AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಎಸ್​ಟಿ ವಂಚನೆಯ ₹ 20,124 ಕೋಟಿ ಕೇಂದ್ರ ಸರ್ಕಾರದಿಂದ ಪತ್ತೆ: ನಿರ್ಮಲಾ ಸೀತಾರಾಮನ್

ಜಿಎಸ್​ಟಿ ಇನ್​ಪುಟ್ ಟ್ಯಾಕ್ಸ್ ಕ್ರೆಡಿಟ್​ನಲ್ಲಿ ವಂಚನೆ ಆಗಿದ್ದ 20,124 ಕೋಟಿ ರೂಪಾಯಿಗಳನ್ನು ಪತ್ತೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯಸಭೆಯಲ್ಲಿ ಹೇಳಿದ್ದಾರೆ.

ಜಿಎಸ್​ಟಿ ವಂಚನೆಯ ₹ 20,124 ಕೋಟಿ ಕೇಂದ್ರ ಸರ್ಕಾರದಿಂದ ಪತ್ತೆ: ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
Srinivas Mata
| Edited By: |

Updated on: Mar 09, 2021 | 7:31 PM

Share

ನವದೆಹಲಿ: ನವೆಂಬರ್ 9, 2020ರಿಂದ ಜನವರಿ 31, 2021ರ ಮಧ್ಯೆ ₹ 20,124 ಕೋಟಿ ಜಿಎಸ್​ಟಿ ವಂಚನೆಯನ್ನು ಸರ್ಕಾರ ಪತ್ತೆ ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಹೇಳಿದ್ದಾರೆ. ನಕಲಿ/ಬೋಗಸ್ ಇನ್​ವಾಯ್ಸ್​ಗಳನ್ನು ಬಳಸಿ, ಇನ್​ಪುಟ್ ಟ್ಯಾಕ್ಸ್ ಕ್ರೆಡಿಟ್ (ಐಟಿಸಿ) ಪಡೆಯುವುದನ್ನು ಹಾಗೂ ಮತ್ತೊಂದು ಸಂಸ್ಥೆಗೆ ವರ್ಗಾಯಿಸುವುದರ ವಿರುದ್ಧ ದೇಶದಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ ಎಂದು ರಾಜ್ಯಸಭೆಯಲ್ಲಿ ಅವರು ಲಿಖಿತ ಉತ್ತರವನ್ನು ನೀಡಿದ್ದಾರೆ.

ನವೆಂಬರ್ 9, 2020ರಿಂದ (ವಿಶೇಷ ಕಾರ್ಯಾಚರಣೆ ಆರಂಭವಾದ ದಿನದಿಂದ) ಜನವರಿ 31, 2021ರ ತನಕ ಪತ್ತೆ ಮಾಡಿದ ವಂಚನೆಯ ಮಾಹಿತಿಯನ್ನು ತೆರೆದಿಟ್ಟರು. 2,692 ಪ್ರಕರಣಗಳನ್ನು ಅಧಿಕಾರಿಗಳು ದಾಖಲು ಮಾಡಿದ್ದು, ಜಿಎಸ್​ಟಿ/ಇನ್​ಪುಟ್ ಟ್ಯಾಕ್ಸ್ ಕ್ರೆಡಿಟ್ ವಂಚನೆಯ ರೂ. 20,124.19 ಕೋಟಿ ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು. ಈ ಅವಧಿಯಲ್ಲಿ 282 ವ್ಯಕ್ತಿಗಳನ್ನು ಬಂಧಿಸಿ, ರೂ. 857.75 ಕೋಟಿ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

ಪ್ರತ್ಯೇಕವಾದ ಪ್ರಶ್ನೆಗೆ ಉತ್ತರಿಸಿದ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್, ಆದಾಯ ತೆರಿಗೆ ಇಲಾಖೆಯಿಂದ ಮುಚ್ಚಿಟ್ಟಿದ್ದ ರೂ. 2,223.88 ಕೋಟಿ ರೂಪಾಯಿಯನ್ನು ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್​ನಿಂದ ಡಿಸೆಂಬರ್ ಮಧ್ಯೆ ಪತ್ತೆ ಹಚ್ಚಲಾಗಿದೆ ಎಂದು ಹೇಳಿದರು. ಜತೆಗೆ 250 ಸಮೂಹಗಳ ಮೇಲೆ 2020ರ ಏಪ್ರಿಲ್​ನಿಂದ ಡಿಸೆಂಬರ್ ಮಧ್ಯೆ ಶೋಧ ನಡೆಸಿ, 6500.78 ಕೋಟಿ ವಶಪಡಿಸಿಕೊಳ್ಳಲಾಗಿದೆ ಎಂದರು.

ಇದನ್ನೂ ಓದಿ: ಫೆಬ್ರವರಿ ತಿಂಗಳಲ್ಲಿ 1.13 ಲಕ್ಷ ಕೋಟಿ ರೂಪಾಯಿ ಜಿಎಸ್​ಟಿ ಸಂಗ್ರಹ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್