AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಮೆಗಾ ವಂಚನೆ: ಇಬ್ಬರು ಅರೆಸ್ಟ್​, ಪ್ರಮುಖ ಆರೋಪಿ ನಾಪತ್ತೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಫಾರಿನ್ ಟ್ರೇಡ್, ಬುಲಿಯನ್ಸ್‌ನಲ್ಲಿ ಹೂಡಿಕೆ ನೆಪದಲ್ಲಿ TTSPL ಕಂಪನಿ ನೂರಾರು ಜನರಿಗೆ ವಂಚನೆ ಮಾಡಿದೆ. ಈ ಸಂಬಂಧ ಇಬ್ಬರು ಆರೋಪಿಗಳ ಬಂಧನವಾಗಿದ್ದು ಪ್ರಮುಖ ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಹೆಚ್ಚಿನ ಲಾಭಾಂಶದ ಆಸೆ ತೋರಿಸಿ ವಂಚನೆ: 2018ರಲ್ಲಿ ಪ್ರಕರಣದ ಪ್ರಮುಖ ಆರೋಪಿ ಹಬಿಬುಲ್ಲಾ ಎಂಬುವನು ಕಂಪನಿ ಆರಂಭಿಸಿದ್ದ. ಈ ಹಿಂದೆ ಹಬಿಬುಲ್ಲಾ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ. ಕಂಪನಿ ಶುರುಮಾಡುತ್ತಿದ್ದಂತೆ ಹೆಚ್ಚಿನ ಲಾಭಾಂಶದ ಆಸೆ […]

ಮತ್ತೊಂದು ಮೆಗಾ ವಂಚನೆ: ಇಬ್ಬರು ಅರೆಸ್ಟ್​, ಪ್ರಮುಖ ಆರೋಪಿ ನಾಪತ್ತೆ
ಸಾಧು ಶ್ರೀನಾಥ್​
|

Updated on:Jan 25, 2020 | 1:59 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಫಾರಿನ್ ಟ್ರೇಡ್, ಬುಲಿಯನ್ಸ್‌ನಲ್ಲಿ ಹೂಡಿಕೆ ನೆಪದಲ್ಲಿ TTSPL ಕಂಪನಿ ನೂರಾರು ಜನರಿಗೆ ವಂಚನೆ ಮಾಡಿದೆ. ಈ ಸಂಬಂಧ ಇಬ್ಬರು ಆರೋಪಿಗಳ ಬಂಧನವಾಗಿದ್ದು ಪ್ರಮುಖ ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಹೆಚ್ಚಿನ ಲಾಭಾಂಶದ ಆಸೆ ತೋರಿಸಿ ವಂಚನೆ: 2018ರಲ್ಲಿ ಪ್ರಕರಣದ ಪ್ರಮುಖ ಆರೋಪಿ ಹಬಿಬುಲ್ಲಾ ಎಂಬುವನು ಕಂಪನಿ ಆರಂಭಿಸಿದ್ದ. ಈ ಹಿಂದೆ ಹಬಿಬುಲ್ಲಾ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ. ಕಂಪನಿ ಶುರುಮಾಡುತ್ತಿದ್ದಂತೆ ಹೆಚ್ಚಿನ ಲಾಭಾಂಶದ ಆಸೆ ತೋರಿಸಿ ನೂರಾರು ಮಂದಿಯಿಂದ ಹಣ ಹೂಡಿಕೆ ಮಾಡಿಸಿಕೊಂಡಿದ್ದಾನೆ. ಸಾರ್ವಜನಿಕರು 10 ಕೋಟಿಗೂ ಅಧಿಕ ಹಣ ಹೂಡಿಕೆ ಮಾಡಿದ್ದರು. ಬೆಂಗಳೂರಿನ ಜಯನಗರದ 9ನೇ ಹಂತದಲ್ಲಿರುವ TTSPL ಕಂಪನಿ, ಹೂಡಿಕೆದಾರರಿಗೆ ಆರಂಭದಲ್ಲಿ ಲಾಭಾಂಶ ನೀಡಿತ್ತು.

ಐದಾರು ತಿಂಗಳಿಂದ ಹಣ ನೀಡಿದೆ ಕಂಪನಿ ಗ್ರಾಹಕರಿಗೆ ವಂಚನೆ ಮಾಡಿದೆ. ಈ ಬಗ್ಗೆ ನೊಂದ ಹೂಡಿಕೆದಾರರು ತಿಲಕನಗರ ಪೊಲೀಸ್ ಠಾಣೆಗೆ ಸಾಲು ಸಾಲು ದೂರು ನೀಡಿದ್ದಾರೆ. ಆರೋಪಿಗಳ ವಿರುದ್ಧ 1.75 ಕೋಟಿ ರೂ. ವಂಚನೆಯಾದ ಬಗ್ಗೆ ಸದ್ಯ 40 ಮಂದಿ ಪ್ರಕರಣ ದಾಖಲಿಸಿದ್ದಾರೆ.

ಪ್ರಮುಖ ಆರೋಪಿ ನಾಪತ್ತೆ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಮಂಜುನಾಥ್, ಮಸಿವುಲ್ಲಾ ಷರೀಫ್ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 80 ಲಕ್ಷ ರೂ. ಮೌಲ್ಯದ ಒಂದು BMW ಕಾರು, 32 ಲಕ್ಷ ಮೌಲ್ಯದ ಮತ್ತೊಂದು ಐಷಾರಾಮಿ ಕಾರು, 15 ಲಕ್ಷ ಮೌಲ್ಯದ ಕಾರು ಮತ್ತು ಒಂದು ಬಂಗಲೆ ಜಪ್ತಿ ಮಾಡಿದ್ದಾರೆ. ಪ್ರಮುಖ ಆರೋಪಿ ಹಬಿಬುಲ್ಲಾ ದುಬೈನಲ್ಲಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ. ಹಬಿಬುಲ್ಲಾಗಾಗಿ ತಿಲಕ್ ನಗರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Published On - 1:41 pm, Sat, 25 January 20

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!