KR Market ನೈಟ್​ ಬೀಟ್​ ಪೊಲೀಸರಿಗೆ ಸಿಕ್ತು ರಾಶಿ ರಾಶಿ ಚಿನ್ನ, ಎಲ್ಲಿ.. ಎಲ್ಲಿ? ನೀವೂ ನೋಡಿ..

ಬೆಂಗಳೂರು: ಜನಸಾಮಾನ್ಯರು ಕೇವಲ ಒಂದು ಗ್ರಾಂ ಚಿನ್ನ ಖರೀದಿ ಮಾಡಲು ಕಷ್ಟಕರವಾಗಿರುವ ಈ ದಿನಗಳಲ್ಲಿ, ಯಾರೇ ಆಗಲಿ ದಿಗ್ಬ್ರಮೆಗೊಳ್ಳುವಂತೆ ರಾಶಿ ರಾಶಿ ಚಿನ್ನ ಹೊಂದಿದ್ದ ವ್ಯಕ್ತಿಯೊಬ್ಬ ಪೊಲೀಸರಿಗೆ ಸಿಕ್ಕಿಬಿದಿದ್ದಾನೆ. ನಿನ್ನೆ ರಾತ್ರಿ ಗಸ್ತಿನಲ್ಲಿ ಜಾಗೃತೆಯಿಂದ ಕರ್ತವ್ಯ ನಿರ್ವಹಿಸಿ ದಾಖಲೆರಹಿತ ಚಿನ್ನದಾಭರಣಗಳನ್ನು ಜಪ್ತಿ ಮಾಡಿದ ಪಿಎಸ್ಐ ಶ್ರೀಮತಿ ಸವಿತಾ, ಕಾನ್ಸ್ಟೇಬಲ್ಸ್ ಆನಂದ ಹಾಗೂ ಹನಮಂತರವರನ್ನು @DCPWestBCP ಕಛೇರಿಯಲ್ಲಿ ಅಭಿನಂದಿಸಲಾಯಿತು. @acpchikpete @CityMarketPS1 ಹಾಜರಿದ್ದರು.@CPBlr @DgpKarnataka @BlrCityPolice @AddlCPWest pic.twitter.com/ChdQqDpqJB — Dr. Sanjeev M Patil, IPS (@DCPWestBCP) […]

KR Market ನೈಟ್​ ಬೀಟ್​ ಪೊಲೀಸರಿಗೆ ಸಿಕ್ತು ರಾಶಿ ರಾಶಿ ಚಿನ್ನ, ಎಲ್ಲಿ.. ಎಲ್ಲಿ? ನೀವೂ ನೋಡಿ..
Edited By:

Updated on: Nov 22, 2020 | 11:08 AM

ಬೆಂಗಳೂರು: ಜನಸಾಮಾನ್ಯರು ಕೇವಲ ಒಂದು ಗ್ರಾಂ ಚಿನ್ನ ಖರೀದಿ ಮಾಡಲು ಕಷ್ಟಕರವಾಗಿರುವ ಈ ದಿನಗಳಲ್ಲಿ, ಯಾರೇ ಆಗಲಿ ದಿಗ್ಬ್ರಮೆಗೊಳ್ಳುವಂತೆ ರಾಶಿ ರಾಶಿ ಚಿನ್ನ ಹೊಂದಿದ್ದ ವ್ಯಕ್ತಿಯೊಬ್ಬ ಪೊಲೀಸರಿಗೆ ಸಿಕ್ಕಿಬಿದಿದ್ದಾನೆ.


ನಡುರಾತ್ರಿ ತಣ್ಣಗೆ ಗಸ್ತಿನಲ್ಲಿದ್ದ ಪೊಲೀಸರು ಈ ಚಿನ್ನದ ರಾಶಿಯನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಸಾವರಿಸಿಕೊಂಡು ಏನಪ್ಪಾ ಇದು ಚಿನ್ನದ ಅಂಗಡಿ ಇಡಕ್ಕೆ ಹೋಗುತ್ತಿದ್ದೀಯಾ ಅಥವಾ ಚಿನ್ನದ ಅಗಡಿಯನ್ನೇ ದೋಚಿಕೊಂಡು ಹೋಗುತ್ತಿದ್ದೀಯಾ? ಎಂದು ಆಸಾಮಿಯನ್ನು ಕೇಳಿದ್ದಾರೆ. ಏಕೆಂದ್ರೆ ಅವನ ಬಳಿಯಿದ್ದ ಚಿನ್ನದ ರಾಶಿ ಹಾಗಿತ್ತು. ನೀಟಾಗಿ ಅದನ್ನು ಜೋಡಿಸಿಟ್ಟರೆ ಒಂದು ಸಾಮಾನ್ಯ ಸೈಜಿನ ಚಿನ್ನಾಭರಣ ಅಂಗಡಿಯನ್ನೇ ತೆರೆಯಬಹುದು. ಬಹುಶಃ ರಾಜಧಾನಿ ಬೆಂಗಳೂರಿನ ಇತಿಹಾಸದಲ್ಲಿಯೇ ಪೊಲೀಸರಿಗೆ ಒಮ್ಮೆಗೇ ಸಿಕ್ಕಿ ಬಿದ್ದಿರುವ ಭಾರೀ ಪ್ರಮಾಣದ ಚಿನ್ನ ಇದಾಗಿರಬಹುದು.

ಹೌದು.. ಸರಿಯಾದ ದಾಖಲೆಗಳು ಇಲ್ಲದೆ ದೊಡ್ಡ ಪ್ರಮಾಣದಲ್ಲಿ ಚಿನ್ನದ ಆಭರಣ ಸಾಗಿಸುತಿದ್ದ ವ್ಯಕ್ತಿಯನ್ನು ರಾತ್ರಿ ಗಸ್ತಿನಲ್ಲಿದ್ದ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಂಗಳೂರಿನ ಕೆ.ಆರ್. ಮಾರ್ಕೆಟ್ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನೈಟ್ ಬೀಟ್ ಪೊಲೀಸರು ಚೆಕ್​ ಪೋಸ್ಟ್​ನಲ್ಲಿ ವಾಹನ ತಡೆದು ಪರಿಶೀಲನೆ ಮಾಡಿದ್ದಾರೆ. ಈ ವೇಳೆ ವಾಹನದಲ್ಲಿದ್ದ ಭಾರಿ ಪ್ರಮಾಣದ ಬಂಗಾರದ ಅಭರಣಗಳನ್ನು ಕಂಡ ಕೆ ಆರ್ ಮಾರ್ಕೆಟ್ ಪೊಲೀಸರು ಅರೆ ಕ್ಷಣ ದಂಗಾಗಿ ಹೋಗಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡು, ಆಭರಣಗಳ ಜೊತೆಗೆ, ಸದರಿ ವ್ಯಕ್ತಿಯನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಇನ್ನು.. ಪೊಲೀಸರು ವಶಕ್ಕೆ ಪಡೆದ ವ್ಯಕ್ತಿ, ಪೊಲೀಸರು ಕೇಳಿದ ಯಾವೊಂದು ಪ್ರಶ್ನೆಗೂ ಸರಿಯಾದ ಉತ್ತರ ನೀಡಿಲ್ಲ. ಜೊತೆಗೆ ಪತ್ತೆಯಾದ ಬಂಗಾರದ ಬಗ್ಗೆ ದಾಖಲಾತಿ ಕೇಳಿದ್ರೆ ಆ ವ್ಯಕ್ತಿ ದಾಖಲೆ ನೀಡಿಲ್ಲ. ಹೀಗಾಗಿ ಪೊಲೀಸರು ವಶಕ್ಕೆ ಪಡೆದಿರುವ ಬಂಗಾರದ ಮೌಲ್ಯಮಾಪನ ಮಾಡುತ್ತಿದ್ದಾರೆ. ಅಲ್ಲದೆ ಈ ಚಿನ್ನ ಯಾರಿಗೆ ಸೇರಿದ್ದು, ತಡರಾತ್ರಿಯಲ್ಲಿ ಎಲ್ಲಿಗೆ ಸಾಗಿಸಲಾಗುತ್ತಿತ್ತು? ಎಂಬ ಪ್ರಶ್ನೆಗಳ ರಾಶಿಯನ್ನು ಚಿನ್ನದ ಗುಡ್ಡೆ ಎದುರು ಹಾಕಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

ಪೊಲೀಸರಿಗೆ ಸಿಕ್ಕಿರುವುದು ಚಿನ್ನವಾ.. ಇಲ್ಲಾವಾ ಎಂದು ಅನುಮಾನ
ರಾತ್ರಿ ಪಾಳಿಯಲ್ಲಿದ್ದ ಆನಂದ್ ಮತ್ತು ಹನುಮಂತ ಎಂಬ ಪೊಲೀಸರು ಅಕ್ಟಿವ್ ಹೋಂಡ ಸ್ಕೂಟರ್​ನಲ್ಲಿ ಸಾಗಿಸುತಿದ್ದ ಬಂಗಾರವನ್ನು ವಶಕ್ಕೆ ಪಡೆದಿದ್ದರು. ಜೊತೆಗೆ ಚಿನ್ನ ಸಾಗಿಸುತ್ತಿದ್ದ ದಲ್ಪತ್ ಸಿಂಗ್ ಮತ್ತು ವಿಕಾಸ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನೂ ಪತ್ತಿಯಾಗಿರುವ ಚಿನ್ನ ನಗರತ್ ಪೇಟೆಯ ಎಸ್ ಎಸ್ ಜ್ಯುವೆಲರಿ ಶಾಪ್​ಗೆ ಸೇರಿದ್ದ ಚಿನ್ನ ಎಂಬುದು ತಿಳಿದುಬಂದಿದೆ. ಆದರೆ ಪೊಲೀಸರಿಗೆ ಸಿಕ್ಕಿರುವ ಚಿನ್ನಕ್ಕೆ ಯಾವುದೆ ದಾಖಲಾತಿ ಸಿಕ್ಕಿಲ್ಲಾ. ಜೊತೆಗೆ ವಶಕ್ಕೆ ಪಡೆದಿರುವ ಚಿನ್ನದ ಆಭರಣಗಳಲ್ಲಿ ಕೇವಲ ಒನ್ ಗ್ರಾಂ ಗೋಲ್ಡ್ ಇರಬಹುದು ಎಂದು ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಇದರ ಬಗ್ಗೆ ಸದ್ಯ ಪರಿಶೀಲನೆ ನಡೆಸಲು ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Published On - 12:07 pm, Sat, 21 November 20

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us