ನಿಂತಿದ್ದ ಟ್ಯಾಂಕರ್‌ಗೆ ಅಂಚೆ ವಾಹನ ಡಿಕ್ಕಿ: ಟ್ಯಾಂಕರ್‌ ವಾಹನದಡಿ ಮಲಗಿದ್ದ ಇಬ್ಬರು ಸ್ಥಳದಲ್ಲೇ ಸಾವು

ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ ವಾಹನಕ್ಕೆ, ಅಂಚೆ ವಾಹನ ಡಿಕ್ಕಿ ಹೊಡೆದ ಪರಿಣಾಮದಿಂದಾಗಿ ಟ್ಯಾಂಕರ್‌ ವಾಹನದಡಿ ಮಲಗಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ

ನಿಂತಿದ್ದ ಟ್ಯಾಂಕರ್‌ಗೆ ಅಂಚೆ ವಾಹನ ಡಿಕ್ಕಿ: ಟ್ಯಾಂಕರ್‌ ವಾಹನದಡಿ ಮಲಗಿದ್ದ ಇಬ್ಬರು ಸ್ಥಳದಲ್ಲೇ ಸಾವು
ಸಾಂದರ್ಭೀಕ ಚಿತ್ರ

Updated on: Jan 17, 2021 | 10:12 AM

ಚಿತ್ರದುರ್ಗ: ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ ವಾಹನಕ್ಕೆ, ಅಂಚೆ ವಾಹನ ಡಿಕ್ಕಿ ಹೊಡೆದ ಪರಿಣಾಮದಿಂದಾಗಿ ಟ್ಯಾಂಕರ್‌ ವಾಹನದಡಿ ಮಲಗಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಗ್ರಾಮದ ಬಳಿ ನಡೆದಿದೆ.

ತಡ ರಾತ್ರಿ ಟ್ಯಾಂಕರ್ ಲಾರಿ ಟೈರ್ ಬರ್ಸ್ಟ್ ಆಗಿದೆ. ಹೀಗಾಗಿ ರಸ್ತೆ ಬದಿ‌ಯಲ್ಲಿ ಟ್ಯಾಂಕರ್ ಲಾರಿ ನಿಲ್ಲಿಸಿ, ಲಾರಿ ಕೆಳಗೆ ಇಬ್ಬರು ಮಲಗಿದ್ದರು. ಈ ವೇಳೆ ವೇಗವಾಗಿ ಬಂದ ಅಂಚೆ ಇಲಾಖೆ ವಾಹನ, ಟ್ಯಾಂಕರ್ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಲಾರಿ ಕೆಳಗೆ ಮಲಗಿದ್ದ ಕುಮಾರ್ (24), ವಿಜಯ್ (28) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಮೂವರಿಗೆ ಗಂಭೀರಗಾಯಗಳಾಗಿದ್ದು, ಗಾಯಾಳುಗಳನ್ನು ಹಿರಿಯೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಧಾರವಾಡದ ದುರ್ಘಟನೆ: ಯೂಟ್ಯೂಬ್​ ಟ್ರೆಂಡಿಗ್​ನಲ್ಲಿ 2ನೇ ಸ್ಥಾನಕ್ಕೆ ತಲುಪಿದ ಟಿವಿ9 ಸುದ್ದಿ

Published On - 10:06 am, Sun, 17 January 21

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us