AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tiger Attack | ಕೊಡಗಿನಲ್ಲಿ ಹುಲಿ ದಾಳಿಗೆ ಇಬ್ಬರು ಬಲಿ, ಕಾರ್ಯಾಚರಣೆಗೆ ಸಾಕಾನೆಗಳನ್ನು ಕರೆಸಿದ ಅರಣ್ಯ ಇಲಾಖೆ

ಪೊನ್ನಂಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ಗ್ರಾಮದಲ್ಲಿ ಹುಲಿ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ಗ್ರಾಮದ ಚಿಣ್ಣಿ(60) ಹುಲಿ ದಾಳಿಗೆ ಬಲಿಯಾದ ಕಾರ್ಮಿಕ ಮಹಿಳೆ. ನಿನ್ನೆ ರಾತ್ರಿ ಕೊಡಗು ಸಮೀಪದ ಕುಮಟೂರು ಗ್ರಾಮದ ಪಣೆಯರವರ ಅಯ್ಯಪ್ಪ ಎಂಬ 14ವರ್ಷದ ಬಾಲಕನೊಬ್ಬ ಈ ಹಿಂದೆ ಹುಲಿ ದಾಳಿಗೆ ಬಲಿಯಾಗಿದ್ದ.

Tiger Attack | ಕೊಡಗಿನಲ್ಲಿ ಹುಲಿ ದಾಳಿಗೆ ಇಬ್ಬರು ಬಲಿ, ಕಾರ್ಯಾಚರಣೆಗೆ ಸಾಕಾನೆಗಳನ್ನು ಕರೆಸಿದ ಅರಣ್ಯ ಇಲಾಖೆ
ಹುಲಿ ಹುಡುಕುವ ಕಾರ್ಯಾಚರಣೆಗೆ ಸಾಕಾನೆಗಳ ಆಗಮನ
ಆಯೇಷಾ ಬಾನು
ಆಯೇಷಾ ಬಾನು|

Updated on: Feb 21, 2021 | 12:05 PM

Share

ಕೊಡಗು: ಜಿಲ್ಲೆಯಲ್ಲಿ ವ್ಯಾಘ್ರನ ಅಟ್ಟಹಾಸಕ್ಕೆ ಮತ್ತೊಂದು‌ ಜೀವ ಬಲಿಯಾಗಿದೆ. ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ಗ್ರಾಮದಲ್ಲಿ ಹುಲಿ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ಗ್ರಾಮದ ಚಿಣ್ಣಿ(60) ಹುಲಿ ದಾಳಿಗೆ ಬಲಿಯಾದ ಕಾರ್ಮಿಕ ಮಹಿಳೆ. ನಿನ್ನೆ ರಾತ್ರಿ ಕೊಡಗು ಸಮೀಪದ ಕುಮಟೂರು ಗ್ರಾಮದ ಪಣೆಯರವರ ಅಯ್ಯಪ್ಪ ಎಂಬ 14ವರ್ಷದ ಬಾಲಕನೊಬ್ಬ ಈ ಹಿಂದೆ ಹುಲಿ ದಾಳಿಗೆ ಬಲಿಯಾಗಿದ್ದ.

ಮೃತ ಬಾಲಕ ಶ್ರೀಮಂಗಲದ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿ ಎಂಟನೇ ತರಗತಿಯಲ್ಲಿ ಓದುತ್ತಿದ್ದ. ಸೌದೆ ತರಲೆಂದು ಹೋಗಿದ್ದ ವೇಳೆ ಹುಲಿ ದಾಳಿ ನಡೆಸಿತ್ತು. ಕೊಟ್ರಂಗಡ ಅಶ್ವಥ್ ಎಂಬುವವರ ತೋಟದಲ್ಲಿ ಮೃತದೇಹ ಪತ್ತೆಯಾಗಿತ್ತು. ಹುಲಿಯ ಕೂದಲು ಮೃತದೇಹದ ಮೇಲಿತ್ತು ಎಂದು ಸ್ಥಳೀಯರು ತಿಳಿಸಿದ್ದರು. ಈಗಾಗಲೇ ಹುಲಿ ದಾಳಿಗೆ ಇಬ್ಬರು ಬಲಿಯಾಗಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಹುಲಿ ಸೆರೆ ಹಿಡಿಯಲು ಆಗ್ರಹಿಸಿದ್ದಾರೆ. ಕುಟ್ಟ, ಶ್ರೀಮಂಗಲದಲ್ಲಿ ಪ್ರತಿಭಟನೆ‌ ನಡೆಸಲು ಸ್ಥಳೀಯರು ಸಜ್ಜಾಗಿದ್ದಾರೆ.

ಹುಲಿ ಸೆರೆಗೆ ಕಾರ್ಯಾಚರಣೆ ಇಬ್ಬರನ್ನು ಬಲಿ ಪಡೆದ ಹುಲಿ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಶುರು ಮಾಡಿಕೊಂಡಿದ್ದು ಪೊನ್ನಂಪೇಟೆ ತಾಲೂಕಿನ ಟಿ.ಶೆಟ್ಟಿಗೇರಿಯಲ್ಲಿ ಕಾರ್ಯಾಚರಣೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಮತ್ತಿಗೋಡು ಶಿಬಿರದಿಂದ ಸಾಕಾನೆಗಳನ್ನು ಕರೆಸಿಕೊಳ್ಳಲಾಗಿದೆ. ಅಭಿಮನ್ಯು, ಗೋಪಾಲಸ್ವಾಮಿ ಎಂಬ ಎರಡು ಸಾಕಾನೆಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಲಿವೆ.

Tiger Attack in Madikeri

ಘಟನಾ ಸ್ಥಳದಲ್ಲಿ ಪೊಲೀಸರು ಮತ್ತು ಸ್ಥಳೀಯರು

ಇದನ್ನೂ ಓದಿ: ಹುಲಿಗಳ ನಡುವೆಯೂ ಜಾಗಕ್ಕಾಗಿ ನಡೆಯುತ್ತೆ ಯುದ್ಧ.. ಕುತೂಹಲಕಾರಿ ಮಾಹಿತಿ ಇಲ್ಲಿದೆ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್