AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಮಧುಮೇಹಿಗಳಂದ್ರೆ ಇಷ್ಟವಂತೆ! ಆದ್ರೆ ಈ ವೈದ್ಯರು ಹೇಳೋದೇ ಬೇರೆ?

ಉಡುಪಿ: ಮಹಾಮಾರಿ ಕೊರೊನಾಗೆ ಇಡೀ ವಿಶ್ವವೇ ಪತರಗುಟ್ಟಿಹೋಗಿದೆ. ಯಾವ ದೇಶವೂ ಸಹ ಕೊರೊನಾಗೆ ಔಷಧ ಕಂಡುಹಿಡಿದಿಲ್ಲ. ಆದ್ರೆ ಕೊರೊನಾ ವಿರುದ್ಧದ ಹೋರಾಟದಲ್ಲಿ ಕೆನಡಾದಲ್ಲಿರುವ ಕನ್ನಡಿಗ ಹೊಸ ಭರವಸೆ ಮೂಡಿಸಿದ್ದಾರೆ. ಕನ್ನಡಿಗ ಡಾ.ಪ್ರವೀಣ್ ನೆಕ್ಕಾರ್ ನೇತೃತ್ವದಲ್ಲಿ ಕೆನಡಾದ ಪ್ರತಿಷ್ಠಿತ ವಾಟರ್ ಲೂ ಯೂನಿವರ್ಸಿಟಿಯಲ್ಲಿ ಮಹತ್ವದ ಸಂಶೋಧನೆ ನಡೆಯುತ್ತಿದೆ. ಉಡುಪಿಯ ಪೆರಂಪಳ್ಳಿ ನೆಕ್ಕಾರ್ ಮನೆತನಕ್ಕೆ ಸೇರಿದ ಡಾ.ಪ್ರವೀಣ್, ಯೂನಿವರ್ಸಿಟಿಯಲ್ಲಿ ಫಾರ್ಮಸಿ ವಿಭಾಗದ ಮುಖ್ಯಸ್ಥರಾಗಿದ್ದಾರೆ. ಮಹಾಮಾರಿ ಕೊರೊನಾಗೆ ಟೈಪ್ 2 ಡಯಾಬಿಟೀಸ್ ಮದ್ದಿನ ಮೇಲೆ ಸಂಶೋಧನೆ ಮಾಡುತ್ತಿದ್ದು, ಕೊವಿಡ್ ತಡೆಗೆ ಸಂಶೋಧನೆಯಲ್ಲಿ […]

ಕೊರೊನಾಗೆ ಮಧುಮೇಹಿಗಳಂದ್ರೆ ಇಷ್ಟವಂತೆ! ಆದ್ರೆ ಈ ವೈದ್ಯರು ಹೇಳೋದೇ ಬೇರೆ?
ಸಾಧು ಶ್ರೀನಾಥ್​
| Edited By: |

Updated on:May 22, 2020 | 1:28 PM

Share

ಉಡುಪಿ: ಮಹಾಮಾರಿ ಕೊರೊನಾಗೆ ಇಡೀ ವಿಶ್ವವೇ ಪತರಗುಟ್ಟಿಹೋಗಿದೆ. ಯಾವ ದೇಶವೂ ಸಹ ಕೊರೊನಾಗೆ ಔಷಧ ಕಂಡುಹಿಡಿದಿಲ್ಲ. ಆದ್ರೆ ಕೊರೊನಾ ವಿರುದ್ಧದ ಹೋರಾಟದಲ್ಲಿ ಕೆನಡಾದಲ್ಲಿರುವ ಕನ್ನಡಿಗ ಹೊಸ ಭರವಸೆ ಮೂಡಿಸಿದ್ದಾರೆ.

ಕನ್ನಡಿಗ ಡಾ.ಪ್ರವೀಣ್ ನೆಕ್ಕಾರ್ ನೇತೃತ್ವದಲ್ಲಿ ಕೆನಡಾದ ಪ್ರತಿಷ್ಠಿತ ವಾಟರ್ ಲೂ ಯೂನಿವರ್ಸಿಟಿಯಲ್ಲಿ ಮಹತ್ವದ ಸಂಶೋಧನೆ ನಡೆಯುತ್ತಿದೆ. ಉಡುಪಿಯ ಪೆರಂಪಳ್ಳಿ ನೆಕ್ಕಾರ್ ಮನೆತನಕ್ಕೆ ಸೇರಿದ ಡಾ.ಪ್ರವೀಣ್, ಯೂನಿವರ್ಸಿಟಿಯಲ್ಲಿ ಫಾರ್ಮಸಿ ವಿಭಾಗದ ಮುಖ್ಯಸ್ಥರಾಗಿದ್ದಾರೆ.

ಮಹಾಮಾರಿ ಕೊರೊನಾಗೆ ಟೈಪ್ 2 ಡಯಾಬಿಟೀಸ್ ಮದ್ದಿನ ಮೇಲೆ ಸಂಶೋಧನೆ ಮಾಡುತ್ತಿದ್ದು, ಕೊವಿಡ್ ತಡೆಗೆ ಸಂಶೋಧನೆಯಲ್ಲಿ ಆರಂಭಿಕ ಯಶಸ್ಸು ಸಿಕ್ಕಿದೆ. Dpp-4 ಇನ್ಹಿಬೀಟರ್ ಇನ್ ಟೈಪ್ 2 ಡಯಾಬಿಟೀಸ್ ಮೇಲೆ ಸಂಶೋಧನೆ ಮಾಡಲಾಗುತ್ತಿದ್ದು, 6 ಪಿಹೆಚ್​ಡಿ ವಿದ್ಯಾರ್ಥಿಗಳ ತಂಡದ ಜೊತೆ ಡಾ ಪ್ರವೀಣ್ ರಾವ್ ಸಂಶೋಧನೆಯಲ್ಲಿ ತೊಡಗಿದ್ದಾರೆ.

ಮಧುಮೇಹಿಗಳು, ರಕ್ತದೊತ್ತಡ ವ್ಯತ್ಯಯ ಇರುವವರು ಕೊರೊನಾಗೆ ಬಹುಬೇಗನೆ ಬಲಿಯಾಗುತ್ತಾರೆ ಎಂಬ ಮಾತಿದೆ. ಆದ್ರೆ ಮಧುಮೇಹಿಗಳು ತೆಗೆದುಕೊಳ್ಳುವ ಮೆಡಿಸಿನ್, ಕೊರೊನಾಗೆ ದಿವ್ಯೌಷಧವಾಗಲಿದೆ ಎಂಬುದು ಕುತೂಹಲಕಾರಿಯಾಗಿದೆ.

ಔಷಧ ಕಂಡು ಹಿಡಿಯಲು 10-15 ವರ್ಷ ಆಗುತ್ತೆ: ಈ ಸಂಶೋಧನೆಗೆ ಕೆನಡಾ ಸರ್ಕಾರ ಅನುದಾನ ನೀಡುತ್ತಿದೆ. ಕೊರೊನಾಗೆ ಹೊಸ ಔಷಧವನ್ನ ಕಂಡು ಹಿಡಿಯಲು 10-15 ವರ್ಷ ತಗುಲುತ್ತದೆ. ಅದಕ್ಕೆ ನೂರು ಕೋಟಿ ಡಾಲರ್​ಗೂ ಅಧಿಕ ಖರ್ಚಾಗುತ್ತದೆ. ಈಗಾಗಲೇ ನಾವು ಕಂಡುಹಿಡಿದಿರುವ 5 ಸಾವಿರ ಔಷಧ ಫಾರ್ಮುಲಾ ಇದೆ. ಈ ಫಾರ್ಮುಲಾಗಳ ಸಂರಚನೆಯನ್ನು ಬಳಸಿಕೊಂಡು ವೈರಸ್ ವಿರುದ್ಧ ಹೋರಾಡಬೇಕು.

ಟೈಪ್ 2 ಡಯಾಬಿಟೀಸ್ ಮದ್ದಿನಲ್ಲಿ ಕೊರೊನಾದ ವ್ಯಾಪಕ ಹರಡುವಿಕೆಯನ್ನ ತಡೆಯುವ ಶಕ್ತಿ ಇದೆ. ಇದು ಈಗಾಗಲೇ ವೈದ್ಯಕೀಯ ಪ್ರಯೋಗಗಳಿಂದ ದೃಢಪಟ್ಟಿದೆ. ಇದನ್ನು ಕೊರೊನಾ ಸೋಂಕಿತರ ಮೇಲೆ ಪ್ರಯೋಗ ಮಾಡಿ ನೋಡುವುದು ಮಾತ್ರ ಬಾಕಿ ಇದೆ ಎಂದು ಸಂಶೋಧಕ ಡಾ.ಪ್ರವೀಣ್ ರಾವ್ ತಿಳಿಸಿದ್ದಾರೆ.

Published On - 12:32 pm, Fri, 22 May 20

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು