೂಹಲಕಾರಿ ಮಾಹಿತಿ ಇಲ್ಲಿದೆ

ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್
ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್