ಸೆಕೆಂಡ್ ಹ್ಯಾಂಡ್ ಕಾರ್ ವ್ಯಾಪಾರಿಯ ಅಪಹರಣ, ಕೊಲೆ
ಕಲಬುರಗಿ: ಹಣಕಾಸಿನ ವಿಚಾರಕ್ಕೆ ವ್ಯಕ್ತಿಯನ್ನು ಅಪಹರಿಸಿ ಕೊಲೆಗೈದಿರುವ ಘಟನೆ ನಗರದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ನಗರದ ಯಾದುಲ್ಲಾ ಕಾಲೋನಿ ನಿವಾಸಿ ಮೊಹಮ್ಮದ್ ಗೌಸುದ್ದೀನ್(42) ಎಂದು ತಿಳಿದುಬಂದಿದೆ. ಗೌಸುದ್ದೀನ್ ನಗರದಲ್ಲಿ ಸೆಕೆಂಡ್ ಹ್ಯಾಂಡ್ ಕಾರ್ ಡೀಲರ್ ಆಗಿದ್ದನು. ಅಕ್ಟೋಬರ್ 22ರಂದು ನಾಪತ್ತೆಯಾಗಿದ್ದ ಮೊಹಮ್ಮದ್ ಗೌಸುದ್ದೀನ್ನ ಶವ ನಿನ್ನೆ ಕುರಿಕೋಟಾ ಬ್ರಿಡ್ಜ್ ಬಳಿ ಪತ್ತೆಯಾಗಿದೆ. ಗೌಸುದ್ದೀನ್ ಪಾರ್ಟ್ನರ್ಗಳಾದ ಫಯಾಜ್, ನಿಜಾಮ್ ಮತ್ತು ವಾಜಿದ್ ವಿರುದ್ಧ ಅಪಹರಣ ಮತ್ತು ಕೊಲೆಯ ಆರೋಪ ಕೇಳಿಬಂದಿದೆ. ಸದ್ಯ, ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ರೋಜಾ […]

ಕಲಬುರಗಿ: ಹಣಕಾಸಿನ ವಿಚಾರಕ್ಕೆ ವ್ಯಕ್ತಿಯನ್ನು ಅಪಹರಿಸಿ ಕೊಲೆಗೈದಿರುವ ಘಟನೆ ನಗರದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ನಗರದ ಯಾದುಲ್ಲಾ ಕಾಲೋನಿ ನಿವಾಸಿ ಮೊಹಮ್ಮದ್ ಗೌಸುದ್ದೀನ್(42) ಎಂದು ತಿಳಿದುಬಂದಿದೆ.
ಗೌಸುದ್ದೀನ್ ನಗರದಲ್ಲಿ ಸೆಕೆಂಡ್ ಹ್ಯಾಂಡ್ ಕಾರ್ ಡೀಲರ್ ಆಗಿದ್ದನು. ಅಕ್ಟೋಬರ್ 22ರಂದು ನಾಪತ್ತೆಯಾಗಿದ್ದ ಮೊಹಮ್ಮದ್ ಗೌಸುದ್ದೀನ್ನ ಶವ ನಿನ್ನೆ ಕುರಿಕೋಟಾ ಬ್ರಿಡ್ಜ್ ಬಳಿ ಪತ್ತೆಯಾಗಿದೆ.
ಗೌಸುದ್ದೀನ್ ಪಾರ್ಟ್ನರ್ಗಳಾದ ಫಯಾಜ್, ನಿಜಾಮ್ ಮತ್ತು ವಾಜಿದ್ ವಿರುದ್ಧ ಅಪಹರಣ ಮತ್ತು ಕೊಲೆಯ ಆರೋಪ ಕೇಳಿಬಂದಿದೆ. ಸದ್ಯ, ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Follow Us