AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕಿತ್ಸೆ ಸಿಗದೆ ವೃದ್ಧೆ ಸಾವು, ಅಂತ್ಯಕ್ರಿಯೆಗೂ ಬರುತ್ತಿಲ್ಲ ಸಂಬಂಧಿಕರು

ಬೆಂಗಳೂರು: ಸಕಾಲದಲ್ಲಿ ಚಿಕಿತ್ಸೆ ಸಿಗದೆ ಕೊರೊನಾ ಸೋಂಕಿತನ ತಾಯಿ ಮೃತಪಟ್ಟ ಕರುಳು ಹಿಂಡುವಂಥ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಸಂಭವಿಸಿದೆ. ಇದಕ್ಕಿಂತಲೂ ಮನ ನೋಯಿಸುವಂತಹದ್ದು ಅಂದ್ರೆ ವೃದ್ಧೆಯ ಅಂತ್ಯಕ್ರಿಯೆಗೆ ಯಾರೂ ಮುಂದೆ ಬರದಿರೋದು. ಸಂಬಂಧಿಕರು, ನೆರೆಹೊರೆಯವರು, ಆರೋಗ್ಯ ಸಿಬ್ಬಂದಿ ಮತ್ತು 108 ಌಂಬುಲೆನ್ಸ್ ಸಿಬ್ಬಂದಿ ಕೂಡಾ ವೃದ್ದೆಯ ಅಂತ್ಯಕ್ರಿಯೆಗೆ ಮುಂದೆ ಬರುತ್ತಿಲ್ಲ. ಇನ್ನೊಂದೆಡೆ ಮೃತಳ ಮಗ ಕೊರೊನಾ ಸೋಂಕಿನಿಂದ ಆಸ್ಪತ್ರೆ ಸೇರಿದ್ದಾರೆ. ಹೀಗಾಗಿ ಕುಟುಂಬ ಸದಸ್ಯರು ಈಗ ಕಂಗಾಲಾಗಿದ್ದಾರೆ. ಮೃತ ವೃದ್ಧೆಯ ಮಗ […]

ಚಿಕಿತ್ಸೆ ಸಿಗದೆ ವೃದ್ಧೆ ಸಾವು, ಅಂತ್ಯಕ್ರಿಯೆಗೂ ಬರುತ್ತಿಲ್ಲ ಸಂಬಂಧಿಕರು
Guru
| Edited By: |

Updated on:Jul 10, 2020 | 6:12 PM

Share

ಬೆಂಗಳೂರು: ಸಕಾಲದಲ್ಲಿ ಚಿಕಿತ್ಸೆ ಸಿಗದೆ ಕೊರೊನಾ ಸೋಂಕಿತನ ತಾಯಿ ಮೃತಪಟ್ಟ ಕರುಳು ಹಿಂಡುವಂಥ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಸಂಭವಿಸಿದೆ.

ಇದಕ್ಕಿಂತಲೂ ಮನ ನೋಯಿಸುವಂತಹದ್ದು ಅಂದ್ರೆ ವೃದ್ಧೆಯ ಅಂತ್ಯಕ್ರಿಯೆಗೆ ಯಾರೂ ಮುಂದೆ ಬರದಿರೋದು. ಸಂಬಂಧಿಕರು, ನೆರೆಹೊರೆಯವರು, ಆರೋಗ್ಯ ಸಿಬ್ಬಂದಿ ಮತ್ತು 108 ಌಂಬುಲೆನ್ಸ್ ಸಿಬ್ಬಂದಿ ಕೂಡಾ ವೃದ್ದೆಯ ಅಂತ್ಯಕ್ರಿಯೆಗೆ ಮುಂದೆ ಬರುತ್ತಿಲ್ಲ. ಇನ್ನೊಂದೆಡೆ ಮೃತಳ ಮಗ ಕೊರೊನಾ ಸೋಂಕಿನಿಂದ ಆಸ್ಪತ್ರೆ ಸೇರಿದ್ದಾರೆ. ಹೀಗಾಗಿ ಕುಟುಂಬ ಸದಸ್ಯರು ಈಗ ಕಂಗಾಲಾಗಿದ್ದಾರೆ.

ಮೃತ ವೃದ್ಧೆಯ ಮಗ ಕೊರೊನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಎಲ್ಐಸಿಯಲ್ಲಿ ಉದ್ಯೋಗಿಯಾಗಿರುವ ಮೃತ ವೃದ್ಧೆಯ ಪುತ್ರ ಕೂಡಾ ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, ಹಲವಾರು ಗಂಟೆಗಳ ಹೋರಾಟದ ನಂತರ 25,000 ರೂಪಾಯಿಗಳನ್ನ ಕಟ್ಟಿ ಆಕ್ಸ್​ಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೃದ್ಧೆಗೂ ಅನಾರೋಗ್ಯ ಎಂದಾಗ ತಾಯಿನ್ನು ಕೂಡಾ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಪುತ್ರ ಆಸ್ಪತ್ರೆಗೆ ಮನವಿ ಮಾಡಿದ್ದ. ಆದರೆ, ಮೊದಲು ಕೋವಿಡ್-19 ಟೆಸ್ಟ್ ಮಾಡಿಸಿ ನಂತರ ದಾಖಲಿಸಿಕೊಳ್ಳುತ್ತೇವೆ ಎಂದು ಆಸ್ಪತ್ರೆಯವರು ಮನವಿಯನ್ನ ತಳ್ಳಿಹಾಕಿದ್ದರು.

ಆದ್ರೆ ಬೆಳಿಗ್ಗೆಯಿಂದ ವೃದ್ಧೆಯ ಆರೋಗ್ಯ ಮತ್ತಷ್ಟು ಹದಗೆಟ್ಟಿತ್ತು. ವೃದ್ಧೆಯ ಕುಟುಂಬಸ್ಥರು ‘108 ಌಂಬುಲೆನ್ಸ್’ಗೆ ಕರೆ ಮಾಡಿದ್ದಾರೆ. ಆದ್ರೆ ಮನೆಯಿಂದ ಆಸ್ಪತ್ರೆಗೆ ಸ್ಥಳಾಂತರಿಸುವುದಷ್ಟೇ ನಮ್ಮ ಕೆಲಸ, ಮೊದಲು ‘ಬೆಡ್ ಹುಡುಕಿ ನಂತರ ಸ್ಥಳಾಂತರಿಸುತ್ತೇವೆ’ ಎಂದು 108 ಌಂಬುಲೆನ್​ನವರು ಜಾರಿಕೊಂಡಿದ್ದಾರೆ. ಆದ್ರೆ ಯಾವುದೇ ಚಿಕಿತ್ಸೆ ಸಿಗದೇ ವೃದ್ಧೆ ನರಳಿ ನರಳಿ ಸಾವನ್ನಪ್ಪಿದ್ದಾರೆ.

Published On - 3:48 pm, Fri, 10 July 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ