AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಲ ಒಡಲಲ್ಲಿ ನಾಪತ್ತೆಯಾಗುತ್ತಿರುವ ಮೀನುಗಾರರಿಗೆ ಬೇಕಿದೆ ಉಪಗ್ರಹ ಆಧಾರಿತ ನೇವಿಗೇಷನ್‌ ವ್ಯವಸ್ಥೆ..

ಉಡುಪಿ: ಅರಬ್ಬೀ ಸಮುದ್ರ ಕಳೆದ ಒಂದೆರಡು ವರ್ಷಗಳಿಂದ ಆತಂಕದ ಸಮುದ್ರ ಆಗ್ತಿದೆ. ಮೇಲಿಂದ ಮೇಲೆ ಅವಘಡಗಳು ಸಂಭವಿಸುತ್ತಲೇ ಇವೆ. ದಡದಿಂದ ಹೊರಟು 15 ದಿನ ಸಮುದ್ರದಲ್ಲಿ ಜೀವನ ಮಾಡೋ ಕಡಲ ಮಕ್ಕಳು ಇದೀಗ ಉಪಗ್ರಹ ಆಧಾರಿತ ನೇವಿಗೇಷನ್‌ ವ್ಯವಸ್ಥೆಗೆ ಬೇಡಿಕೆ ಇಟ್ಟಿದ್ದಾರೆ. ಅದರಂತೆ ಮೋದಿ ಸರ್ಕಾರದ ಮೀನುಗಾರಿಕಾ ಸಚಿವಾಲಯದ ಕದ ತಟ್ಟಿದ್ದಾರೆ. ಅರಬ್ಬೀ ಸಮುದ್ರ ಒಂದು ಕಾಲದಲ್ಲಿ ಸೇಫ್‌ ಸಮುದ್ರ ಎಂಬ ಖ್ಯಾತಿ ಪಡೆದಿತ್ತು. ಕಡಲ ಮಕ್ಕಳು ಕಸುಬು ಮಾಡಿ ಜೀವನ ನಡೆಸುತ್ತಿದ್ರು. ಇತ್ತೀಚಿನ ವರ್ಷಗಳಲ್ಲಿ ಅರಬ್ಬೀ […]

ಕಡಲ ಒಡಲಲ್ಲಿ ನಾಪತ್ತೆಯಾಗುತ್ತಿರುವ ಮೀನುಗಾರರಿಗೆ ಬೇಕಿದೆ ಉಪಗ್ರಹ ಆಧಾರಿತ ನೇವಿಗೇಷನ್‌ ವ್ಯವಸ್ಥೆ..
ಉಡುಪಿಯಲ್ಲಿ ಮೀನುಗಾರಿಕಾ ದೋಣಿಗಳು
ಆಯೇಷಾ ಬಾನು
|

Updated on: Oct 13, 2020 | 8:08 AM

Share

ಉಡುಪಿ: ಅರಬ್ಬೀ ಸಮುದ್ರ ಕಳೆದ ಒಂದೆರಡು ವರ್ಷಗಳಿಂದ ಆತಂಕದ ಸಮುದ್ರ ಆಗ್ತಿದೆ. ಮೇಲಿಂದ ಮೇಲೆ ಅವಘಡಗಳು ಸಂಭವಿಸುತ್ತಲೇ ಇವೆ. ದಡದಿಂದ ಹೊರಟು 15 ದಿನ ಸಮುದ್ರದಲ್ಲಿ ಜೀವನ ಮಾಡೋ ಕಡಲ ಮಕ್ಕಳು ಇದೀಗ ಉಪಗ್ರಹ ಆಧಾರಿತ ನೇವಿಗೇಷನ್‌ ವ್ಯವಸ್ಥೆಗೆ ಬೇಡಿಕೆ ಇಟ್ಟಿದ್ದಾರೆ. ಅದರಂತೆ ಮೋದಿ ಸರ್ಕಾರದ ಮೀನುಗಾರಿಕಾ ಸಚಿವಾಲಯದ ಕದ ತಟ್ಟಿದ್ದಾರೆ.

ಅರಬ್ಬೀ ಸಮುದ್ರ ಒಂದು ಕಾಲದಲ್ಲಿ ಸೇಫ್‌ ಸಮುದ್ರ ಎಂಬ ಖ್ಯಾತಿ ಪಡೆದಿತ್ತು. ಕಡಲ ಮಕ್ಕಳು ಕಸುಬು ಮಾಡಿ ಜೀವನ ನಡೆಸುತ್ತಿದ್ರು. ಇತ್ತೀಚಿನ ವರ್ಷಗಳಲ್ಲಿ ಅರಬ್ಬೀ ಸಮುದ್ರ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ನಿರಂತರವಾಗಿ ಅರಬ್ಬಿ ಸಮುದ್ರದಲ್ಲಿ ದೋಣಿ ದುರಂತ.. ಆಳ ಸಮುದ್ರ ಮೀನುಗಾರಿಕೆ ಬೋಟುಗಳ ದುರಂತ ಸಂಭವಿಸುತ್ತಿವೆ.

ವರ್ಷದ ಹಿಂದೆ ಸುವರ್ಣ ತ್ರಿಭುಜ ಬೋಟ್‌ನಲ್ಲಿ ಕಣ್ಮರೆಯಾದ 7 ಮಂದಿ ಇನ್ನೂ ಸಿಕ್ಕಿಲ್ಲ. ಮರವಂತೆಯಲ್ಲಿ ನಡೆದ ದೋಣಿ ದುರಂತದಲ್ಲಿ 4 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಗಂಗೊಳ್ಳಿಯಲ್ಲಿ ದೋಣಿ ದುರಂತದಲ್ಲಿ ಮೀನುಗಾರರು ಪಾರಾಗಿ, ಬೋಟ್‌ ಮುಳುಗಿದೆ. ಮಲ್ಪೆಯಲ್ಲಿ 3 ಪರ್ಷಿಯನ್ ಬೋಟ್‌ಗಳು ಅಲೆಯ ಹೊಡೆತಕ್ಕೆ ಸಿಲುಕಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಹೀಗೆ ಮೇಲಿಂದ ಮೇಲೆ ದುರ್ಘಟನೆಗಳು ನಡೆಯುತ್ತಿವೆ. ಇದನ್ನೆಲ್ಲಾ ತಡೆಗಟ್ಟಲು ತಂತ್ರಜ್ಞಾನದ ಆವಿಷ್ಕಾರದ ಅಗತ್ಯತೆ ಇದೆ.

ಆಳ ಸಮುದ್ರ ಮೀನುಗಾರಿಕೆಗೆ ಬಂದರಿನಿಂದ ಬೋಟ್‌ ಹೊರಟ್ರೆ ಮತ್ತೆ ವಾಪಸ್ ಆಗಲು 15 ದಿನ ಬೇಕು. ಮುಂಜಾನೆ ತೆರಳಿ ಸಂಜೆ ವಾಪಸ್ಸಾಗುವ ಮೀನುಗಾರಿಕೆ ಕೂಡ ಉಡುಪಿಯಲ್ಲಿ ನಡೆಯುತ್ತಿದೆ. ಮೀನುಗಾರಿಕೆಗೆ ತೆರಳಿದ ಸಂದರ್ಭ ಸಾವಿರಾರು ಜನ ಕುಟುಂಬದ ಜತೆ ಬಂದರಿನ ಜತೆ ಸಂಪರ್ಕವನ್ನ ಕಳೆದುಕೊಳ್ಳುತ್ತಾರೆ. ಪ್ರಾಕೃತಿಕ ವೈಪರಿತ್ಯ ನಡೆದಾಗ ಸಂಪರ್ಕ ಮಾಡೋದು ಸಾಧ್ಯವಾಗಲ್ಲ. ಪ್ರಾಣ ರಕ್ಷಣೆಗೆ ಅಗತ್ಯ ಮಾಹಿತಿ ರವಾನೆಗೆ ಅತ್ಯಾಧುನಿಕ ತಂತ್ರಜ್ಞಾನವನ್ನ ಬೋಟಿಗೆ ಅಳವಡಿಸಬೇಕು ಅನ್ನೋ ಒತ್ತಾಯ ಕೇಳಿಬರ್ತಿದೆ.

ಕೇಂದ್ರ ಸರ್ಕಾರದ ಮೀನುಗಾರಿಕಾ ಸಚಿವಾಲಯ, ರಾಜ್ಯ ಸರ್ಕಾರ ಬಂದರು ಮತ್ತು ಮೀನುಗಾರಿಕಾ ಇಲಾಖೆ ಮುತುವರ್ಜಿ ವಹಿಸೋ ಅಗತ್ಯವಿದೆ. ಉಪಗ್ರಹ ಆಧಾರಿತ ತಂತ್ರಜ್ಞಾನ ಮೊಬೈಲ್‌ ಡಿವೈಸ್‌ ಮೂಲಕ ಅಳವಡಿಕೆಯಾಗಬೇಕಿದೆ.

ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್