AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಮತ್ತು ಗ್ರಾಮ ಲೆಕ್ಕಿಗ ಎಸಿಬಿ ಬಲೆಗೆ

ಅಧಿಕಾರಿಗಳ ಬಲೆಗೆ ಬಿದ್ದ ಕಂದಾಯ ನಿರೀಕ್ಷಕನನ್ನು ಅನಿಲ್ ಕುಮಾರ್ ಮತ್ತು ಗ್ರಾಮ ಲೆಕ್ಕಿಗನನ್ನು ಸತೀಶ್ ಎಂದು ಗುರುತಿಸಲಾಗಿದೆ. ಜಮೀನಿನ ಖಾತೆ ಮಾಡಿಕೊಡಲು ಇವರಿಬ್ಬರೂ ₹ 30,000 ಲಂಚ ಪಡೆಯುತ್ತಿದ್ದರು ಎಂದು ದೂರಲಾಗಿದೆ.

ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಮತ್ತು ಗ್ರಾಮ ಲೆಕ್ಕಿಗ ಎಸಿಬಿ ಬಲೆಗೆ
ಅರುಣ್​ ಕುಮಾರ್​ ಬೆಳ್ಳಿ
| Edited By: |

Updated on: Dec 15, 2020 | 10:03 PM

Share

ಮೈಸೂರು: ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಮೈಸೂರಿನ ತಾಲೂಕು ಕಚೇರಿಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಮತ್ತು ಗ್ರಾಮ ಲೆಕ್ಕಿಗನನ್ನು ಬಂಧಿಸಿದೆ.

ಅಧಿಕಾರಿಗಳ ಬಲೆಗೆ ಬಿದ್ದ ಕಂದಾಯ ನಿರೀಕ್ಷಕನನ್ನು ಅನಿಲ್ ಕುಮಾರ್ ಮತ್ತು ಗ್ರಾಮ ಲೆಕ್ಕಿಗನನ್ನು ಸತೀಶ್ ಎಂದು ಗುರುತಿಸಲಾಗಿದೆ. ಜಮೀನಿನ ಖಾತೆ ಮಾಡಿಕೊಡಲು ಇವರಿಬ್ಬರೂ ₹ 30,000 ಲಂಚ ಪಡೆಯುತ್ತಿದ್ದರು ಎಂದು ದೂರಲಾಗಿದೆ. ಎಸಿಬಿ ಡಿಎಸ್​ಪಿ ಪರಶುರಾಮಪ್ಪ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ.. ಮೊಳಕಾಲ್ಮೂರು ತಹಶೀಲ್ದಾರ್​ ACB ಬಲೆಗೆ