AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPSC Civil Service Exam: ವಯೋಮಿತಿ ಮೀರಿದವರಿಗೆ UPSC ಪರೀಕ್ಷೆ ಬರೆಯಲು ಹೆಚ್ಚುವರಿ ಅವಕಾಶವಿಲ್ಲ: ಕೇಂದ್ರ ಸರ್ಕಾರ

UPSC Civil Service Exam: ನಿಗದಿತ ವಯೋಮಾನ ಮೀರಿದ ಅಭ್ಯರ್ಥಿಗಳಿಗೆ ಪರೀಕ್ಷೆ ಎದುರಿಸಲು ಹೆಚ್ಚುವರಿ ಅವಕಾಶವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್​ಗೆ ಮಾಹಿತಿ ನೀಡಿದೆ.

UPSC Civil Service Exam: ವಯೋಮಿತಿ ಮೀರಿದವರಿಗೆ UPSC ಪರೀಕ್ಷೆ ಬರೆಯಲು ಹೆಚ್ಚುವರಿ ಅವಕಾಶವಿಲ್ಲ: ಕೇಂದ್ರ ಸರ್ಕಾರ
ಸುಪ್ರೀಂ ಕೋರ್ಟ್​
TV9 Web
| Edited By: |

Updated on:Apr 06, 2022 | 8:03 PM

Share

ದೆಹಲಿ: ನಿಗದಿತ ವಯೋಮಾನ ಮೀರಿದ, ಯುಪಿಎಸ್​ಸಿ ನಾಗರಿಕ ಸೇವಾ (UPSC Civil Service Examination) ಅಭ್ಯರ್ಥಿಗಳಿಗೆ ಪರೀಕ್ಷೆ ಎದುರಿಸಲು ಹೆಚ್ಚುವರಿ ಅವಕಾಶ ನೀಡುವ ವಿಚಾರವನ್ನು ಕೇಂದ್ರ ಸರ್ಕಾರ ವಿರೋಧಿಸುತ್ತದೆ ಎಂದು ಸುಪ್ರೀಂ ಕೋರ್ಟ್​ಗೆ ಮಂಗಳವಾರ (ಫೆ. 9) ಹೇಳಿಕೆ ನೀಡಿದೆ. 2020ರಲ್ಲಿ ಕೊವಿಡ್ ಸಾಂಕ್ರಾಮಿಕ ರೋಗದ ಕಾರಣದಿಂದ ಕೊನೆಯ ಬಾರಿ ಪರೀಕ್ಷೆ ಎದುರಿಸಲು ವಿಫಲರಾದವರು ಕೂಡ ವಯಸ್ಸು ಮೀರಿದ್ದರೆ ಪರೀಕ್ಷೆಗೆ ಹಾಜರಾಗುವ ಅವಕಾಶ ನೀಡಲು ಬಯಸುವುದಿಲ್ಲ ಎಂದು ಸರ್ಕಾರ ಕೋರ್ಟ್​ಗೆ ತಿಳಿಸಿದೆ.

ಒಂದು ವೇಳೆ, UPSC Civil Service ಪರೀಕ್ಷೆ ಬರೆಯಲು ಅರ್ಹ ವಯಸ್ಸಿನ ಮಿತಿಯೊಳಗೆ ಅಭ್ಯರ್ಥಿ ಇದ್ದಾರೆ ಎಂದಾದರೆ ಅಂಥವರಿಗೆ ಈ ಬಾರಿ ಪರೀಕ್ಷೆ ಬರೆಯುವ ಅವಕಾಶ ನೀಡಬಹುದು ಎಂದು ಹೇಳಿದೆ. ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿ ಎ.ಎಮ್. ಖನ್ವಿಲ್ಕರ್ ನೇತೃತ್ವದ ನ್ಯಾಯಪೀಠಕ್ಕೆ ಕೇಂದ್ರ ಸರ್ಕಾರ ಈ ಮಾಹಿತಿ ನೀಡಿದೆ.

ಕೊರೊನಾ ಕಾರಣದಿಂದ ಕಳೆದ ಬಾರಿಯ UPSC Civil Service ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದವರಿಗೆ, ಮತ್ತೊಂದು ಅವಕಾಶ ಕೋರಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ಸರ್ಕಾರ ಈ ರೀತಿ ತಿಳಿಸಿದೆ. ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು, ಇದು ಕೊನೆಯ ಕ್ಷಣದಲ್ಲಿ ತಯಾರಾಗಿ ಬರೆಯುವ ಪರೀಕ್ಷೆ ಅಲ್ಲ. ಅಭ್ಯರ್ಥಿಗಳು ವರ್ಷಾನುಗಟ್ಟಲೆ ಈ ಪರೀಕ್ಷೆಗೆ ತಯಾರಾಗುತ್ತಾರೆ. ಹಾಗಾಗಿ, ಬದಲಾವಣೆಯ ಅವಕಾಶ ಇರುವುದಿಲ್ಲ ಎಂದು ಹೇಳಿದ್ದಾರೆ.

ಕೇಂದ್ರ ಲೋಕಸೇವಾ ಆಯೋಗ (Union Public Service Commission – UPSC) ನಡೆಸುವ ನಾಗರಿಕ ಸೇವಾ ಪರೀಕ್ಷೆಗಳಲ್ಲಿ (Civil Service Examination – CSE) ಪಾಲ್ಗೊಳ್ಳಲು 2020 ಕೊನೆಯ ಅವಕಾಶವಾಗಿದ್ದ, ವಯೋಮಿತಿ ಮೀರದ ಅಭ್ಯರ್ಥಿಗಳಿಗೆ ಇನ್ನೊಮ್ಮೆ ಪರೀಕ್ಷೆ ಬರೆಯಲು ಅನುಮತಿ ನೀಡಲು ಕೇಂದ್ರ ಸರ್ಕಾರ ಶುಕ್ರವಾರ (ಫೆ.5) ಒಪ್ಪಿಕೊಂಡಿತ್ತು. ಕೋವಿಡ್-19 ಪಿಡುಗಿನಿಂದಾಗಿ ಪರೀಕ್ಷೆಗೆ ಸರಿಯಾಗಿ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಾಗದ ಸಾವಿರಾರು ಮಂದಿಯ ಉತ್ತಮ ನೌಕರಿ ಕನಸಿಗೆ ಇದರಿಂದ ಮರುಜೀವ ಬಂದಂತೆ ಆಗಿತ್ತು.

ಈ ನಿಯಮ ಸಡಿಲಿಕೆಯು ನಾಗರಿಕ ಸೇವಾ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಅರ್ಹ ಅಭ್ಯರ್ಥಿಗಳಿಗೆ ಇನ್ನೊಂದು ಅವಕಾಶ ಒದಗಿಸಲು ಮಾತ್ರ ಸೀಮಿತವಾಗಿರುತ್ತದೆ. CSE-2021ಕ್ಕೆ ಮಾತ್ರ ಈ ಸಡಿಲಿಕೆ ಊರ್ಜಿತದಲ್ಲಿರುತ್ತದೆ. ನಾಗರಿಕ ಸೇವಾ ಪರೀಕ್ಷೆ ತೆಗೆದುಕೊಳ್ಳಲು 2020 ಕೊನೆಯ ಅವಕಾಶವಾಗಿದ್ದ ಮತ್ತು ವಯೋಮಿತಿ ಮೀರದ ಅಭ್ಯರ್ಥಿಗಳಿಗೆ ಮಾತ್ರ ಈ ವಿನಾಯ್ತಿ ಅನ್ವಯವಾಗುತ್ತದೆ ಎಂದು ಕೇಂದ್ರ ಸರ್ಕಾರವು ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್​ ನೇತೃತ್ವದ ನ್ಯಾಯಪೀಠಕ್ಕೆ ಮಾಹಿತಿ ನೀಡಿತ್ತು.

UPSC CSE ನಾಗರಿಕ ಸೇವಾ ಪರೀಕ್ಷೆ; ಇನ್ನೊಂದು ಅವಕಾಶ ನೀಡಲು ಕೇಂದ್ರ ಸಮ್ಮತಿ

Published On - 11:50 am, Wed, 10 February 21

Follow Us
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ