ಎಚ್ಚರಾ! ಕ್ವಾರಂಟೈನ್​ನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ..

ಸಾಧು ಶ್ರೀನಾಥ್​

|

Updated on:May 18, 2020 | 10:54 AM

ಬಳ್ಳಾರಿ: ಕ್ವಾರಂಟೈನ್​ನಲ್ಲಿದ್ದ ಇಬ್ಬರು ಪರಾರಿಯಾಗಿರುವ ಘಟನೆ ತಾಲೂಕಿನ ಹೊಸ ಯರಗುಡಿ ಗ್ರಾಮದಲ್ಲಿ ನಡೆದಿದೆ. ಹೊಸ ಯರಗುಡಿಯಲ್ಲಿರುವ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಿದ್ದ ವೇಳೆ ಇಬ್ಬರು ಎಸ್ಕೇಪ್ ಆಗಿದ್ದಾರೆ. ಅಮರಾಪುರ ಗ್ರಾಮದಲ್ಲಿ ನಡೆದಿದ್ದ ಮದುವೆ ಸಮಾರಂಭಕ್ಕೆ ಬಂದಿದ್ದ ಕಾರಣಕ್ಕೆ ಆಂಧ್ರದ ಮುನಿಸ್ವಾಮಿ ಮತ್ತು ಹೊನ್ನೂರು ಸ್ವಾಮಿ ಎಂಬುವರನ್ನು ಆರೋಗ್ಯ ಸಿಬ್ಬಂದಿ ಕ್ವಾರಂಟೈನ್​ನಲ್ಲಿಟ್ಟಿದ್ದರು. ಆದ್ರೆ ಸಿಬ್ಬಂದಿಯ ಕಣ್ತಪ್ಪಿಸಿ ವಸತಿ ನಿಲಯದ ಕಾಂಪೌಂಡ್ ಹಾರಿ ಪರಾರಿಯಾಗಿದ್ದಾರೆ. ಈ ಸಂಬಂಧ ಮೋಕಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಎಚ್ಚರಾ! ಕ್ವಾರಂಟೈನ್​ನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ..

ಬಳ್ಳಾರಿ: ಕ್ವಾರಂಟೈನ್​ನಲ್ಲಿದ್ದ ಇಬ್ಬರು ಪರಾರಿಯಾಗಿರುವ ಘಟನೆ ತಾಲೂಕಿನ ಹೊಸ ಯರಗುಡಿ ಗ್ರಾಮದಲ್ಲಿ ನಡೆದಿದೆ. ಹೊಸ ಯರಗುಡಿಯಲ್ಲಿರುವ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಿದ್ದ ವೇಳೆ ಇಬ್ಬರು ಎಸ್ಕೇಪ್ ಆಗಿದ್ದಾರೆ.

ಅಮರಾಪುರ ಗ್ರಾಮದಲ್ಲಿ ನಡೆದಿದ್ದ ಮದುವೆ ಸಮಾರಂಭಕ್ಕೆ ಬಂದಿದ್ದ ಕಾರಣಕ್ಕೆ ಆಂಧ್ರದ ಮುನಿಸ್ವಾಮಿ ಮತ್ತು ಹೊನ್ನೂರು ಸ್ವಾಮಿ ಎಂಬುವರನ್ನು ಆರೋಗ್ಯ ಸಿಬ್ಬಂದಿ ಕ್ವಾರಂಟೈನ್​ನಲ್ಲಿಟ್ಟಿದ್ದರು. ಆದ್ರೆ ಸಿಬ್ಬಂದಿಯ ಕಣ್ತಪ್ಪಿಸಿ ವಸತಿ ನಿಲಯದ ಕಾಂಪೌಂಡ್ ಹಾರಿ ಪರಾರಿಯಾಗಿದ್ದಾರೆ. ಈ ಸಂಬಂಧ ಮೋಕಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada