AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಪಕ್ಷಕ್ಕೆ ಮುಜುಗರ ತರುವ ಸನ್ನಿವೇಶ, BJPಯಲ್ಲಿ ಇಂಥದ್ದು ಸಹಿಸಲ್ಲ.. ತಪ್ಪು ಸಾಬೀತಾದ್ರೆ ಕ್ರಮ ಖಚಿತ’

ನಮ್ಮದು ಶಿಸ್ತಿನ ಪಕ್ಷ, BJPಯಲ್ಲಿ ಇವೆಲ್ಲಾ ಸಹಿಸಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ನಾಳೆ ದೆಹಲಿಯಲ್ಲಿ ವರಿಷ್ಠರ ಜೊತೆ ಚರ್ಚಿಸುತ್ತೇವೆ. ಮಾಧ್ಯಮಗಳಲ್ಲಿ ನೋಡಿದ್ದೇನೆ ಎಂದು ಹೇಳಿದರು.

‘ಇದು ಪಕ್ಷಕ್ಕೆ ಮುಜುಗರ ತರುವ ಸನ್ನಿವೇಶ, BJPಯಲ್ಲಿ ಇಂಥದ್ದು ಸಹಿಸಲ್ಲ.. ತಪ್ಪು ಸಾಬೀತಾದ್ರೆ ಕ್ರಮ ಖಚಿತ’
‘ಇವು ಪಕ್ಷಕ್ಕೆ ಮುಜುಗರ ತರುವ ಸನ್ನಿವೇಶ, BJPಯಲ್ಲಿ ಇವೆಲ್ಲಾ ಸಹಿಸಲ್ಲ.. ತಪ್ಪು ಸಾಬೀತಾದ್ರೆ ಕ್ರಮ ಖಚಿತ’
KUSHAL V
| Edited By: |

Updated on:Jun 23, 2021 | 1:37 PM

Share

ಹುಬ್ಬಳ್ಳಿ: ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್​​ ವಿಡಿಯೋ ಬಯಲಾಗುತ್ತಿದ್ದಂತೆ ನಮ್ಮದು ಶಿಸ್ತಿನ ಪಕ್ಷ, BJPಯಲ್ಲಿ ಇವೆಲ್ಲಾ ಸಹಿಸಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ನಾಳೆ ದೆಹಲಿಯಲ್ಲಿ ವರಿಷ್ಠರ ಜೊತೆ ಚರ್ಚಿಸುತ್ತೇವೆ. ಮಾಧ್ಯಮಗಳಲ್ಲಿ ನೋಡಿದ್ದೇನೆ, ತಪ್ಪು ಮಾಡಿದ್ರೆ ಖಂಡಿತ ಕ್ರಮ ಜರುಗಿಸಲಾಗುವುದು. ಸಿಎಂ, ಪಕ್ಷದ ರಾಜ್ಯಾಧ್ಯಕ್ಷರ ಜೊತೆಯೂ ಮಾತನಾಡುತ್ತೇನೆ ಎಂದು ಹೇಳಿದರು.

ಎಲ್ಲ ಮಾಹಿತಿ ಪಡೆದು ವರಿಷ್ಠರ ಗಮನಕ್ಕೂ ತರುತ್ತೇನೆ ಎಂದ ಕೇಂದ್ರ ಸಚಿವ ಜೋಶಿ ಸಿಡಿ ಸತ್ಯಾಸತ್ಯತೆ ಗೊತ್ತಾಗಲಿ, ತಪ್ಪು ಸಾಬೀತಾದ್ರೆ ಕ್ರಮ ಖಚಿತ. ಇದು ಪಕ್ಷಕ್ಕೆ ಮುಜುಗರ ತರುವ ಸನ್ನಿವೇಶವಾಗಿವೆ. ನೈತಿಕತೆ ಪ್ರಶ್ನೆ ಬರುತ್ತೆ, ನಾಯಕರ ವರ್ತನೆ ಸರಿ ಇರಬೇಕು ಎಂದು ಜೋಶಿ ಹೇಳಿದರು.

‘ದೂರು ನೀಡಿದ್ದವರ ಬಳಿಯಿರುವ ಮಾಹಿತಿ ಪಡೆದಿದ್ದೇವೆ’ ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್​​ ವಿಡಿಯೋ ಕುರಿತು ದಿನೇಶ್ ಕಲ್ಲಹಳ್ಳಿ ಎಂಬುವರು ದೂರು ನೀಡಿದ್ದಾರೆ ಎಂದು ಬೆಂಗಳೂರಿನ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್.ಅನುಚೇತ್​ ಹೇಳಿದ್ದಾರೆ. ದೂರಿನ ಬಗ್ಗೆ ಮೊದಲು ಮಾಹಿತಿ ಪಡೆದುಕೊಳ್ಳುತ್ತೇವೆ. ಇಂತಹ ಪ್ರಕರಣದ ತನಿಖೆಗೆ ನಿಯಮಾವಳಿಯಿದೆ. ದೂರು ನೀಡಿದ್ದವರ ಬಳಿಯಿರುವ ಮಾಹಿತಿ ಪಡೆದಿದ್ದೇವೆ. ಮುಂದಿನ ಕ್ರಮ ಏನು ಮಾಡಬೇಕೆಂದು ನಿರ್ಧರಿಸುತ್ತೇವೆ ಎಂದು ಹೇಳಿದರು.

ದೂರು ನೀಡಿದ್ದ ದಿನೇಶ್​ ಕುಟುಂಬಸ್ಥರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬೇಕು. ಸಂತ್ರಸ್ತೆ ಕುಟುಂಬಸ್ಥರ ಬಗ್ಗೆ ಮಾಹಿತಿ ಪಡೆದು ಮುಂದಿನ ದಿನಗಳಲ್ಲಿ ಸಂಪರ್ಕಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

Published On - 8:24 pm, Tue, 2 March 21

Follow Us
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!