AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕಿತ್ಸೆ ಸಿಗದೆ ವೃದ್ಧೆ ಸಾವು, ಅಂತ್ಯಕ್ರಿಯೆಗೂ ಬರುತ್ತಿಲ್ಲ ಸಂಬಂಧಿಕರು

ಬೆಂಗಳೂರು: ಸಕಾಲದಲ್ಲಿ ಚಿಕಿತ್ಸೆ ಸಿಗದೆ ಕೊರೊನಾ ಸೋಂಕಿತನ ತಾಯಿ ಮೃತಪಟ್ಟ ಕರುಳು ಹಿಂಡುವಂಥ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಸಂಭವಿಸಿದೆ. ಇದಕ್ಕಿಂತಲೂ ಮನ ನೋಯಿಸುವಂತಹದ್ದು ಅಂದ್ರೆ ವೃದ್ಧೆಯ ಅಂತ್ಯಕ್ರಿಯೆಗೆ ಯಾರೂ ಮುಂದೆ ಬರದಿರೋದು. ಸಂಬಂಧಿಕರು, ನೆರೆಹೊರೆಯವರು, ಆರೋಗ್ಯ ಸಿಬ್ಬಂದಿ ಮತ್ತು 108 ಌಂಬುಲೆನ್ಸ್ ಸಿಬ್ಬಂದಿ ಕೂಡಾ ವೃದ್ದೆಯ ಅಂತ್ಯಕ್ರಿಯೆಗೆ ಮುಂದೆ ಬರುತ್ತಿಲ್ಲ. ಇನ್ನೊಂದೆಡೆ ಮೃತಳ ಮಗ ಕೊರೊನಾ ಸೋಂಕಿನಿಂದ ಆಸ್ಪತ್ರೆ ಸೇರಿದ್ದಾರೆ. ಹೀಗಾಗಿ ಕುಟುಂಬ ಸದಸ್ಯರು ಈಗ ಕಂಗಾಲಾಗಿದ್ದಾರೆ. ಮೃತ ವೃದ್ಧೆಯ ಮಗ […]

ಚಿಕಿತ್ಸೆ ಸಿಗದೆ ವೃದ್ಧೆ ಸಾವು, ಅಂತ್ಯಕ್ರಿಯೆಗೂ ಬರುತ್ತಿಲ್ಲ ಸಂಬಂಧಿಕರು
Guru
| Updated By: |

Updated on:Jul 10, 2020 | 6:12 PM

Share

ಬೆಂಗಳೂರು: ಸಕಾಲದಲ್ಲಿ ಚಿಕಿತ್ಸೆ ಸಿಗದೆ ಕೊರೊನಾ ಸೋಂಕಿತನ ತಾಯಿ ಮೃತಪಟ್ಟ ಕರುಳು ಹಿಂಡುವಂಥ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಸಂಭವಿಸಿದೆ.

ಇದಕ್ಕಿಂತಲೂ ಮನ ನೋಯಿಸುವಂತಹದ್ದು ಅಂದ್ರೆ ವೃದ್ಧೆಯ ಅಂತ್ಯಕ್ರಿಯೆಗೆ ಯಾರೂ ಮುಂದೆ ಬರದಿರೋದು. ಸಂಬಂಧಿಕರು, ನೆರೆಹೊರೆಯವರು, ಆರೋಗ್ಯ ಸಿಬ್ಬಂದಿ ಮತ್ತು 108 ಌಂಬುಲೆನ್ಸ್ ಸಿಬ್ಬಂದಿ ಕೂಡಾ ವೃದ್ದೆಯ ಅಂತ್ಯಕ್ರಿಯೆಗೆ ಮುಂದೆ ಬರುತ್ತಿಲ್ಲ. ಇನ್ನೊಂದೆಡೆ ಮೃತಳ ಮಗ ಕೊರೊನಾ ಸೋಂಕಿನಿಂದ ಆಸ್ಪತ್ರೆ ಸೇರಿದ್ದಾರೆ. ಹೀಗಾಗಿ ಕುಟುಂಬ ಸದಸ್ಯರು ಈಗ ಕಂಗಾಲಾಗಿದ್ದಾರೆ.

ಮೃತ ವೃದ್ಧೆಯ ಮಗ ಕೊರೊನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಎಲ್ಐಸಿಯಲ್ಲಿ ಉದ್ಯೋಗಿಯಾಗಿರುವ ಮೃತ ವೃದ್ಧೆಯ ಪುತ್ರ ಕೂಡಾ ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, ಹಲವಾರು ಗಂಟೆಗಳ ಹೋರಾಟದ ನಂತರ 25,000 ರೂಪಾಯಿಗಳನ್ನ ಕಟ್ಟಿ ಆಕ್ಸ್​ಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೃದ್ಧೆಗೂ ಅನಾರೋಗ್ಯ ಎಂದಾಗ ತಾಯಿನ್ನು ಕೂಡಾ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಪುತ್ರ ಆಸ್ಪತ್ರೆಗೆ ಮನವಿ ಮಾಡಿದ್ದ. ಆದರೆ, ಮೊದಲು ಕೋವಿಡ್-19 ಟೆಸ್ಟ್ ಮಾಡಿಸಿ ನಂತರ ದಾಖಲಿಸಿಕೊಳ್ಳುತ್ತೇವೆ ಎಂದು ಆಸ್ಪತ್ರೆಯವರು ಮನವಿಯನ್ನ ತಳ್ಳಿಹಾಕಿದ್ದರು.

ಆದ್ರೆ ಬೆಳಿಗ್ಗೆಯಿಂದ ವೃದ್ಧೆಯ ಆರೋಗ್ಯ ಮತ್ತಷ್ಟು ಹದಗೆಟ್ಟಿತ್ತು. ವೃದ್ಧೆಯ ಕುಟುಂಬಸ್ಥರು ‘108 ಌಂಬುಲೆನ್ಸ್’ಗೆ ಕರೆ ಮಾಡಿದ್ದಾರೆ. ಆದ್ರೆ ಮನೆಯಿಂದ ಆಸ್ಪತ್ರೆಗೆ ಸ್ಥಳಾಂತರಿಸುವುದಷ್ಟೇ ನಮ್ಮ ಕೆಲಸ, ಮೊದಲು ‘ಬೆಡ್ ಹುಡುಕಿ ನಂತರ ಸ್ಥಳಾಂತರಿಸುತ್ತೇವೆ’ ಎಂದು 108 ಌಂಬುಲೆನ್​ನವರು ಜಾರಿಕೊಂಡಿದ್ದಾರೆ. ಆದ್ರೆ ಯಾವುದೇ ಚಿಕಿತ್ಸೆ ಸಿಗದೇ ವೃದ್ಧೆ ನರಳಿ ನರಳಿ ಸಾವನ್ನಪ್ಪಿದ್ದಾರೆ.

Published On - 3:48 pm, Fri, 10 July 20

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?