ಅನಾನಸ್ ಆಯ್ತು, ಈಗ ಹಲಸಿನ ಹಣ್ಣಿನಲ್ಲಿ ವಿಷ ಹಾಕಿ ದನಗಳನ್ನು ಕೊಂದರು!

ಚಿಕ್ಕಮಗಳೂರು: ಇತ್ತೀಚೆಗಷ್ಟೇ ದೇವರ ನಾಡು ಕೇರಳದಲ್ಲಿ ಅನಾನಸ್ ತಿಂದು ಗರ್ಭಿಣಿ ಕಾಡಾನೆ ಸಾವಿಗೀಡಾಗಿತ್ತು. ಕಿಡಿಗೇಡಿಗಳು ಅನಾನಸ್​ ಹಣ್ಣಿನಲ್ಲಿ ಪಟಾಕಿ ಇಟ್ಟು ಗರ್ಭಿಣಿ ಆನೆಯನ್ನು ಕೊಂದಿದ್ದರು. ಪಾಪಿಗಳ ನೀಚ ಕೃತ್ಯಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಹಲಸಿನ ಹಣ್ಣಿಗೆ ವಿಷ ಹಾಕಿ ದನಗಳನ್ನು ಸಾಯಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಸರವಳ್ಳಿ ಗ್ರಾಮದಲ್ಲಿ ನಡೆದಿದೆ. ತೋಟಕ್ಕೆ ದನಗಳು ನುಗ್ಗುತ್ತವೆಂದು ಕಿಡಿಗೇಡಿಗಳು ವಿಷ ಪ್ರಾಶನ ಮಾಡಿದ್ದಾರೆ. ವಿಷಪೂರಿತ ಹಲಸಿನ ಹಣ್ಣು ತಿಂದು ಕಿಟ್ಟೆಗೌಡ, ಮಧು ಎಂಬುವರಿಗೆ ಸೇರಿದ ಮೂರು ದನಗಳು ಸಾವಿಗೀಡಾಗಿವೆ. […]

ಅನಾನಸ್ ಆಯ್ತು, ಈಗ ಹಲಸಿನ ಹಣ್ಣಿನಲ್ಲಿ ವಿಷ ಹಾಕಿ ದನಗಳನ್ನು ಕೊಂದರು!
ಸಾಧು ಶ್ರೀನಾಥ್​ Edited By:

Updated on: Jun 09, 2020 | 10:29 AM

ಚಿಕ್ಕಮಗಳೂರು: ಇತ್ತೀಚೆಗಷ್ಟೇ ದೇವರ ನಾಡು ಕೇರಳದಲ್ಲಿ ಅನಾನಸ್ ತಿಂದು ಗರ್ಭಿಣಿ ಕಾಡಾನೆ ಸಾವಿಗೀಡಾಗಿತ್ತು. ಕಿಡಿಗೇಡಿಗಳು ಅನಾನಸ್​ ಹಣ್ಣಿನಲ್ಲಿ ಪಟಾಕಿ ಇಟ್ಟು ಗರ್ಭಿಣಿ ಆನೆಯನ್ನು ಕೊಂದಿದ್ದರು. ಪಾಪಿಗಳ ನೀಚ ಕೃತ್ಯಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು.

ಇದೀಗ ಹಲಸಿನ ಹಣ್ಣಿಗೆ ವಿಷ ಹಾಕಿ ದನಗಳನ್ನು ಸಾಯಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಸರವಳ್ಳಿ ಗ್ರಾಮದಲ್ಲಿ ನಡೆದಿದೆ. ತೋಟಕ್ಕೆ ದನಗಳು ನುಗ್ಗುತ್ತವೆಂದು ಕಿಡಿಗೇಡಿಗಳು ವಿಷ ಪ್ರಾಶನ ಮಾಡಿದ್ದಾರೆ. ವಿಷಪೂರಿತ ಹಲಸಿನ ಹಣ್ಣು ತಿಂದು ಕಿಟ್ಟೆಗೌಡ, ಮಧು ಎಂಬುವರಿಗೆ ಸೇರಿದ ಮೂರು ದನಗಳು ಸಾವಿಗೀಡಾಗಿವೆ. ಈ ಸಂಬಂಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 10:26 am, Tue, 9 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us