AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021: ವಿದ್ಯುತ್​ ಹಂಚಿಕೆಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಬೇಕಿದೆ ಎಂದ ತಜ್ಞರು

Union Budget 2021: ನವೀಕರಿಸಬಹುದಾದ ವಿದ್ಯುತ್​ ಯೋಜನೆಗೆ ಸರ್ಕಾರ ಒತ್ತು ನೀಡಬೇಕು. ಇದಕ್ಕಾಗಿ ದೀರ್ಘಾವಧಿ ಪಾಲಿಸಿಗಳನ್ನು ಸರ್ಕಾರ ಜಾರಿಗೊಳಿಸಲು ಒತ್ತು ನೀಡಬೇಕು ಎಂದು ಐಸಿಆರ್​ಎ ತಜ್ಞರು ಹೇಳಿದ್ದಾರೆ.

Budget 2021: ವಿದ್ಯುತ್​ ಹಂಚಿಕೆಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಬೇಕಿದೆ ಎಂದ ತಜ್ಞರು
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: ರಶ್ಮಿ ಕಲ್ಲಕಟ್ಟ|

Updated on: Jan 30, 2021 | 5:11 PM

Share

ಈ ಬಾರಿಯ ಬಜೆಟ್​ನಲ್ಲಿ ವಿದ್ಯುತ್​ ಹಂಚಿಕೆಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು ಕೇಂದ್ರ ಸರ್ಕಾರ ಒತ್ತು ನೀಡುವ ಅಗತ್ಯ ಇದೆ ಎಂದು ಈ ಕ್ಷೇತ್ರದ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಐಸಿಆರ್​ಎ, ಈ ಬಾರಿಯ ಬಜೆಟ್​ನಲ್ಲಿ ವಿದ್ಯುತ್​ ಹಂಚಿಕೆಗೆ ಅಗತ್ಯವಿರುವ ಮೂಲಸೌಕರ್ಯ ಅಭಿವೃದ್ಧಿಪಡಿಸುವ ಅಗತ್ಯವಿದೆ. ಇದಕ್ಕಾಗಿ ಹೆಚ್ಚಿನ ಅನುದಾನ ನೀಡಬೇಕು. ಈ ಮೂಲಕ ವಿದ್ಯುತ್​ ವಿತರಣಾ ವಿಭಾಗದ ಆರ್ಥಿಕತೆಯನ್ನು ಸುಧಾರಿಸಬೇಕಿದೆ. ನವೀಕರಿಸಬಹುದಾದ ವಿದ್ಯುತ್​ ಸಾಮರ್ಥ್ಯದ ಗುರಿಗಳನ್ನು ಸಾಧಿಸುವ ಉದ್ದೇಶದಿಂದ ನಿಧಿ ಲಭ್ಯತೆಯನ್ನು ಹೆಚ್ಚಿಸಬೇಕು ಮತ್ತು ಭೂಸ್ವಾಧೀನ ಸವಾಲುಗಳನ್ನು ಸರಾಗಗೊಳಿಸುವ ಸಲುವಾಗಿ ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು. ಮನೆಯ ಮೇಲೆ ಸೋಲಾರ್​ ಅಳವಡಿಸುವುದಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಹೇಳಿದೆ.

ನವೀಕರಿಸಬಹುದಾದ ವಿದ್ಯುತ್​ ಯೋಜನೆಯತ್ತ ಸರ್ಕಾರ ಗಮನಹರಿಸಬೇಕಿದೆ. ಇದಕ್ಕಾಗಿ ದೀರ್ಘಾವಧಿ ಪಾಲಿಸಿಗಳನ್ನು ಸರ್ಕಾರ ಜಾರಿಗೊಳಿಸಲು ಒತ್ತು ನೀಡಬೇಕು. ಇದರಿಂದ ವಿದ್ಯುತ್​ ಕೇಂದ್ರದ ಅಭಿವೃದ್ಧ ಸಾಧ್ಯ ಎಂದು ಐಸಿಆರ್​ಎ ತಜ್ಞರು ಒತ್ತಾಯಿಸಿದ್ದಾರೆ.

ವಿದ್ಯುತ್​ ಕ್ಷೇತ್ರ ನಿಧಾನವಾಗಿ ಕೊರೊನಾದಿಂದ ಚೇತರಿಕೆ ಕಾಣುತ್ತಿದೆ. ಹೀಗಾಗಿ, 2021-22ನೇ ಬಜೆಟ್​ನಲ್ಲಿ ಈಗಿರುವ ಸಮಸ್ಯೆಗಳನ್ನು ಬಗೆಹರಿಸಿ, ಹೊಸ ರೀತಿಯ ಯೋಜನೆಗೆ ಆದ್ಯತೆ ನೀಡುವಂತೆ ಆಗಬೇಕು. ಅದರಲ್ಲೂ, ವಿತರಣೆ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ಸಿಗಬೇಕಿದೆ. ವಿದ್ಯುತ್​ ಹಂಚಿಕೆಗೆ ಬಲ ಸಿಕ್ಕರೆ, ಪೂರೈಕೆ ಪ್ರಮಾಣ ಹೆಚ್ಚಲಿದೆ. ಇದರಿಂದ ನಾವು ನಮ್ಮ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ತಜ್ಞರು ಹೇಳಿದ್ದಾರೆ.

Budget 2021 | ಸುಲಭದ ಗೃಹ ಸಾಲ, ತೆರಿಗೆ ವಿನಾಯ್ತಿ ನಿರೀಕ್ಷೆಯಲ್ಲಿ ರಿಯಲ್ ಎಸ್ಟೇಟ್ ವಲಯ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?