ನಾಗರಹೊಳೆ ಬೇಟೆಗಾರರನ್ನ ಖೆಡ್ಡಾಕ್ಕೆ ಕೆಡವಿದ ಸಿಬ್ಬಂದಿಗೆ ಜಾವಡೇಕರ್​ ಶಹಬ್ಬಾಸ್ ಅಂದ್ರು!

ಮೈಸೂರು: ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದ ಹುಲಿ ಬೇಟೆ ಪ್ರಕರಣವನ್ನು ಕಡಿಮೆ ಸಮಯದಲ್ಲಿ ಭೇದಿಸಿದ ಅರಣ್ಯ ಇಲಾಖೆ ಸಿಬ್ಬಂದಿಯ ಕಾರ್ಯಕ್ಕೆ ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಪ್ರಕಾಶ್​ ಜಾವಡೇಕರ್​ರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಜಿಲ್ಲೆಯ ಹುಣಸೂರು ತಾಲೂಕಿನಲ್ಲಿರುವ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹುಲಿ ಸಂರಕ್ಷಣಾ ವಲಯದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಕಿರಾತಕರು ಹುಲಿಯೊಂದಕ್ಕೆ ಗುಂಡಿಕ್ಕಿ ಕೊಂದು ಅದರ ಹಲ್ಲು ಮತ್ತು ಕಾಲನ್ನು ಕತ್ತರಿಸಿಕೊಂಡು ಪರಾರಿಯಾಗಿದ್ದ ಘಟನೆ ನಡೆದಿತ್ತು. ಅಭಯಾರಣ್ಯದ ಕಲ್ಲಹಳ್ಳದಲ್ಲಿ ಈ ಘಟೆನ […]

ನಾಗರಹೊಳೆ ಬೇಟೆಗಾರರನ್ನ ಖೆಡ್ಡಾಕ್ಕೆ ಕೆಡವಿದ ಸಿಬ್ಬಂದಿಗೆ ಜಾವಡೇಕರ್​ ಶಹಬ್ಬಾಸ್ ಅಂದ್ರು!

Updated on: Sep 07, 2020 | 12:21 PM

ಮೈಸೂರು: ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದ ಹುಲಿ ಬೇಟೆ ಪ್ರಕರಣವನ್ನು ಕಡಿಮೆ ಸಮಯದಲ್ಲಿ ಭೇದಿಸಿದ ಅರಣ್ಯ ಇಲಾಖೆ ಸಿಬ್ಬಂದಿಯ ಕಾರ್ಯಕ್ಕೆ ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಪ್ರಕಾಶ್​ ಜಾವಡೇಕರ್​ರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಜಿಲ್ಲೆಯ ಹುಣಸೂರು ತಾಲೂಕಿನಲ್ಲಿರುವ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹುಲಿ ಸಂರಕ್ಷಣಾ ವಲಯದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಕಿರಾತಕರು ಹುಲಿಯೊಂದಕ್ಕೆ ಗುಂಡಿಕ್ಕಿ ಕೊಂದು ಅದರ ಹಲ್ಲು ಮತ್ತು ಕಾಲನ್ನು ಕತ್ತರಿಸಿಕೊಂಡು ಪರಾರಿಯಾಗಿದ್ದ ಘಟನೆ ನಡೆದಿತ್ತು.

ಅಭಯಾರಣ್ಯದ ಕಲ್ಲಹಳ್ಳದಲ್ಲಿ ಈ ಘಟೆನ ನಡೆದಿದ್ದು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕೇವಲ ನಾಲ್ಕು ದಿನಗಳಲ್ಲಿ ತನಿಖೆ ನಡೆಸಿ ಪ್ರಕರಣದ ಆರೋಪಿಗಳನ್ನ ಬಂಧಿಸಿದ್ದರು. ಸದ್ಯ ಇವರ ಕಾರ್ಯಕ್ಕೆ ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಪ್ರಕಾಶ್​ ಜಾವಡೇಕರ್​ರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಸಚಿವರು ಟ್ವೀಟ್ ಮುಖಾಂತರ ಅರಣ್ಯ ಸಿಬ್ಬಂದಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Published On - 12:05 pm, Mon, 7 September 20