
ಬಳ್ಳಾರಿ: ಕ್ವಾರಂಟೈನ್ನಲ್ಲಿದ್ದ ಇಬ್ಬರು ಪರಾರಿಯಾಗಿರುವ ಘಟನೆ ತಾಲೂಕಿನ ಹೊಸ ಯರಗುಡಿ ಗ್ರಾಮದಲ್ಲಿ ನಡೆದಿದೆ. ಹೊಸ ಯರಗುಡಿಯಲ್ಲಿರುವ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಿದ್ದ ವೇಳೆ ಇಬ್ಬರು ಎಸ್ಕೇಪ್ ಆಗಿದ್ದಾರೆ.
ಅಮರಾಪುರ ಗ್ರಾಮದಲ್ಲಿ ನಡೆದಿದ್ದ ಮದುವೆ ಸಮಾರಂಭಕ್ಕೆ ಬಂದಿದ್ದ ಕಾರಣಕ್ಕೆ ಆಂಧ್ರದ ಮುನಿಸ್ವಾಮಿ ಮತ್ತು ಹೊನ್ನೂರು ಸ್ವಾಮಿ ಎಂಬುವರನ್ನು ಆರೋಗ್ಯ ಸಿಬ್ಬಂದಿ ಕ್ವಾರಂಟೈನ್ನಲ್ಲಿಟ್ಟಿದ್ದರು. ಆದ್ರೆ ಸಿಬ್ಬಂದಿಯ ಕಣ್ತಪ್ಪಿಸಿ ವಸತಿ ನಿಲಯದ ಕಾಂಪೌಂಡ್ ಹಾರಿ ಪರಾರಿಯಾಗಿದ್ದಾರೆ. ಈ ಸಂಬಂಧ ಮೋಕಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Published On - 8:01 am, Mon, 18 May 20