AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಟಾಚಾರಕ್ಕೆ ಪ್ರವಾಹ ಪರಿಶೀಲನೆ ನಡೆಸಿದ R ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ವರುಣನ ದರ್ಶನ ವಿಕೋಪಕ್ಕೆ ತಿರುಗಿದೆ. ಹೀಗಾಗಿ ಜನ ಸಂಕಷ್ಟದಲ್ಲೇ ಜೀವನ ಸಾಗಿಸುವಂತಾಗಿದೆ. ಬೆಳೆ, ಮನೆ, ರಸ್ತೆ ಎಲ್ಲವೂ ನೀರಿನಲ್ಲಿ ಮುಳುಗಿದೆ. ಆದ ಕಾರಣ ಕಂದಾಯ ಸಚಿವ R. ಅಶೋಕ್ ಪ್ರವಾಹ ಪೀಡಿತ ಪ್ರದೇಶಕ್ಕೆ ಆಗಮಿಸಿದ್ರು. ಆದರೆ ಕಾಟಾಚಾರದ ಪ್ರವಾಹ ಪರಿಶೀಲನೆ ನಡೆಸಿದ್ದಾರೆ ಎಂದು ಸಂತ್ರಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. R.ಅಶೋಕ್ ಕಾಟಾಚಾರದ ಭೇಟಿ: ಸಚಿವ R.ಅಶೋಕ್ ಕಾಟಾಚಾರಕ್ಕೆ ತಮ್ಮ ಪ್ರವಾಸವನ್ನು ಕೈಗೊಂಡಂತಿದೆ. ಏಕೆಂದರೆ ಪ್ರವಾಹದ ಕಾರಣ 50 ಮನೆ ಕುಸಿದಿದ್ರೂ ಒಂದು ಮನೆಗೂ ಸಚಿವರು […]

ಕಾಟಾಚಾರಕ್ಕೆ ಪ್ರವಾಹ ಪರಿಶೀಲನೆ ನಡೆಸಿದ R ಅಶೋಕ್
ಆಯೇಷಾ ಬಾನು
| Edited By: |

Updated on: Oct 19, 2020 | 3:19 PM

Share

ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ವರುಣನ ದರ್ಶನ ವಿಕೋಪಕ್ಕೆ ತಿರುಗಿದೆ. ಹೀಗಾಗಿ ಜನ ಸಂಕಷ್ಟದಲ್ಲೇ ಜೀವನ ಸಾಗಿಸುವಂತಾಗಿದೆ. ಬೆಳೆ, ಮನೆ, ರಸ್ತೆ ಎಲ್ಲವೂ ನೀರಿನಲ್ಲಿ ಮುಳುಗಿದೆ. ಆದ ಕಾರಣ ಕಂದಾಯ ಸಚಿವ R. ಅಶೋಕ್ ಪ್ರವಾಹ ಪೀಡಿತ ಪ್ರದೇಶಕ್ಕೆ ಆಗಮಿಸಿದ್ರು. ಆದರೆ ಕಾಟಾಚಾರದ ಪ್ರವಾಹ ಪರಿಶೀಲನೆ ನಡೆಸಿದ್ದಾರೆ ಎಂದು ಸಂತ್ರಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

R.ಅಶೋಕ್ ಕಾಟಾಚಾರದ ಭೇಟಿ: ಸಚಿವ R.ಅಶೋಕ್ ಕಾಟಾಚಾರಕ್ಕೆ ತಮ್ಮ ಪ್ರವಾಸವನ್ನು ಕೈಗೊಂಡಂತಿದೆ. ಏಕೆಂದರೆ ಪ್ರವಾಹದ ಕಾರಣ 50 ಮನೆ ಕುಸಿದಿದ್ರೂ ಒಂದು ಮನೆಗೂ ಸಚಿವರು ಭೇಟಿ ನೀಡಿಲ್ಲ. ರಸ್ತೆ ಪಕ್ಕದ ನಾಲಾ, ಗ್ಯಾರೇಜ್ ಪರಿಶೀಲಿಸಿ ಚಿಕ್ಕೋಡಿಯತ್ತ ತೆರಳಿದ್ದಾರೆ. ಮಳೆಯಿಂದ ಗ್ಯಾರೇಜ್ ಕುಸಿದು ವ್ಯಕ್ತಿ ಮೃತಪಟ್ಟಿದ್ದರು. ಕುಸಿದ ಗ್ಯಾರೇಜ್ ಸ್ಥಳಕ್ಕೆ ಭೇಟಿ ನೀಡಿ ಅಶೋಕ್ ತೆರಳಿದ್ದಾರೆ. ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿಲ್ಲ.

ಹುಕ್ಕೇರಿಯ ಕಂಬಾರಗಲ್ಲಿಯಲ್ಲಿ ಅತಿ ಹೆಚ್ಚು ಹಾನಿ ಆಗಿತ್ತು. ಸಚಿವರು ನಮ್ಮ ಬಳಿ ಬರ್ತಾರೆ. ನಮ್ಮ ಕಷ್ಟಗಳನ್ನು ಆಲಿಸುತ್ತಾರೆ ಎಂದು ಕಾದು ಕುಳಿತಿದ್ದ ಜನರಿಗೆ ನಿರಾಸೆಯಾಗಿದೆ. ನಾನೂ ಕೂಡ ಪ್ರವಾಹದ ಸಮಯದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದೆ ಎಂದು ಹೇಳಿಕೊಳ್ಳುವುದಕ್ಕಾಗಿ ಬಂದು ಹೋದಂತೆ ಬಂದು ಹೋಗಿದ್ದಾರೆ. R. ಅಶೋಕ್ ಭೇಟಿ ವ್ಯರ್ಥ ಎಂದು ಸಂತ್ರಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಸಚಿವ ಅಶೋಕಗೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಶಾಸಕ ಉಮೇಶ ಕತ್ತಿ ಸಾಥ್ ನೀಡಿದ್ದರು.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್