AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಸಬ್​ ರಿಜಿಸ್ಟ್ರಾರ್ ಕುರ್ಚಿಗಾಗಿ.. ಒಂದೇ ರೂಂನಲ್ಲಿ 2 ಚೇರ್​ ಹಾಕಿ ಕುಳಿತ ಅಧಿಕಾರಿಗಳು!

ದೊಡ್ಡಬಳ್ಳಾಪುರ: ಒಂದೇ ಸಬ್​ ರಿಜಿಸ್ಟ್ರಾರ್ ಕುರ್ಚಿಗಾಗಿ ಇಬ್ಬರು ಅಧಿಕಾರಿಗಳ ನಡುವೆ ಪರೋಕ್ಷ ಕಿತ್ತಾಟ ನಡೆದಿರುವ ಘಟನೆ ನಗರದ ಉಪ ನೊಂದಣಾಧಿಕಾರಿಗಳ ಕಚೇರಿಯಲ್ಲಿ ಬೆಳಕಿಗೆ ಬಂದಿದೆ. ಹಾಗಾಗಿ, ಒಂದೇ ಕೊಠಡಿಯಲ್ಲಿ ಇಬ್ಬರು ಅಧಿಕಾರಿಗಳು ಎರೆಡು ಚೇರ್​ಗಳನ್ನ ಹಾಕಿಕೊಂಡು ಕೂತಿದ್ದಾರೆ! ಏನಿದು ಕುರ್ಚಿಯ ಕಿತ್ತಾಟ! ಸಬ್ ರಿಜಿಸ್ಟ್ರಾರ್ಸ್​ ರಂಗರಾಜು ಮತ್ತು ಸತೀಶ್ ನಡುವೆ ಕಿತ್ತಾಟ ನಡೆಯುತ್ತಿದೆ. ಕಳೆದ ಮೂರು ತಿಂಗಳ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಿಂದ ರಂಗರಾಜು ಅವರ ವರ್ಗಾವಣೆಯಾಗಿದ್ದು ಅವರ ಸ್ಥಾನಕ್ಕೆ ಸತೀಶ್​ರನ್ನ ಸರ್ಕಾರ ನೇಮಕ ಮಾಡಿತ್ತು. […]

ಒಂದೇ ಸಬ್​ ರಿಜಿಸ್ಟ್ರಾರ್ ಕುರ್ಚಿಗಾಗಿ.. ಒಂದೇ ರೂಂನಲ್ಲಿ 2 ಚೇರ್​ ಹಾಕಿ ಕುಳಿತ ಅಧಿಕಾರಿಗಳು!
KUSHAL V
| Updated By: ಸಾಧು ಶ್ರೀನಾಥ್​|

Updated on: Nov 13, 2020 | 1:40 PM

Share

ದೊಡ್ಡಬಳ್ಳಾಪುರ: ಒಂದೇ ಸಬ್​ ರಿಜಿಸ್ಟ್ರಾರ್ ಕುರ್ಚಿಗಾಗಿ ಇಬ್ಬರು ಅಧಿಕಾರಿಗಳ ನಡುವೆ ಪರೋಕ್ಷ ಕಿತ್ತಾಟ ನಡೆದಿರುವ ಘಟನೆ ನಗರದ ಉಪ ನೊಂದಣಾಧಿಕಾರಿಗಳ ಕಚೇರಿಯಲ್ಲಿ ಬೆಳಕಿಗೆ ಬಂದಿದೆ. ಹಾಗಾಗಿ, ಒಂದೇ ಕೊಠಡಿಯಲ್ಲಿ ಇಬ್ಬರು ಅಧಿಕಾರಿಗಳು ಎರೆಡು ಚೇರ್​ಗಳನ್ನ ಹಾಕಿಕೊಂಡು ಕೂತಿದ್ದಾರೆ!

ಏನಿದು ಕುರ್ಚಿಯ ಕಿತ್ತಾಟ! ಸಬ್ ರಿಜಿಸ್ಟ್ರಾರ್ಸ್​ ರಂಗರಾಜು ಮತ್ತು ಸತೀಶ್ ನಡುವೆ ಕಿತ್ತಾಟ ನಡೆಯುತ್ತಿದೆ. ಕಳೆದ ಮೂರು ತಿಂಗಳ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಿಂದ ರಂಗರಾಜು ಅವರ ವರ್ಗಾವಣೆಯಾಗಿದ್ದು ಅವರ ಸ್ಥಾನಕ್ಕೆ ಸತೀಶ್​ರನ್ನ ಸರ್ಕಾರ ನೇಮಕ ಮಾಡಿತ್ತು.

ಆದರೆ, ವರ್ಗಾವಣೆ ವಿರುದ್ಧ ರಂಗರಾಜು KAT ಮೊರೆ ಹೋಗಿ ವರ್ಗಾವಣೆಗೆ ತಡೆಯಾಜ್ಞೆ ತಂದಿದ್ದರು. KAT ತಡೆ ನೀಡಿದರೂ ಮತ್ತೊಬ್ಬ ಅಧಿಕಾರಿ ಸತೀಶ್ ದೊಡ್ಡಬಳ್ಳಾಪುರದಲ್ಲೇ ಕರ್ತವ್ಯ ಮುಂದುವರಿಸಿದ್ದಾರೆ. ಇಬ್ಬರು ಅಧಿಕಾರಿಗಳು ಸದ್ಯ ಕಾನೂನು ಹೋರಾಟ ಮಾಡುತ್ತಾ ಒಂದೇ ಕಚೇರಿಯಲ್ಲಿ ಕೂತಿದ್ದಾರೆ.

ಒಂದು ಸ್ಥಾನಕ್ಕೆ ಒಂದೇ ಕೊಠಡಿಯಲ್ಲಿ ಎರಡು ಚೇರ್​ಗಳನ್ನು ಹಾಕಿಕೊಂಡು ಕೂತಿದ್ದಾರೆ. ಇಬ್ಬರು ಅಧಿಕಾರಿಗಳ ಕಿತ್ತಾಟ ಕೆಳ ಹಂತದ ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಪರದಾಡುವ ಸ್ಥಿತಿ ಎದುರಾಗಿದೆ. ಯಾರು ಅಸಲಿ ಅಧಿಕಾರಿ ಅನ್ನೋ ಗೊಂದಲದಲ್ಲಿ ಪರದಾಡುತ್ತಿದ್ದಾರೆ.

‘ಇದು ಕದಂಬರ ಬಗೆಗಿನ ಕಥೆ ಅಲ್ಲ’; ಸ್ಟೋರಿ ಬಗ್ಗೆ ರಿಷಬ್ ಸ್ಪಷ್ಟನೆ
‘ಇದು ಕದಂಬರ ಬಗೆಗಿನ ಕಥೆ ಅಲ್ಲ’; ಸ್ಟೋರಿ ಬಗ್ಗೆ ರಿಷಬ್ ಸ್ಪಷ್ಟನೆ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ