AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021: ವಿದ್ಯುತ್​ ಹಂಚಿಕೆಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಬೇಕಿದೆ ಎಂದ ತಜ್ಞರು

Union Budget 2021: ನವೀಕರಿಸಬಹುದಾದ ವಿದ್ಯುತ್​ ಯೋಜನೆಗೆ ಸರ್ಕಾರ ಒತ್ತು ನೀಡಬೇಕು. ಇದಕ್ಕಾಗಿ ದೀರ್ಘಾವಧಿ ಪಾಲಿಸಿಗಳನ್ನು ಸರ್ಕಾರ ಜಾರಿಗೊಳಿಸಲು ಒತ್ತು ನೀಡಬೇಕು ಎಂದು ಐಸಿಆರ್​ಎ ತಜ್ಞರು ಹೇಳಿದ್ದಾರೆ.

Budget 2021: ವಿದ್ಯುತ್​ ಹಂಚಿಕೆಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಬೇಕಿದೆ ಎಂದ ತಜ್ಞರು
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Updated By: ರಶ್ಮಿ ಕಲ್ಲಕಟ್ಟ

Updated on: Jan 30, 2021 | 5:11 PM

Share

ಈ ಬಾರಿಯ ಬಜೆಟ್​ನಲ್ಲಿ ವಿದ್ಯುತ್​ ಹಂಚಿಕೆಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು ಕೇಂದ್ರ ಸರ್ಕಾರ ಒತ್ತು ನೀಡುವ ಅಗತ್ಯ ಇದೆ ಎಂದು ಈ ಕ್ಷೇತ್ರದ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಐಸಿಆರ್​ಎ, ಈ ಬಾರಿಯ ಬಜೆಟ್​ನಲ್ಲಿ ವಿದ್ಯುತ್​ ಹಂಚಿಕೆಗೆ ಅಗತ್ಯವಿರುವ ಮೂಲಸೌಕರ್ಯ ಅಭಿವೃದ್ಧಿಪಡಿಸುವ ಅಗತ್ಯವಿದೆ. ಇದಕ್ಕಾಗಿ ಹೆಚ್ಚಿನ ಅನುದಾನ ನೀಡಬೇಕು. ಈ ಮೂಲಕ ವಿದ್ಯುತ್​ ವಿತರಣಾ ವಿಭಾಗದ ಆರ್ಥಿಕತೆಯನ್ನು ಸುಧಾರಿಸಬೇಕಿದೆ. ನವೀಕರಿಸಬಹುದಾದ ವಿದ್ಯುತ್​ ಸಾಮರ್ಥ್ಯದ ಗುರಿಗಳನ್ನು ಸಾಧಿಸುವ ಉದ್ದೇಶದಿಂದ ನಿಧಿ ಲಭ್ಯತೆಯನ್ನು ಹೆಚ್ಚಿಸಬೇಕು ಮತ್ತು ಭೂಸ್ವಾಧೀನ ಸವಾಲುಗಳನ್ನು ಸರಾಗಗೊಳಿಸುವ ಸಲುವಾಗಿ ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು. ಮನೆಯ ಮೇಲೆ ಸೋಲಾರ್​ ಅಳವಡಿಸುವುದಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಹೇಳಿದೆ.

ನವೀಕರಿಸಬಹುದಾದ ವಿದ್ಯುತ್​ ಯೋಜನೆಯತ್ತ ಸರ್ಕಾರ ಗಮನಹರಿಸಬೇಕಿದೆ. ಇದಕ್ಕಾಗಿ ದೀರ್ಘಾವಧಿ ಪಾಲಿಸಿಗಳನ್ನು ಸರ್ಕಾರ ಜಾರಿಗೊಳಿಸಲು ಒತ್ತು ನೀಡಬೇಕು. ಇದರಿಂದ ವಿದ್ಯುತ್​ ಕೇಂದ್ರದ ಅಭಿವೃದ್ಧ ಸಾಧ್ಯ ಎಂದು ಐಸಿಆರ್​ಎ ತಜ್ಞರು ಒತ್ತಾಯಿಸಿದ್ದಾರೆ.

ವಿದ್ಯುತ್​ ಕ್ಷೇತ್ರ ನಿಧಾನವಾಗಿ ಕೊರೊನಾದಿಂದ ಚೇತರಿಕೆ ಕಾಣುತ್ತಿದೆ. ಹೀಗಾಗಿ, 2021-22ನೇ ಬಜೆಟ್​ನಲ್ಲಿ ಈಗಿರುವ ಸಮಸ್ಯೆಗಳನ್ನು ಬಗೆಹರಿಸಿ, ಹೊಸ ರೀತಿಯ ಯೋಜನೆಗೆ ಆದ್ಯತೆ ನೀಡುವಂತೆ ಆಗಬೇಕು. ಅದರಲ್ಲೂ, ವಿತರಣೆ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ಸಿಗಬೇಕಿದೆ. ವಿದ್ಯುತ್​ ಹಂಚಿಕೆಗೆ ಬಲ ಸಿಕ್ಕರೆ, ಪೂರೈಕೆ ಪ್ರಮಾಣ ಹೆಚ್ಚಲಿದೆ. ಇದರಿಂದ ನಾವು ನಮ್ಮ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ತಜ್ಞರು ಹೇಳಿದ್ದಾರೆ.

Budget 2021 | ಸುಲಭದ ಗೃಹ ಸಾಲ, ತೆರಿಗೆ ವಿನಾಯ್ತಿ ನಿರೀಕ್ಷೆಯಲ್ಲಿ ರಿಯಲ್ ಎಸ್ಟೇಟ್ ವಲಯ

ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್